Protest from the right wing community Ny. Demand to reject Nagmohandas report

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್ ಮಾತನಾಡಿ, ನಗರ ಮತ್ತು ಗ್ರಾಮ ಪಂಚಾಯತ್‌ನಲ್ಲಿ ಬೂತ ತೆರೆಯದೇ ಮನೆಗಳಿಗೆ ಚೀಟಿ ಅಚಿಟಿಸುವ ಮೂಲಕ ಸಮೀಕ್ಷೆ ಪೂರ್ಣವಾಗಿದೆ ಎಂದು ತಪ್ಪು ವರದಿ ನೀಡಲಾಗಿದ್ದು ಇದರಲ್ಲಿ 1.47 ಕೋಟಿ ಬದಲು 1.16 ಕೋಟಿ ಜನರ ವರದಿ ಸಲ್ಲಿಕೆಯಾಗಿದೆ. ಅದರಲ್ಲಿ ಆಯೋಗವು 1.05 ಕೋಟಿ ಮಾತ್ರ ಸರ್ವೆ ಮಾಡಿದೆ. 40 ಲಕ್ಷ ಜನರು ಸಮೀಕ್ಷೆಯಿಂದ ಹೊರಗುಳಿದಿದ್ದಾರೆ ಎಂದು ದೂರಿದರು.

ಕೆಲವು ಬಲಗೈ ಜಾತಿಗಳನ್ನು ತಪ್ಪಾಗಿ ಪ್ರವರ್ಗ-ಎ ಗೆ ಸೇರಿಸಲಾಗಿದ್ದು ಬಲಗೈ ಸಮುದಾಯದ ಜನಸಂಖ್ಯೆಯನ್ನು ಒಡೆದು ತೋರಿಸಲಾಗಿದೆ ಎಂದು ದೂರಿದರು. ಅವೈಜ್ಞಾನಿಕವಾಗಿರುವ ನಾಗಮೋಹನದಾಸ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು. ಹೊಲೆಯ ಹಾಗೂ ಮಾದಿಗ ಸಮುದಾಯ ಒಂದೆ ಜೋಡೆತ್ತು ಇದ್ದಂತೆ ಇಬ್ಬರು ಸಮುದಾಯದವರಿಗೂ ಸಮಾನ ನ್ಯಾಯ ದೊರಕಿಸಿಕೊಡುವ ಕಾರ್ಯ ವರದಿಯಿಂದಾಗಬೇಕಿತ್ತು ಎಂದು ಹೇಳಿದರು.

ತಹಸೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಪ್ರೊ. ಪಿ. ಎಚ್. ಉಪ್ಪಲದಿನ್ನಿ, ಮುಖಂಡರಾದ ಸಿದ್ದು ಕಟ್ಟಿಮನಿ, ದೌರ್ಜನ್ಯ ತಡೆ ಸಮೀತಿ ಸದಸ್ಯ ಮಲ್ಲು ತಳವಾರ, ಎಸ್. ಆರ್. ಕಟ್ಟೀಮನಿ, ಅಶೋಕ ಪಾದಗಟ್ಟಿ, ಶಿವಪುತ್ರ ಅಜಮನಿ, ಪ್ರಕಾಶ್ ಚಲವಾದಿ ಮಾತನಾಡಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ಚಲವಾದಿ ಮಹಾಸಭೆ ತಾಲೂಕು ಅಧ್ಯಕ್ಷ ರೇವಣಪ್ಪ ಹರಿಜನ, ಯಲ್ಲಪ್ಪ ಚಲವಾದಿ, ಮಹಾಂತೇಶ ಚಲವಾದಿ, ಕೆ.ಎಂ.ಇಬ್ರಾಹಿಂಪೂರ, ಶ್ರೀಕಾಂತ ಚಲವಾದಿ, ಶರಣು ಚಲವಾದಿ, ಸಂಗು ಚಲವಾದಿ, ಸಿದ್ದು ಚಲವಾದಿ, ಮಂಜುನಾಥ ಬಸರಕೋಡ, ಪ್ರಶಾಂತ ಕಾಳೆ, ಮಂಜುನಾಥ್ ಕಟ್ಟಿಮನಿ, ದೇವರಾಜ್ ಹಂಗರಗಿ, ಎಚ್. ಆರ್. ಗಂಜಾಳ ಇದ್ದರು.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ