Protest by pro-Dalit coalition

ದಲಿತಪರ ಒಕ್ಕೂಟದಿಂದ ಪ್ರತಿಭಟನೆ, ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ (ವಿಡಿಯೋ ನೋಡಿ)

ದಲಿತಪರ ಒಕ್ಕೂಟದಿಂದ ಪ್ರತಿಭಟನೆ, ಶಾಸಕ ಸ್ಥಾನದಿಂದ ಮುನಿರತ್ನ ವಜಾಕ್ಕೆ ಆಗ್ರಹ (ವಿಡಿಯೋ ನೋಡಿ)

ಮುದ್ದೇಬಿಹಾಳ : ದಲಿತ ಜನಾಂಗದವರಿಗೆ ಜಾತಿ ನಿಂದನೆ ಮಾಡಿದ ಆಪಾದನೆ ಎದರಿಸುತ್ತಿರುವ ಬಿಜೆಪಿಯ ಮುನಿರತ್ನ ನಾಯ್ಡು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂಬುದು ಸೇರಿದಂತೆ 10 ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಪಟ್ಟಣದಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ಇನ್ನಷ್ಟು ಸುದ್ದಿಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಸೇರಲು ಈ ಲಿಂಕ್ ಬಳಸಿ: https://t.me/dcgkannada

ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ತಮಟೆ ಬಾರಿಸುತ್ತಾ ದಲಿತ ಜನಾಂಗದವರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಘೋಷಣೆಗಳನ್ನು ಕೂಗುತ್ತಾ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಮುಖಂಡರಾದ ತಿಪ್ಪಣ್ಣ ದೊಡಮನಿ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ದಲಿತರ ಜಾತಿ ನಿಂದನೆ ಮಾಡಿದ್ದು ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ಡಿ.ಬಿ.ಮುದೂರ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ತಾರತಮ್ಯ ಎಸಗದೇ ಸರ್ಕಾರದ ಸೌಲಭ್ಯಗಳು ಎಲ್ಲ ದಲಿತ ಜನಾಂಗದವರಿಗೆ ಸರಿಯಾಗಿ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.

ಮುಖಂಡ ಹರೀಶ ನಾಟೀಕಾರ, ಪ್ರಕಾಶ ಚಲವಾದಿ(ಸರೂರ) ಮಾತನಾಡಿ, ಬ.ಬಾಗೇವಾಡಿ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿ ಅವರು ದಲಿತ ಜನಾಂಗದವರ ಮೇಲೆ ವಿವಿಧ ರೀತಿಯ ದೌರ್ಜನ್ಯದ 21 ಪ್ರಕರಣಗಳು ದಾಖಲಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯ ಸಿಪಿಐ, ಪಿಎಸ್‌ಐ,ಡಿವೈಎಸ್ಪಿ ಅವರಿಗೆ ಲಂಚದ ರೂಪದಲ್ಲಿ ಹಣವನ್ನು ಪೋನಪೇ ಮೂಲಕ ಮಾಡಿಸಿಕೊಂಡಿದ್ದು ಅದನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಇನ್ನುಳಿದಂತೆ ತಾಳಿಕೋಟಿ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯ ಸಾವಿಗೆ ಕಾರಣರಾಗಿರುವವರ ಮೇಲೆ ಕ್ರಮ ಜರುಗಿಸಬೇಕು.ಗಂಗಾವತಿ ತಾಲ್ಲೂಕು ಸಂಕನಾಳ, ಬಾದಾಮಿ, ಹುಣಸಗಿ ತಾಲ್ಲೂಕು ಬಪ್ಪರಗಿಯಲ್ಲಿ ದಲಿತ ಜನಾಂಗದವರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಮುಖಂಡ ಚೆನ್ನಪ್ಪ ವಿಜಯಕರ್,ಸಿದ್ದು ಕಟ್ಟಿಮನಿ, ದೇವರಾಜ ಹಂಗರಗಿ ಮಾತನಾಡಿದರು.

ಗ್ರೇಡ್-2 ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಲಾಯಿತು.

Protest by pro-Dalit coalition

ಪ್ರತಿಭಟನೆಯಲ್ಲಿ ದೌರ್ಜನ್ಯ ತಡೆ ಸಮಿತಿ ಸದಸ್ಯ ಮಲ್ಲು ತಳವಾರ, ಮುಖಂಡರಾದ ಪರಶುರಾಮ ನಾಲತವಾಡ, ಪ್ರಶಾಂತ ಕಾಳೆ, ಪರಶುರಾಮ ಮುರಾಳ, ಬಸವರಾಜ ಸರೂರ, ಭಗವಂತ ಕಬಾಡೆ,ಬಲಭೀಮ ನಾಯ್ಕಮಕ್ಕಳ, ಮಹೆಬೂಬ ಕುಂಟೋಜಿ, ರಾಮಣ್ಣ ರಾಜನಾಳ, ಮುತ್ತು ಚಲವಾದಿ, ಪ್ರಚಂಡಪ್ಪ ಚಲವಾದಿ, ಆನಂದ ಮುದೂರು, ಪುರಸಭೆ ಸದಸ್ಯ ಶಿವು ಶಿವಪೂರ, ಮಂಜುನಾಥ ಕಟ್ಟಿಮನಿ ಪಾಲ್ಗೊಂಡಿದ್ದರು.

Latest News

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: 50 ಸಾವಿರ ರೂಪಾಯಿವರೆಗೆ ಯಾವುದೇ ಶ್ಯೂರಿಟಿ ಇಲ್ಲದೆ ಪಡೆಯಲು ಅವಕಾಶ!

Adhar Card Loan: ನಿಮಗೆ ತಕ್ಷಣ ಹಣದ ಅವಶ್ಯಕತೆ ಇದೆಯಾ? ಶ್ಯೂರಿಟಿ ಇಲ್ಲದೆ ಸಾಲ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಸಿ.ಎಲ್.ಬಿರಾದಾರ ಅಧ್ಯಕ್ಷ, ಜಿ.ಬಿ.ಪಾಟೀಲ್ ಉಪಾಧ್ಯಕ್ಷ; ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ಗೆ ಹೊಸಬರ ಆಯ್ಕೆ

ಮುದ್ದೇಬಿಹಾಳ : ಅನಿರೀಕ್ಷಿತ ಫಲಿತಾಂಶವನ್ನು ಇಲ್ಲಿನ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ನೂತನ

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?;                                                                           ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಯಾರಿಗೆ ಒಲಿಯಲಿದೆ ಅಧ್ಯಕ್ಷ ಪಟ್ಟ ?; ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಹೊಸಬರ ಆಯ್ಕೆ..?

ಮುದ್ದೇಬಿಹಾಳ : ಪಟ್ಟಣದ ದಿ ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ಕೇವಲ ₹601 ವರ್ಷಪೂರ್ತಿ free 5G ಯೋಜನೆ

Jio: ₹601 5G ರೀಚಾರ್ಜ್ ಯೋಜನೆಯು Jio ಬಳಕೆದಾರರಿಗೆ, ವಿಶೇಷವಾಗಿ ಇಡೀ ವರ್ಷಕ್ಕೆ ಅನಿಯಮಿತ 5G ಡೇಟಾವನ್ನು ಬಯಸುವವರಿಗೆ ಆಕರ್ಷಕ ಕೊಡುಗೆಯಾಗಿದೆ. Jio ₹601 5G ರೀಚಾರ್ಜ್ ಯೋಜನೆ ಮುಖ್ಯಾಂಶಗಳು ವೆಚ್ಚ : ಒಂದು ವರ್ಷಕ್ಕೆ ₹601.ಪ್ರಯೋಜನಗಳು : 12 ತಿಂಗಳವರೆಗೆ ಅನಿಯಮಿತ 5G ಡೇಟಾ.ಅರ್ಹತೆ : Jio 5G ಸಿಮ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.ವಿನಾಯಿತಿಗಳು : 4G ಸಿಮ್ ಬಳಕೆದಾರರಿಗೆ ಅನ್ವಯಿಸುವುದಿಲ್ಲ. Join Our Telegram: https://t.me/dcgkannada ಈ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT ರೈಲ್ವೆ ಇಲಾಖೆಯಲ್ಲಿ 32,000 ಹುದ್ದೆಗಳ ನೇಮಕಾತಿ

RRB GROUP D RECRUITMENT: ಭಾರತೀಯ ರೈಲ್ವೆ ಇಲಾಖೆಯು ಬರೋಬ್ಬರಿ 32 ಸಾವಿರ ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಿದೆ. ಈ ಕುರಿತು ಶಾರ್ಟ್ ನೋಟಿಫಿಕೇಶನ್ ಬಿಡುಗಡೆ ಮಾಡಿದ್ದು, ಈ ಹುದ್ದೆಗಳಿಗೆ SSLC ಪಾಸಾದ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದು. Join Our Telegram: https://t.me/dcgkannada ಆರಂಭಿಕ ವೇತನವು 18000 ರೂ. ಇರುತ್ತದೆ. ಸದ್ಯದಲ್ಲಿಯೇ ಅರ್ಜಿ ಸ್ವೀಕೃತಿಯು ಆರಂಭವಾಗಲಿದೆ. ನಂತರ ಪರೀಕ್ಷೆ ದಿನಾಂಕವನ್ನು ಬಿಡುಗಡೆ ಮಾಡಲಾಗುತ್ತದೆ. 2024 ನೇ