Protest by pro-Dalit coalition

ದಲಿತಪರ ಒಕ್ಕೂಟದಿಂದ ಪ್ರತಿಭಟನೆ, ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ (ವಿಡಿಯೋ ನೋಡಿ)

ದಲಿತಪರ ಒಕ್ಕೂಟದಿಂದ ಪ್ರತಿಭಟನೆ, ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ (ವಿಡಿಯೋ ನೋಡಿ)

ಮುದ್ದೇಬಿಹಾಳ : ದಲಿತ ಜನಾಂಗದವರಿಗೆ ಜಾತಿ ನಿಂದನೆ ಮಾಡಿದ ಆಪಾದನೆ ಎದರಿಸುತ್ತಿರುವ ಬಿಜೆಪಿಯ ಮುನಿರತ್ನ ನಾಯ್ಡು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂಬುದು ಸೇರಿದಂತೆ 10 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ತಮಟೆ ಬಾರಿಸುತ್ತಾ ದಲಿತ ಜನಾಂಗದವರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡರಾದ ತಿಪ್ಪಣ್ಣ ದೊಡಮನಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ದಲಿತರ ಜಾತಿ ನಿಂದನೆ ಮಾಡಿದ್ದು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಡಿ.ಬಿ.ಮುದೂರ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ತಾರತಮ್ಯ ಎಸಗದೇ ಸರ್ಕಾರದ ಸೌಲಭ್ಯಗಳು ಎಲ್ಲ ದಲಿತ ಜನಾಂಗದವರಿಗೆ ಸರಿಯಾಗಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

ಮುಖಂಡ ಹರೀಶ ನಾಟೀಕಾರ, ಪ್ರಕಾಶ ಚಲವಾದಿ(ಸರೂರ) ಮಾತನಾಡಿ, ಬ.ಬಾಗೇವಾಡಿ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಅವರು ದಲಿತ ಜನಾಂಗದವರ ಮೇಲೆ ವಿವಿಧ ರೀತಿಯ ದೌರ್ಜನ್ಯದ 21 ಪ್ರಕರಣಗಳು ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯ ಸಿಪಿಐ, ಪಿಎಸ್‌ಐ,ಡಿವೈಎಸ್ಪಿ ಅವರಿಗೆ ಲಂಚದ ರೂಪದಲ್ಲಿ ಹಣವನ್ನು ಪೋನಪೇ ಮೂಲಕ ಮಾಡಿಸಿಕೊಂಡಿದ್ದು ಅದನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಇನ್ನುಳಿದಂತೆ ತಾಳಿಕೋಟಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಸಾವಿಗೆ ಕಾರಣರಾಗಿರುವವರ ಮೇಲೆ ಕ್ರಮ ಜರುಗಿಸಬೇಕು.ಗಂಗಾವತಿ ತಾಲ್ಲೂಕು ಸಂಕನಾಳ, ಬಾದಾಮಿ, ಹುಣಸಗಿ ತಾಲ್ಲೂಕು ಬಪ್ಪರಗಿಯಲ್ಲಿ ದಲಿತ ಜನಾಂಗದವರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಮುಖಂಡ ಚೆನ್ನಪ್ಪ ವಿಜಯಕರ್,ಸಿದ್ದು ಕಟ್ಟಿಮನಿ, ದೇವರಾಜ ಹಂಗರಗಿ ಮಾತನಾಡಿದರು.

ಗ್ರೇಡ್-2 ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

Protest by pro-Dalit coalition

ಪ್ರತಿಭಟನೆಯಲ್ಲಿ ದೌರ್ಜನ್ಯ ತಡೆ ಸಮಿತಿ ಸದಸ್ಯ ಮಲ್ಲು ತಳವಾರ, ಮುಖಂಡರಾದ ಪರಶುರಾಮ ನಾಲತವಾಡ, ಪ್ರಶಾಂತ ಕಾಳೆ, ಪರಶುರಾಮ ಮುರಾಳ, ಬಸವರಾಜ ಸರೂರ, ಭಗವಂತ ಕಬಾಡೆ,ಬಲಭೀಮ ನಾಯ್ಕಮಕ್ಕಳ, ಮಹೆಬೂಬ ಕುಂಟೋಜಿ, ರಾಮಣ್ಣ ರಾಜನಾಳ, ಮುತ್ತು ಚಲವಾದಿ, ಪ್ರಚಂಡಪ್ಪ ಚಲವಾದಿ, ಆನಂದ ಮುದೂರು, ಪುರಸಭೆ ಸದಸ್ಯ ಶಿವು ಶಿವಪೂರ, ಮಂಜುನಾಥ ಕಟ್ಟಿಮನಿ ಪಾಲ್ಗೊಂಡಿದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ