ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ

ಸಿದ್ದು ಸರ್ಕಾರ ಅಸ್ಥಿರಕ್ಕೆ ವಿಪಕ್ಷಗಳ ಕುತಂತ್ರ ಖಂಡಿಸಿ ನಾಳೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ: ಎಂ.ಎನ್.ಮದರಿ


ಮುದ್ದೇಬಿಹಾಳ : ಮುಡಾ ಹಗರಣ ಹಿನ್ನೆಲೆ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಶೋಕಾಸ್ ನೋಟಿಸ್‌ನ್ನು ಖಂಡಿಸಿ ನೋಟಿಸ್‌ನ್ನು ಹಿಂಪಡೆಯುವಂತೆ ಆಗ್ರಹಿಸಿ ಅಹಿಂದ ಒಕ್ಕೂಟದ ನೇತೃತ್ವದಲ್ಲಿ ಆ.6ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅಹಿಂದ ಒಕ್ಕೂಟದ ಮುಖಂಡ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ಎನ್.ಮದರಿ ಹೇಳಿದರು.

ಪಟ್ಟಣದ ಹುಡ್ಕೋದಲ್ಲಿರುವ ಪಲ್ಲವಿ ಹೊಟೇಲ್‌ನಲ್ಲಿ ಸೋಮವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮುಡಾ ಹಗರಣದಲ್ಲಿ ವಿನಾಕಾರಣ ಸಿದ್ಧರಾಮಯ್ಯನವರ ಹೆಸರು ಎಳೆದು ತಂದು ಅವರಿಗೆ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಬಿಜೆಪಿಯ ಏಜೆಂಟ ಆಗಿ ಅಬ್ರಾಹಂ ವರ್ತಿಸುತ್ತಿದ್ದಾರೆ. ಸಿದ್ಧರಾಮಯ್ಯ ವರ್ಚಸ್ಸು ತಾಳದೇ ಬಿಜೆಪಿಗರು ಕುತಂತ್ರ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಏನಾದರೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಲ್ಲಿ ಮತ್ತಷ್ಟು ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಪಕ್ಷದ ನಾಯಕರು ಪಾದಯಾತ್ರೆ ನಡೆಸುತ್ತಿರುವುದು ಅಹಿಂದ ವರ್ಗದ ನಾಯಕರಾಗಿರುವ ಸಿಎಂ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಕೆಳಗಿಳಿಸಲು ಹುನ್ನಾರ ನಡೆಸಿದ್ದಾರೆ. ರಾಜ್ಯಪಾಲರ ಸಂವಿಧಾನ ಬಾಹಿರ ನಡೆಯನ್ನು ಖಂಡಿಸಿ ಆ.6 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟçಪತಿಗೆ ಮನವಿ ಪತ್ರ ಸಲ್ಲಿಸಲಾಗುತ್ತದೆ ಎಂದು ದೂರಿದರು.

ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ ಮಾತನಾಡಿ, ಚುನಾವಣೆಯಲ್ಲಿ ಬಹುಮತದಿಂದ ಸರ್ಕಾರವನ್ನು ಇಳಿಸಬೇಕೇ ಹೊರತು ರಾಜ್ಯಪಾಲರ ನೋಟಿಸ್‌ನಿಂದಲ್ಲ. ಆದರೆ ಬಹುಮತವಿರುವ ಸಿದ್ದರಾಮಯ್ಯನವರ ಸರ್ಕಾರವನ್ನು ಅಸ್ಥಿರಗೊಳಿಸಲು ಸಿಎಂಗೆ ನೋಟಿಸ ಕೊಡುವುದರ ಹಿಂದೆ ಬಿಜೆಪಿ, ಜೆಡಿಎಸ್ ಪಕ್ಷದ ಪಿತೂರಿ ಕೆಲಸ ಮಾಡುತ್ತಿದೆ. ಸಿದ್ಧರಾಮಯ್ಯನವರ ರಾಜಕೀಯ ಜೀವನದಲ್ಲಿ ಶಾಸಕರಾಗಿ, ಸಚಿವರಾಗಿ, ಉಪ ಮುಖ್ಯಮಂತ್ರಿಯಾಗಿ, ಸಿಎಂ ಆಗಿರುವ ಕಾಲದಲ್ಲಿ ಅಧಿಕಾರ ದುರುಪಯೋಗ, ಹಗರಣಗಳು ನಡೆದಿರುವ ನಿದರ್ಶನಗಳಿಲ್ಲ. ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ ಎಂದರು.

ಅಹಿಂದ ಮುಖಂಡ ವಾಯ್.ಎಚ್.ವಿಜಯಕರ್ ಮಾತನಾಡಿ, ಹಿಂದೆ ಎಸ್.ಆರ್.ಬೊಮ್ಮಾಯಿ ಇದೇ ರೀತಿ ರಾಜಭವನದ ಕಿರುಕುಳ ನಡೆದು ರಾಜೀನಾಮೆ ಕೊಡಬೇಕಾಯಿತು. ಸರ್ವೋಚ್ಚ ನ್ಯಾಯಾಲಯ ರಾಜಭವನಕ್ಕಿಂತ ಶಾಸನಸಭೆ ಸರ್ವೋಚ್ಛ ಎಂದು ತೀರ್ಪು ನೀಡಿತ್ತು. ಪ್ರಜಾಪ್ರಭುತ್ವದಲ್ಲಿ ಶಾಸನಸಭೆ ಸಂವಿಧಾನ ಬದ್ಧವಾಗಿ ಸರ್ವೋಚ್ಚ. ಶಾಸನ ಸಭೆಯಲ್ಲಿ ವಿಶೇಷ ಅಧಿವೇಶನವನ್ನು ನಡೆಸಿ ಮುಖ್ಯಮಂತ್ರಿಗಳ ಪಾತ್ರದ ಬಗ್ಗೆ ಸಮಗ್ರವಾಗಿ ಚರ್ಚೆ ಮಾಡಬಹುದಾಗಿತ್ತು. ಆದರೆ ವಿಧಾನಸೌಧದಲ್ಲಿ ನಡೆದ ಅಧಿವೇಶನದ ಸಮಯದಲ್ಲಿ ಕಾಲಹರಣ ಮಾಡಿ ಹಗಲು-ರಾತ್ರಿ ಧರಣಿ ಮಾಡಿ ತಾಳ, ತಂಬೂರಿಯನ್ನು ಹಿಡಿದು ನರ್ತನ ಮಾಡಿ ಸದನದ ಗೌರವವನ್ನು ಹಾಳು ಮಾಡಿ ಚರ್ಚೆ ಇಲ್ಲದೆ ಒಂದು ದಿನ ಮುಂಚಿತವಾಗಿಯೇ ಸದನವನ್ನು ಮುಂದೂಡಬೇಕಾಯಿತು ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅಹಿಂದ ಮುಖಂಡರಾದ ಜಿಪಂ ಮಾಜಿ ಸದಸ್ಯ ಬಿ.ಎಸ್.ಶಿರೋಳ, ದಾದಾ ಎತ್ತಿನಮನಿ, ಬಾಬಾ ಯಕೀನ್, ಪುರಸಭೆ ನಾಮನಿರ್ದೇಶಿತ ಸದಸ್ಯ ಸಂತೋಷ ನಾಯ್ಕೋಡಿ, ಸಂಗಣ್ಣ ಮೇಲಿನಮನಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಹಣಮಂತ ಮೇಟಿ, ಮಹಾದೇವ ಪೂಜಾರಿ, ಮುನ್ನಾ ಸಗರ, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಕೆ.ಹಳೇಮನಿ ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ