Protest by pro-Dalit coalition

ದಲಿತಪರ ಒಕ್ಕೂಟದಿಂದ ಪ್ರತಿಭಟನೆ, ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ (ವಿಡಿಯೋ ನೋಡಿ)

ದಲಿತಪರ ಒಕ್ಕೂಟದಿಂದ ಪ್ರತಿಭಟನೆ, ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ (ವಿಡಿಯೋ ನೋಡಿ)

ಮುದ್ದೇಬಿಹಾಳ : ದಲಿತ ಜನಾಂಗದವರಿಗೆ ಜಾತಿ ನಿಂದನೆ ಮಾಡಿದ ಆಪಾದನೆ ಎದರಿಸುತ್ತಿರುವ ಬಿಜೆಪಿಯ ಮುನಿರತ್ನ ನಾಯ್ಡು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂಬುದು ಸೇರಿದಂತೆ 10 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ತಮಟೆ ಬಾರಿಸುತ್ತಾ ದಲಿತ ಜನಾಂಗದವರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡರಾದ ತಿಪ್ಪಣ್ಣ ದೊಡಮನಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ದಲಿತರ ಜಾತಿ ನಿಂದನೆ ಮಾಡಿದ್ದು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಡಿ.ಬಿ.ಮುದೂರ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ತಾರತಮ್ಯ ಎಸಗದೇ ಸರ್ಕಾರದ ಸೌಲಭ್ಯಗಳು ಎಲ್ಲ ದಲಿತ ಜನಾಂಗದವರಿಗೆ ಸರಿಯಾಗಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

ಮುಖಂಡ ಹರೀಶ ನಾಟೀಕಾರ, ಪ್ರಕಾಶ ಚಲವಾದಿ(ಸರೂರ) ಮಾತನಾಡಿ, ಬ.ಬಾಗೇವಾಡಿ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಅವರು ದಲಿತ ಜನಾಂಗದವರ ಮೇಲೆ ವಿವಿಧ ರೀತಿಯ ದೌರ್ಜನ್ಯದ 21 ಪ್ರಕರಣಗಳು ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯ ಸಿಪಿಐ, ಪಿಎಸ್‌ಐ,ಡಿವೈಎಸ್ಪಿ ಅವರಿಗೆ ಲಂಚದ ರೂಪದಲ್ಲಿ ಹಣವನ್ನು ಪೋನಪೇ ಮೂಲಕ ಮಾಡಿಸಿಕೊಂಡಿದ್ದು ಅದನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಇನ್ನುಳಿದಂತೆ ತಾಳಿಕೋಟಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಸಾವಿಗೆ ಕಾರಣರಾಗಿರುವವರ ಮೇಲೆ ಕ್ರಮ ಜರುಗಿಸಬೇಕು.ಗಂಗಾವತಿ ತಾಲ್ಲೂಕು ಸಂಕನಾಳ, ಬಾದಾಮಿ, ಹುಣಸಗಿ ತಾಲ್ಲೂಕು ಬಪ್ಪರಗಿಯಲ್ಲಿ ದಲಿತ ಜನಾಂಗದವರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಮುಖಂಡ ಚೆನ್ನಪ್ಪ ವಿಜಯಕರ್,ಸಿದ್ದು ಕಟ್ಟಿಮನಿ, ದೇವರಾಜ ಹಂಗರಗಿ ಮಾತನಾಡಿದರು.

ಗ್ರೇಡ್-2 ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

Protest by pro-Dalit coalition

ಪ್ರತಿಭಟನೆಯಲ್ಲಿ ದೌರ್ಜನ್ಯ ತಡೆ ಸಮಿತಿ ಸದಸ್ಯ ಮಲ್ಲು ತಳವಾರ, ಮುಖಂಡರಾದ ಪರಶುರಾಮ ನಾಲತವಾಡ, ಪ್ರಶಾಂತ ಕಾಳೆ, ಪರಶುರಾಮ ಮುರಾಳ, ಬಸವರಾಜ ಸರೂರ, ಭಗವಂತ ಕಬಾಡೆ,ಬಲಭೀಮ ನಾಯ್ಕಮಕ್ಕಳ, ಮಹೆಬೂಬ ಕುಂಟೋಜಿ, ರಾಮಣ್ಣ ರಾಜನಾಳ, ಮುತ್ತು ಚಲವಾದಿ, ಪ್ರಚಂಡಪ್ಪ ಚಲವಾದಿ, ಆನಂದ ಮುದೂರು, ಪುರಸಭೆ ಸದಸ್ಯ ಶಿವು ಶಿವಪೂರ, ಮಂಜುನಾಥ ಕಟ್ಟಿಮನಿ ಪಾಲ್ಗೊಂಡಿದ್ದರು.

Latest News

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಅವೈಜ್ಞಾನಿಕ ಆದಾಯ ಮಿತಿ ರದ್ದುಗೊಳಿಸಲು ವಿಕಲಚೇತನರ ಆಗ್ರಹ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸರಕಾರ ಸಾಮಾಜಿಕ ಭದ್ರತೆ ಯೋಜನೆಗಳ ಅಡಿ ನೀಡಲಾಗುವ ಮಾಶಾಸನಕ್ಕೆ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಎಂಎಲ್‌ಎ,ಮಂತ್ರಿಗಳ ವೇತನ,ಭತ್ಯೆ ಕಡಿತಗೊಳಿಸಿ-ಎ.ಎಸ್.ಪಾಟೀಲ್ ನಡಹಳ್ಳಿ

ಮುದ್ದೇಬಿಹಾಳ : ಹಿಂದೆoದೂ ಕಂಡರಿಯದoತ ಭೀಕರ ಬರಗಾಲ ಈ ವರ್ಷ ಬಂದಿದ್ದು ರೈತರ ಖಾತೆಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಶನಿವಾರದಿಂದ ಕೈಗೊಂಡಿದ್ದು ಸಂಕಲ್ಪಪೂರ್ವ ಚಾತುರ್ಮಾಸ್ಯ ದೀಕ್ಷೆ ತನ್ನಿಮಿತ್ಯ ಶ್ರೀಗಳನ್ನು ಚಾತುರ್ಮಾಸ್ಯ ಮಹೋತ್ಸವ ಸಮೀತಿ ಹಾಗೂ ಸಮಸ್ತ ವಿಪ್ರ ಸಮಾಜದ ಬಾಂಧವರು ಭವ್ಯ ಮೆರವಣಿಗೆ ಮೂಲಕ ಶಿವ ಚಿದಂಬರ ದೇವಸ್ಥಾನಕ್ಕೆ ಕರೆದೊಯ್ಯರು. ಪಟ್ಟಣದ ರಾಘವೇಂದ್ರ ಮಠದಿಂದ ಪೂಜ್ಯರನ್ನು ಅಲಂಕೃತ ಸಾರೋಟಿನಲ್ಲಿ ಕೂರಿಸಿ ಸಕಲ ವಾದ್ಯವೈಭವಗಳೊಂದಿಗೆ ಮೆರವಣಿಗೆ ನಡೆಸಲಾಯಿತು.ಮೆರವಣಿಗೆಯಲ್ಲಿ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ ಬುಡಕಟ್ಟು ದಿನಾಚರಣೆ ಸಮಾರಂಭ ಆ.8 ರಂದು ಮದ್ಯಾಹ್ನ 12.30ಕ್ಕೆ ಪಟ್ಟಣದ ಎಂಜಿಎoಕೆ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪರಿಷತ್ ರಾಜ್ಯಾಧ್ಯಕ್ಷ ಜಾನಪದ ಎಸ್.ಬಾಲಾಜಿ ಉದ್ಘಾಟಿಸುವರು.ಎಂಜಿಎAಕೆ ಸಂಸ್ಥೆಯ ಅಧ್ಯಕ್ಷ ಮನೋಹರ ಕೋರಿ ಉಪಸ್ಥಿತರಿರುವರು.ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಬಾಗಲಕೋಟ ಕಜಾಪ ಜಿಲ್ಲಾಧ್ಯಕ್ಷ ಡಿ.ಎಂ.ಸಾಹುಕಾರ ಪ್ರಾಸ್ತಾವಿಕ ನುಡಿಗಳನ್ನಾಡುವರು. ಕಜಾಪ ಜಿಲ್ಲಾ ಸಂಚಾಲಕ ಪುಂಡಲೀಕ ಮುರಾಳ