Protest by pro-Dalit coalition

ದಲಿತಪರ ಒಕ್ಕೂಟದಿಂದ ಪ್ರತಿಭಟನೆ, ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ (ವಿಡಿಯೋ ನೋಡಿ)

ದಲಿತಪರ ಒಕ್ಕೂಟದಿಂದ ಪ್ರತಿಭಟನೆ, ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ (ವಿಡಿಯೋ ನೋಡಿ)

ಮುದ್ದೇಬಿಹಾಳ : ದಲಿತ ಜನಾಂಗದವರಿಗೆ ಜಾತಿ ನಿಂದನೆ ಮಾಡಿದ ಆಪಾದನೆ ಎದರಿಸುತ್ತಿರುವ ಬಿಜೆಪಿಯ ಮುನಿರತ್ನ ನಾಯ್ಡು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂಬುದು ಸೇರಿದಂತೆ 10 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ತಮಟೆ ಬಾರಿಸುತ್ತಾ ದಲಿತ ಜನಾಂಗದವರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡರಾದ ತಿಪ್ಪಣ್ಣ ದೊಡಮನಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ದಲಿತರ ಜಾತಿ ನಿಂದನೆ ಮಾಡಿದ್ದು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಡಿ.ಬಿ.ಮುದೂರ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ತಾರತಮ್ಯ ಎಸಗದೇ ಸರ್ಕಾರದ ಸೌಲಭ್ಯಗಳು ಎಲ್ಲ ದಲಿತ ಜನಾಂಗದವರಿಗೆ ಸರಿಯಾಗಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

ಮುಖಂಡ ಹರೀಶ ನಾಟೀಕಾರ, ಪ್ರಕಾಶ ಚಲವಾದಿ(ಸರೂರ) ಮಾತನಾಡಿ, ಬ.ಬಾಗೇವಾಡಿ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಅವರು ದಲಿತ ಜನಾಂಗದವರ ಮೇಲೆ ವಿವಿಧ ರೀತಿಯ ದೌರ್ಜನ್ಯದ 21 ಪ್ರಕರಣಗಳು ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯ ಸಿಪಿಐ, ಪಿಎಸ್‌ಐ,ಡಿವೈಎಸ್ಪಿ ಅವರಿಗೆ ಲಂಚದ ರೂಪದಲ್ಲಿ ಹಣವನ್ನು ಪೋನಪೇ ಮೂಲಕ ಮಾಡಿಸಿಕೊಂಡಿದ್ದು ಅದನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಇನ್ನುಳಿದಂತೆ ತಾಳಿಕೋಟಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಸಾವಿಗೆ ಕಾರಣರಾಗಿರುವವರ ಮೇಲೆ ಕ್ರಮ ಜರುಗಿಸಬೇಕು.ಗಂಗಾವತಿ ತಾಲ್ಲೂಕು ಸಂಕನಾಳ, ಬಾದಾಮಿ, ಹುಣಸಗಿ ತಾಲ್ಲೂಕು ಬಪ್ಪರಗಿಯಲ್ಲಿ ದಲಿತ ಜನಾಂಗದವರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಮುಖಂಡ ಚೆನ್ನಪ್ಪ ವಿಜಯಕರ್,ಸಿದ್ದು ಕಟ್ಟಿಮನಿ, ದೇವರಾಜ ಹಂಗರಗಿ ಮಾತನಾಡಿದರು.

ಗ್ರೇಡ್-2 ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

Protest by pro-Dalit coalition

ಪ್ರತಿಭಟನೆಯಲ್ಲಿ ದೌರ್ಜನ್ಯ ತಡೆ ಸಮಿತಿ ಸದಸ್ಯ ಮಲ್ಲು ತಳವಾರ, ಮುಖಂಡರಾದ ಪರಶುರಾಮ ನಾಲತವಾಡ, ಪ್ರಶಾಂತ ಕಾಳೆ, ಪರಶುರಾಮ ಮುರಾಳ, ಬಸವರಾಜ ಸರೂರ, ಭಗವಂತ ಕಬಾಡೆ,ಬಲಭೀಮ ನಾಯ್ಕಮಕ್ಕಳ, ಮಹೆಬೂಬ ಕುಂಟೋಜಿ, ರಾಮಣ್ಣ ರಾಜನಾಳ, ಮುತ್ತು ಚಲವಾದಿ, ಪ್ರಚಂಡಪ್ಪ ಚಲವಾದಿ, ಆನಂದ ಮುದೂರು, ಪುರಸಭೆ ಸದಸ್ಯ ಶಿವು ಶಿವಪೂರ, ಮಂಜುನಾಥ ಕಟ್ಟಿಮನಿ ಪಾಲ್ಗೊಂಡಿದ್ದರು.

Latest News

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಐದು ವರ್ಷದ ಮಗು ಸೇರಿ ಮೂವರು ಮಕ್ಕಳಿಗೆ ಕಚ್ಚಿದ ಬೀದಿ ನಾಯಿ..!

ಮುದ್ದೇಬಿಹಾಳ : ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮೀತಿ ಮೀರಿದ್ದು ಭಾನುವಾರ ಪಿಲೇಕೆಮ್ಮ ನಗರದ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ  ಉತ್ತಮ ಪ್ರತಿಕ್ರಿಯೆ;                                                                                ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಸಚಿವ ಸ್ಥಾನಕ್ಕಾಗಿ ಮುದ್ದೇಬಿಹಾಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ; ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ಪಕ್ಷತ್ಯಾಗ

ಮುದ್ದೇಬಿಹಾಳ : ಆರು ಬಾರಿ ಶಾಸಕರಾಗಿರುವ ರಾಜ್ಯದ ಅತ್ಯಂತ ಸರಳ ಸಜ್ಜನಿಕೆಯ ಹಿರಿಯ ರಾಜಕಾರಣಿ,ಯಾವುದೇ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ:                  ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಶಾಸಕ ನಾಡಗೌಡರಿಗೆ ಸಚಿವ ಸ್ಥಾನ ವಿಳಂಬ: ಕಾoಗ್ರೆಸ್‌ಗೆ ಮಹ್ಮದರಫೀಕ ಶಿರೋಳ ರಾಜೀನಾಮೆ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಕ್ರಿಯ ಕಾರ್ಯಕರ್ತ

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಜೂ.19 ರಂದು ಪಕ್ಷಾತೀತವಾಗಿ ವ್ಯಾಪಾರಸ್ಥರಿಂದ ಮುದ್ದೇಬಿಹಾಳ ಸ್ವಯಂಪ್ರೇರಿತ ಬಂದ್

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಜೂ.19

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಹಾಗೂ ಬಂಜಾರಾ ಸಮಾಜದ ಮುಖಂಡರು ಒತ್ತಾಯಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಾನಂದ ಲಮಾಣಿ ಮಾತನಾಡಿ, ರುದ್ರಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಉಪಸಭಾಪತಿಯಾಗಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಆರಂಭೋತ್ಸವ ಸರಳವಾಗಿ ನಡೆಸಲಾಯಿತು. ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಅವರ ನೇತೃತ್ವದಲ್ಲಿ ಶಿಕ್ಷಕರು ಸರಸ್ವತಿ ದೇವಿ ಚಿತ್ರಕ್ಕೆ ಪೂಜೆ ಸಲ್ಲಿಸಿದರು.ಇದೇ ವೇಳೆ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ ತಹಶೀಲ್ದಾರ್ ಕೀರ್ತಿ ಚಾಲಕ್ ಅವರು, ಸರಸ್ವತಿ ದೇವಿಗೆ ನಮಿಸಿ ಶಾಲಾ ಮಕ್ಕಳಿಗೆ ಹೂವು ನೀಡಿ ಶಾಲಾ ಆರಂಭೋತ್ಸವಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು. ಇದೇ ವೇಳೆ