Protest from the right wing community Ny. Demand to reject Nagmohandas report

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್ ಮಾತನಾಡಿ, ನಗರ ಮತ್ತು ಗ್ರಾಮ ಪಂಚಾಯತ್‌ನಲ್ಲಿ ಬೂತ ತೆರೆಯದೇ ಮನೆಗಳಿಗೆ ಚೀಟಿ ಅಚಿಟಿಸುವ ಮೂಲಕ ಸಮೀಕ್ಷೆ ಪೂರ್ಣವಾಗಿದೆ ಎಂದು ತಪ್ಪು ವರದಿ ನೀಡಲಾಗಿದ್ದು ಇದರಲ್ಲಿ 1.47 ಕೋಟಿ ಬದಲು 1.16 ಕೋಟಿ ಜನರ ವರದಿ ಸಲ್ಲಿಕೆಯಾಗಿದೆ. ಅದರಲ್ಲಿ ಆಯೋಗವು 1.05 ಕೋಟಿ ಮಾತ್ರ ಸರ್ವೆ ಮಾಡಿದೆ. 40 ಲಕ್ಷ ಜನರು ಸಮೀಕ್ಷೆಯಿಂದ ಹೊರಗುಳಿದಿದ್ದಾರೆ ಎಂದು ದೂರಿದರು.

ಕೆಲವು ಬಲಗೈ ಜಾತಿಗಳನ್ನು ತಪ್ಪಾಗಿ ಪ್ರವರ್ಗ-ಎ ಗೆ ಸೇರಿಸಲಾಗಿದ್ದು ಬಲಗೈ ಸಮುದಾಯದ ಜನಸಂಖ್ಯೆಯನ್ನು ಒಡೆದು ತೋರಿಸಲಾಗಿದೆ ಎಂದು ದೂರಿದರು. ಅವೈಜ್ಞಾನಿಕವಾಗಿರುವ ನಾಗಮೋಹನದಾಸ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು. ಹೊಲೆಯ ಹಾಗೂ ಮಾದಿಗ ಸಮುದಾಯ ಒಂದೆ ಜೋಡೆತ್ತು ಇದ್ದಂತೆ ಇಬ್ಬರು ಸಮುದಾಯದವರಿಗೂ ಸಮಾನ ನ್ಯಾಯ ದೊರಕಿಸಿಕೊಡುವ ಕಾರ್ಯ ವರದಿಯಿಂದಾಗಬೇಕಿತ್ತು ಎಂದು ಹೇಳಿದರು.

ತಹಸೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಪ್ರೊ. ಪಿ. ಎಚ್. ಉಪ್ಪಲದಿನ್ನಿ, ಮುಖಂಡರಾದ ಸಿದ್ದು ಕಟ್ಟಿಮನಿ, ದೌರ್ಜನ್ಯ ತಡೆ ಸಮೀತಿ ಸದಸ್ಯ ಮಲ್ಲು ತಳವಾರ, ಎಸ್. ಆರ್. ಕಟ್ಟೀಮನಿ, ಅಶೋಕ ಪಾದಗಟ್ಟಿ, ಶಿವಪುತ್ರ ಅಜಮನಿ, ಪ್ರಕಾಶ್ ಚಲವಾದಿ ಮಾತನಾಡಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ಚಲವಾದಿ ಮಹಾಸಭೆ ತಾಲೂಕು ಅಧ್ಯಕ್ಷ ರೇವಣಪ್ಪ ಹರಿಜನ, ಯಲ್ಲಪ್ಪ ಚಲವಾದಿ, ಮಹಾಂತೇಶ ಚಲವಾದಿ, ಕೆ.ಎಂ.ಇಬ್ರಾಹಿಂಪೂರ, ಶ್ರೀಕಾಂತ ಚಲವಾದಿ, ಶರಣು ಚಲವಾದಿ, ಸಂಗು ಚಲವಾದಿ, ಸಿದ್ದು ಚಲವಾದಿ, ಮಂಜುನಾಥ ಬಸರಕೋಡ, ಪ್ರಶಾಂತ ಕಾಳೆ, ಮಂಜುನಾಥ್ ಕಟ್ಟಿಮನಿ, ದೇವರಾಜ್ ಹಂಗರಗಿ, ಎಚ್. ಆರ್. ಗಂಜಾಳ ಇದ್ದರು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ