Protest from the right wing community Ny. Demand to reject Nagmohandas report

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್ ಮಾತನಾಡಿ, ನಗರ ಮತ್ತು ಗ್ರಾಮ ಪಂಚಾಯತ್‌ನಲ್ಲಿ ಬೂತ ತೆರೆಯದೇ ಮನೆಗಳಿಗೆ ಚೀಟಿ ಅಚಿಟಿಸುವ ಮೂಲಕ ಸಮೀಕ್ಷೆ ಪೂರ್ಣವಾಗಿದೆ ಎಂದು ತಪ್ಪು ವರದಿ ನೀಡಲಾಗಿದ್ದು ಇದರಲ್ಲಿ 1.47 ಕೋಟಿ ಬದಲು 1.16 ಕೋಟಿ ಜನರ ವರದಿ ಸಲ್ಲಿಕೆಯಾಗಿದೆ. ಅದರಲ್ಲಿ ಆಯೋಗವು 1.05 ಕೋಟಿ ಮಾತ್ರ ಸರ್ವೆ ಮಾಡಿದೆ. 40 ಲಕ್ಷ ಜನರು ಸಮೀಕ್ಷೆಯಿಂದ ಹೊರಗುಳಿದಿದ್ದಾರೆ ಎಂದು ದೂರಿದರು.

ಕೆಲವು ಬಲಗೈ ಜಾತಿಗಳನ್ನು ತಪ್ಪಾಗಿ ಪ್ರವರ್ಗ-ಎ ಗೆ ಸೇರಿಸಲಾಗಿದ್ದು ಬಲಗೈ ಸಮುದಾಯದ ಜನಸಂಖ್ಯೆಯನ್ನು ಒಡೆದು ತೋರಿಸಲಾಗಿದೆ ಎಂದು ದೂರಿದರು. ಅವೈಜ್ಞಾನಿಕವಾಗಿರುವ ನಾಗಮೋಹನದಾಸ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು. ಹೊಲೆಯ ಹಾಗೂ ಮಾದಿಗ ಸಮುದಾಯ ಒಂದೆ ಜೋಡೆತ್ತು ಇದ್ದಂತೆ ಇಬ್ಬರು ಸಮುದಾಯದವರಿಗೂ ಸಮಾನ ನ್ಯಾಯ ದೊರಕಿಸಿಕೊಡುವ ಕಾರ್ಯ ವರದಿಯಿಂದಾಗಬೇಕಿತ್ತು ಎಂದು ಹೇಳಿದರು.

ತಹಸೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಪ್ರೊ. ಪಿ. ಎಚ್. ಉಪ್ಪಲದಿನ್ನಿ, ಮುಖಂಡರಾದ ಸಿದ್ದು ಕಟ್ಟಿಮನಿ, ದೌರ್ಜನ್ಯ ತಡೆ ಸಮೀತಿ ಸದಸ್ಯ ಮಲ್ಲು ತಳವಾರ, ಎಸ್. ಆರ್. ಕಟ್ಟೀಮನಿ, ಅಶೋಕ ಪಾದಗಟ್ಟಿ, ಶಿವಪುತ್ರ ಅಜಮನಿ, ಪ್ರಕಾಶ್ ಚಲವಾದಿ ಮಾತನಾಡಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ಚಲವಾದಿ ಮಹಾಸಭೆ ತಾಲೂಕು ಅಧ್ಯಕ್ಷ ರೇವಣಪ್ಪ ಹರಿಜನ, ಯಲ್ಲಪ್ಪ ಚಲವಾದಿ, ಮಹಾಂತೇಶ ಚಲವಾದಿ, ಕೆ.ಎಂ.ಇಬ್ರಾಹಿಂಪೂರ, ಶ್ರೀಕಾಂತ ಚಲವಾದಿ, ಶರಣು ಚಲವಾದಿ, ಸಂಗು ಚಲವಾದಿ, ಸಿದ್ದು ಚಲವಾದಿ, ಮಂಜುನಾಥ ಬಸರಕೋಡ, ಪ್ರಶಾಂತ ಕಾಳೆ, ಮಂಜುನಾಥ್ ಕಟ್ಟಿಮನಿ, ದೇವರಾಜ್ ಹಂಗರಗಿ, ಎಚ್. ಆರ್. ಗಂಜಾಳ ಇದ್ದರು.

Latest News

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ-ಹಾಸಿಂಪೀರ ವಾಲಿಕಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು. ಸಮಯವನ್ನು ವ್ಯರ್ಥ ಮಾಡಿಕೊಳ್ಳದೆ ಶಾಲಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ:   ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಶಾಸಕ ವಿಜಯಾನಂದ ಕಾಶಪ್ಪನವರ ಘೋಷಣೆ: ಕಾಶಪ್ಪನವರ ಕುಟುಂಬದಿoದ ಸಕ್ಕರೆ ಕಾರ್ಖಾನೆ ಸ್ಥಾಪನೆ

ಮುದ್ದೇಬಿಹಾಳ : ನಮ್ಮ ಭಾಗದ ರೈತರಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಕಾಶಪ್ಪನವರ ಕುಟುಂಬದಿoದ ಹುನಗುಂದ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮಾ.4 ರಂದು ಚಿಣ್ಣರೊಂದಿಗೆ ಬಣ್ಣದ ಓಕುಳಿ

ಮುದ್ದೇಬಿಹಾಳ : ಹೋಳಿ ಹಬ್ಬದ ಅಂಗವಾಗಿ ಇಲ್ಲಿನ ಸಮಾನ ಮನಸ್ಕರ ಯುವ ಬಳಗದ ಸಹಯೋಗದಲ್ಲಿ 4 ರಂದು ಬೆಳಗ್ಗೆ 8 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಪಟ್ಟಣದ ಹುಡ್ಕೋದಲ್ಲಿರುವ ಗವಿಸಿದ್ದೇಶ್ವರ ವೇದಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮುದ್ದೇಬಿಹಾಳದ ಎಲ್ಲಾ ಬಾಂಧವರು ತಮ್ಮ ಮಕ್ಕಳನ್ನು ಕರೆತಂದು ಈ ಕಾರ್ಯಕ್ರಮದಲ್ಲಿ ತೊಡಗಿಸಿ ಹೋಳಿ ಆಚರಣೆ ಯಶಸ್ವಿಗೊಳಿಸುವಂತೆ ಬಳಗದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಎರಡು ದಿನ ನಿರಂತರ ದುರಸ್ತಿ : ಕುಡಿವ ನೀರು ಪೂರೈಕೆ ಅಬಾಧಿತ

ಮುದ್ದೇಬಿಹಾಳ : ಪಟ್ಟಣಕ್ಕೆ ಕುಡಿವ ನೀರು ಪೂರೈಕೆ ಎರಡು ದಿನ ವಿಳಂಬವಾಗಿದ್ದು ಮಾ.3 ರಿಂದ ಯತಾಸ್ಥಿತಿಯಲ್ಲಿ ವಿವಿಧ ವಾರ್ಡಗಳಿಗೆ ಸರದಿ ಮೇಲೆ ಪೂರೈಕೆ ಆಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ಕುಡಿವ ನೀರು ಪೂರೈಕೆ ವಿಭಾಗದ ಉಸ್ತುವಾರಿ, ಪುರಸಭೆ ಆರೋಗ್ಯ ನಿರೀಕ್ಷಕ ಜಾವೇದ ನಾಯ್ಕೋಡಿ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎರಡು ದಿನಗಳಿಂದ ಇಲ್ಲಿನ ಜ್ಞಾನ ಭಾರತಿ ಶಾಲೆ ಮುಂದೆ ಮುಖ್ಯ ಕೊಳವೆ ಪೈಪ್‌ನಲ್ಲಿ ಸೋರಿಕೆ ಕಂಡು ಬಂದಿತ್ತು.ಅದನ್ನು