Protest from the right wing community Ny. Demand to reject Nagmohandas report

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್ ಮಾತನಾಡಿ, ನಗರ ಮತ್ತು ಗ್ರಾಮ ಪಂಚಾಯತ್‌ನಲ್ಲಿ ಬೂತ ತೆರೆಯದೇ ಮನೆಗಳಿಗೆ ಚೀಟಿ ಅಚಿಟಿಸುವ ಮೂಲಕ ಸಮೀಕ್ಷೆ ಪೂರ್ಣವಾಗಿದೆ ಎಂದು ತಪ್ಪು ವರದಿ ನೀಡಲಾಗಿದ್ದು ಇದರಲ್ಲಿ 1.47 ಕೋಟಿ ಬದಲು 1.16 ಕೋಟಿ ಜನರ ವರದಿ ಸಲ್ಲಿಕೆಯಾಗಿದೆ. ಅದರಲ್ಲಿ ಆಯೋಗವು 1.05 ಕೋಟಿ ಮಾತ್ರ ಸರ್ವೆ ಮಾಡಿದೆ. 40 ಲಕ್ಷ ಜನರು ಸಮೀಕ್ಷೆಯಿಂದ ಹೊರಗುಳಿದಿದ್ದಾರೆ ಎಂದು ದೂರಿದರು.

ಕೆಲವು ಬಲಗೈ ಜಾತಿಗಳನ್ನು ತಪ್ಪಾಗಿ ಪ್ರವರ್ಗ-ಎ ಗೆ ಸೇರಿಸಲಾಗಿದ್ದು ಬಲಗೈ ಸಮುದಾಯದ ಜನಸಂಖ್ಯೆಯನ್ನು ಒಡೆದು ತೋರಿಸಲಾಗಿದೆ ಎಂದು ದೂರಿದರು. ಅವೈಜ್ಞಾನಿಕವಾಗಿರುವ ನಾಗಮೋಹನದಾಸ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು. ಹೊಲೆಯ ಹಾಗೂ ಮಾದಿಗ ಸಮುದಾಯ ಒಂದೆ ಜೋಡೆತ್ತು ಇದ್ದಂತೆ ಇಬ್ಬರು ಸಮುದಾಯದವರಿಗೂ ಸಮಾನ ನ್ಯಾಯ ದೊರಕಿಸಿಕೊಡುವ ಕಾರ್ಯ ವರದಿಯಿಂದಾಗಬೇಕಿತ್ತು ಎಂದು ಹೇಳಿದರು.

ತಹಸೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಪ್ರೊ. ಪಿ. ಎಚ್. ಉಪ್ಪಲದಿನ್ನಿ, ಮುಖಂಡರಾದ ಸಿದ್ದು ಕಟ್ಟಿಮನಿ, ದೌರ್ಜನ್ಯ ತಡೆ ಸಮೀತಿ ಸದಸ್ಯ ಮಲ್ಲು ತಳವಾರ, ಎಸ್. ಆರ್. ಕಟ್ಟೀಮನಿ, ಅಶೋಕ ಪಾದಗಟ್ಟಿ, ಶಿವಪುತ್ರ ಅಜಮನಿ, ಪ್ರಕಾಶ್ ಚಲವಾದಿ ಮಾತನಾಡಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ಚಲವಾದಿ ಮಹಾಸಭೆ ತಾಲೂಕು ಅಧ್ಯಕ್ಷ ರೇವಣಪ್ಪ ಹರಿಜನ, ಯಲ್ಲಪ್ಪ ಚಲವಾದಿ, ಮಹಾಂತೇಶ ಚಲವಾದಿ, ಕೆ.ಎಂ.ಇಬ್ರಾಹಿಂಪೂರ, ಶ್ರೀಕಾಂತ ಚಲವಾದಿ, ಶರಣು ಚಲವಾದಿ, ಸಂಗು ಚಲವಾದಿ, ಸಿದ್ದು ಚಲವಾದಿ, ಮಂಜುನಾಥ ಬಸರಕೋಡ, ಪ್ರಶಾಂತ ಕಾಳೆ, ಮಂಜುನಾಥ್ ಕಟ್ಟಿಮನಿ, ದೇವರಾಜ್ ಹಂಗರಗಿ, ಎಚ್. ಆರ್. ಗಂಜಾಳ ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು