ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಗುರುವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಇರಾನ್, ರಷ್ಯಾ ಬೆಲೆ ಏರಿಕೆ ಮಾಡಿದರೂ ನಮ್ಮಲ್ಲಿ ಸಿಲಿಂಡರ್ ಸಿಗದೇ ಇರುವ ಪರಿಸ್ಥಿತಿ ತಂದಿಟ್ಟಿದ್ದಾರೆ.ಎರಡು ಸಾವಿರ ರೂ. ಕೊಟ್ಟರೂ ಸಿಲಿಂಡರ್ ಇಂದು ದೊರೆಯದ ಪರಿಸ್ಥಿತಿ ನಿರ್ಮಾಣವಾಗಿದೆ.ಇವರು ಪ್ರಧಾನಿ ಹುದ್ದೆಯಲ್ಲಿ ಮುಂದುವರೆಯಲು ಅರ್ಹರಲ್ಲ.ರಾಜೀನಾಮೆ ಕೊಟ್ಟು ಮನೆಯಲ್ಲಿ ಕುಳಿತುಕೊಳ್ಳಿ ಎಂದು ಆಗ್ರಹಿಸಿದರು.

ಗ್ಯಾರಂಟಿ ಸಮೀತಿ ಜಿಲ್ಲಾ ಉಪಾಧ್ಯಕ್ಷ ಸದ್ದಾಂ ಕುಂಟೋಜಿ ಮಾತನಾಡಿ, ದೇಶದ ಪ್ರಧಾನ ಮಂತ್ರಿ ನಮ್ಮ ರಾಷ್ಟçದ ಮರ್ಯಾದೆಯನ್ನು ಅಂತರಾಷ್ಟಿçÃಯ ಮಟ್ಟದಲ್ಲಿ ಹರಾಜು ಹಾಕಿದ್ದಾರೆ.ದೇಶದ ನಾಗರಿಕರಿಗೆ ತಡೆಯಿಲ್ಲದಂತೆ ಸಿಲಿಂಡರ್ ಗ್ಯಾಸ್ ಪೂರೈಸಲು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಗ್ಯಾರಂಟಿ ಸಮೀತಿ ಸದಸ್ಯ ಬುಡ್ಡೇಸಾಬ ಚಪ್ಪರಬಂದ ಮಾತನಾಡಿ, ಮೋದಿ ಮೋದಿ ಎಂದು ಜಪಿಸುವ ಬಿಜೆಪಿಯ ಅಂಧ ಭಕ್ತರು ಈಗ ಎಲ್ಲಿದ್ದಾರೆ ? ಮೋದಿ ಮಾಡುತ್ತಿರುವ ಕೆಲಸಗಳನ್ನು ಅವರು ತಿಳಿದುಕೊಳ್ಳಬೇಕು.ಮೋದಿ ಚಹಾ ಮಾರಿದ್ದಾರೋ ಗೊತ್ತಿಲ್ಲ.ಆದರೆ ದೇಶವನ್ನು ಮಾರುವುದಂತೂ ಗ್ಯಾರಂಟಿ ಎಂದು ಟೀಕಿಸಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಕ್ಷತಾ ಚಲವಾದಿ,ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಬಸವರಾಜ ಭಜಂತ್ರಿ, ಮಹ್ಮದರಫೀಕ ಶಿರೋಳ,ರಾಮಣ್ಣ ರಾಜನಾಳ, ರಾಮಣ್ಣ ನಾಯಕಮಕ್ಕಳ,ಲಕ್ಷö್ಮಣ ಲಮಾಣಿ, ಅಬ್ದುಲಸಲಾಂ ಮುಲ್ಲಾ, ಸಮೀರ ದ್ರಾಕ್ಷಿ,ಸುಜಾತಾ ಸಿಂಧೆ, ಮಾಬುಬಿ ಬಾಗವಾನ,ಶೋಭಾ ಶೆಳ್ಳಗಿ, ನೀಲಮ್ಮ ಚಲವಾದಿ,ಕಮಲಾ ಭಜಂತ್ರಿ, ಶಿವಲೀಲಾ ಬಸರಕೋಡ,ಮಮ್ತಾಜ ಮುÄಲ್ಲಾ ಮೊದಲಾದವರು ಇದ್ದರು.ಇದೇ ವೇಳೆ ಖಾಲಿ ಸಿಲಿಂಡರ್‌ಗಳಿಗೆ ಪೂಜೆ ಸಲ್ಲಿಸಿ ವೃತ್ತದಲ್ಲಿಯೆ ಕಟ್ಟಿಗೆಗಳನ್ನು ಒಲೆಯಲ್ಲಿಟ್ಟು ರೊಟ್ಟಿ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ