ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಇರಾನ್, ರಷ್ಯಾ ಬೆಲೆ ಏರಿಕೆ ಮಾಡಿದರೂ ನಮ್ಮಲ್ಲಿ ಸಿಲಿಂಡರ್ ಸಿಗದೇ ಇರುವ ಪರಿಸ್ಥಿತಿ ತಂದಿಟ್ಟಿದ್ದಾರೆ.ಎರಡು ಸಾವಿರ ರೂ. ಕೊಟ್ಟರೂ ಸಿಲಿಂಡರ್ ಇಂದು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ.ಇವರು ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯಲು ಅರ್ಹರಲ್ಲ.ರಾಜೀನಾಮೆ ಕೊಟ್ಟು ಮನೆಯಲ್ಲಿ ಕುಳಿತುಕೊಳ್ಳಿ ಎಂದು ಆಗ್ರಹಿಸಿದರು.

ಗ್ಯಾರಂಟಿ ಸಮೀತಿ ಜಿಲ್ಲಾ ಉಪಾಧ್ಯಕ್ಷ ಸದ್ದಾಂ ಕುಂಟೋಜಿ ಮಾತನಾಡಿ, ದೇಶದ ಪ್ರಧಾನ ಮಂತ್ರಿ ನಮ್ಮ ರಾಷ್ಟçದ ಮರ್ಯಾದೆಯನ್ನು ಅಂತರಾಷ್ಟಿçÃಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ.ದೇಶದ ನಾಗರಿಕರಿಗೆ ತಡೆಯಿಲ್ಲದಂತೆ ಸಿಲಿಂಡರ್ ಗ್ಯಾಸ್ ಪೂರೈಸಲು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಮೋದಿ ಮೋದಿ ಎಂದು ಜಪಿಸುವ ಬಿಜೆಪಿಯ ಅಂಧ ಭಕ್ತರು ಈಗ ಎಲ್ಲಿದ್ದಾರೆ ? ಮೋದಿ ಮಾಡುತ್ತಿರುವ ಕೆಲಸಗಳನ್ನು ಅವರು ತಿಳಿದುಕೊಳ್ಳಬೇಕು.ಮೋದಿ ಚಹಾ ಮಾರಿದ್ದಾರೋ ಗೊತ್ತಿಲ್ಲ.ಆದರೆ ದೇಶವನ್ನು ಮಾರುವುದಂತೂ ಗ್ಯಾರಂಟಿ ಎಂದು ಟೀಕಿಸಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಕ್ಷತಾ ಚಲವಾದಿ,ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಬಸವರಾಜ ಭಜಂತ್ರಿ, ಮಹ್ಮದರಫೀಕ ಶಿರೋಳ,ರಾಮಣ್ಣ ರಾಜನಾಳ, ರಾಮಣ್ಣ ನಾಯಕಮಕ್ಕಳ,ಲಕ್ಷö್ಮಣ ಲಮಾಣಿ, ಅಬ್ದುಲಸಲಾಂ ಮುಲ್ಲಾ, ಸಮೀರ ದ್ರಾಕ್ಷಿ,ಸುಜಾತಾ ಸಿಂಧೆ, ಮಾಬುಬಿ ಬಾಗವಾನ,ಶೋಭಾ ಶೆಳ್ಳಗಿ, ನೀಲಮ್ಮ ಚಲವಾದಿ,ಕಮಲಾ ಭಜಂತ್ರಿ, ಶಿವಲೀಲಾ ಬಸರಕೋಡ,ಮಮ್ತಾಜ ಮುÄಲ್ಲಾ ಮೊದಲಾದವರು ಇದ್ದರು.ಇದೇ ವೇಳೆ ಖಾಲಿ ಸಿಲಿಂಡರ್‌ಗಳಿಗೆ ಪೂಜೆ ಸಲ್ಲಿಸಿ ವೃತ್ತದಲ್ಲಿಯೆ ಕಟ್ಟಿಗೆಗಳನ್ನು ಒಲೆಯಲ್ಲಿಟ್ಟು ರೊಟ್ಟಿ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು