Protest by pro-Dalit coalition

ದಲಿತಪರ ಒಕ್ಕೂಟದಿಂದ ಪ್ರತಿಭಟನೆ, ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ (ವಿಡಿಯೋ ನೋಡಿ)

ದಲಿತಪರ ಒಕ್ಕೂಟದಿಂದ ಪ್ರತಿಭಟನೆ, ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ (ವಿಡಿಯೋ ನೋಡಿ)

ಮುದ್ದೇಬಿಹಾಳ : ದಲಿತ ಜನಾಂಗದವರಿಗೆ ಜಾತಿ ನಿಂದನೆ ಮಾಡಿದ ಆಪಾದನೆ ಎದರಿಸುತ್ತಿರುವ ಬಿಜೆಪಿಯ ಮುನಿರತ್ನ ನಾಯ್ಡು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂಬುದು ಸೇರಿದಂತೆ 10 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ತಮಟೆ ಬಾರಿಸುತ್ತಾ ದಲಿತ ಜನಾಂಗದವರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡರಾದ ತಿಪ್ಪಣ್ಣ ದೊಡಮನಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ದಲಿತರ ಜಾತಿ ನಿಂದನೆ ಮಾಡಿದ್ದು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಡಿ.ಬಿ.ಮುದೂರ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ತಾರತಮ್ಯ ಎಸಗದೇ ಸರ್ಕಾರದ ಸೌಲಭ್ಯಗಳು ಎಲ್ಲ ದಲಿತ ಜನಾಂಗದವರಿಗೆ ಸರಿಯಾಗಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

ಮುಖಂಡ ಹರೀಶ ನಾಟೀಕಾರ, ಪ್ರಕಾಶ ಚಲವಾದಿ(ಸರೂರ) ಮಾತನಾಡಿ, ಬ.ಬಾಗೇವಾಡಿ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಅವರು ದಲಿತ ಜನಾಂಗದವರ ಮೇಲೆ ವಿವಿಧ ರೀತಿಯ ದೌರ್ಜನ್ಯದ 21 ಪ್ರಕರಣಗಳು ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯ ಸಿಪಿಐ, ಪಿಎಸ್‌ಐ,ಡಿವೈಎಸ್ಪಿ ಅವರಿಗೆ ಲಂಚದ ರೂಪದಲ್ಲಿ ಹಣವನ್ನು ಪೋನಪೇ ಮೂಲಕ ಮಾಡಿಸಿಕೊಂಡಿದ್ದು ಅದನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಇನ್ನುಳಿದಂತೆ ತಾಳಿಕೋಟಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಸಾವಿಗೆ ಕಾರಣರಾಗಿರುವವರ ಮೇಲೆ ಕ್ರಮ ಜರುಗಿಸಬೇಕು.ಗಂಗಾವತಿ ತಾಲ್ಲೂಕು ಸಂಕನಾಳ, ಬಾದಾಮಿ, ಹುಣಸಗಿ ತಾಲ್ಲೂಕು ಬಪ್ಪರಗಿಯಲ್ಲಿ ದಲಿತ ಜನಾಂಗದವರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಮುಖಂಡ ಚೆನ್ನಪ್ಪ ವಿಜಯಕರ್,ಸಿದ್ದು ಕಟ್ಟಿಮನಿ, ದೇವರಾಜ ಹಂಗರಗಿ ಮಾತನಾಡಿದರು.

ಗ್ರೇಡ್-2 ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

Protest by pro-Dalit coalition

ಪ್ರತಿಭಟನೆಯಲ್ಲಿ ದೌರ್ಜನ್ಯ ತಡೆ ಸಮಿತಿ ಸದಸ್ಯ ಮಲ್ಲು ತಳವಾರ, ಮುಖಂಡರಾದ ಪರಶುರಾಮ ನಾಲತವಾಡ, ಪ್ರಶಾಂತ ಕಾಳೆ, ಪರಶುರಾಮ ಮುರಾಳ, ಬಸವರಾಜ ಸರೂರ, ಭಗವಂತ ಕಬಾಡೆ,ಬಲಭೀಮ ನಾಯ್ಕಮಕ್ಕಳ, ಮಹೆಬೂಬ ಕುಂಟೋಜಿ, ರಾಮಣ್ಣ ರಾಜನಾಳ, ಮುತ್ತು ಚಲವಾದಿ, ಪ್ರಚಂಡಪ್ಪ ಚಲವಾದಿ, ಆನಂದ ಮುದೂರು, ಪುರಸಭೆ ಸದಸ್ಯ ಶಿವು ಶಿವಪೂರ, ಮಂಜುನಾಥ ಕಟ್ಟಿಮನಿ ಪಾಲ್ಗೊಂಡಿದ್ದರು.

Latest News

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ