Protest from the right wing community Ny. Demand to reject Nagmohandas report

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್ ಮಾತನಾಡಿ, ನಗರ ಮತ್ತು ಗ್ರಾಮ ಪಂಚಾಯತ್‌ನಲ್ಲಿ ಬೂತ ತೆರೆಯದೇ ಮನೆಗಳಿಗೆ ಚೀಟಿ ಅಚಿಟಿಸುವ ಮೂಲಕ ಸಮೀಕ್ಷೆ ಪೂರ್ಣವಾಗಿದೆ ಎಂದು ತಪ್ಪು ವರದಿ ನೀಡಲಾಗಿದ್ದು ಇದರಲ್ಲಿ 1.47 ಕೋಟಿ ಬದಲು 1.16 ಕೋಟಿ ಜನರ ವರದಿ ಸಲ್ಲಿಕೆಯಾಗಿದೆ. ಅದರಲ್ಲಿ ಆಯೋಗವು 1.05 ಕೋಟಿ ಮಾತ್ರ ಸರ್ವೆ ಮಾಡಿದೆ. 40 ಲಕ್ಷ ಜನರು ಸಮೀಕ್ಷೆಯಿಂದ ಹೊರಗುಳಿದಿದ್ದಾರೆ ಎಂದು ದೂರಿದರು.

ಕೆಲವು ಬಲಗೈ ಜಾತಿಗಳನ್ನು ತಪ್ಪಾಗಿ ಪ್ರವರ್ಗ-ಎ ಗೆ ಸೇರಿಸಲಾಗಿದ್ದು ಬಲಗೈ ಸಮುದಾಯದ ಜನಸಂಖ್ಯೆಯನ್ನು ಒಡೆದು ತೋರಿಸಲಾಗಿದೆ ಎಂದು ದೂರಿದರು. ಅವೈಜ್ಞಾನಿಕವಾಗಿರುವ ನಾಗಮೋಹನದಾಸ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು. ಹೊಲೆಯ ಹಾಗೂ ಮಾದಿಗ ಸಮುದಾಯ ಒಂದೆ ಜೋಡೆತ್ತು ಇದ್ದಂತೆ ಇಬ್ಬರು ಸಮುದಾಯದವರಿಗೂ ಸಮಾನ ನ್ಯಾಯ ದೊರಕಿಸಿಕೊಡುವ ಕಾರ್ಯ ವರದಿಯಿಂದಾಗಬೇಕಿತ್ತು ಎಂದು ಹೇಳಿದರು.

ತಹಸೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಪ್ರೊ. ಪಿ. ಎಚ್. ಉಪ್ಪಲದಿನ್ನಿ, ಮುಖಂಡರಾದ ಸಿದ್ದು ಕಟ್ಟಿಮನಿ, ದೌರ್ಜನ್ಯ ತಡೆ ಸಮೀತಿ ಸದಸ್ಯ ಮಲ್ಲು ತಳವಾರ, ಎಸ್. ಆರ್. ಕಟ್ಟೀಮನಿ, ಅಶೋಕ ಪಾದಗಟ್ಟಿ, ಶಿವಪುತ್ರ ಅಜಮನಿ, ಪ್ರಕಾಶ್ ಚಲವಾದಿ ಮಾತನಾಡಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ಚಲವಾದಿ ಮಹಾಸಭೆ ತಾಲೂಕು ಅಧ್ಯಕ್ಷ ರೇವಣಪ್ಪ ಹರಿಜನ, ಯಲ್ಲಪ್ಪ ಚಲವಾದಿ, ಮಹಾಂತೇಶ ಚಲವಾದಿ, ಕೆ.ಎಂ.ಇಬ್ರಾಹಿಂಪೂರ, ಶ್ರೀಕಾಂತ ಚಲವಾದಿ, ಶರಣು ಚಲವಾದಿ, ಸಂಗು ಚಲವಾದಿ, ಸಿದ್ದು ಚಲವಾದಿ, ಮಂಜುನಾಥ ಬಸರಕೋಡ, ಪ್ರಶಾಂತ ಕಾಳೆ, ಮಂಜುನಾಥ್ ಕಟ್ಟಿಮನಿ, ದೇವರಾಜ್ ಹಂಗರಗಿ, ಎಚ್. ಆರ್. ಗಂಜಾಳ ಇದ್ದರು.

Latest News

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:      ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ವಿದ್ಯಾಸ್ಪೂರ್ತಿ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ಸ್ವಾತಂತ್ರ್ಯದ ಉಳಿವಿಗೆ ಶ್ರಮಿಸೋಣ-ರಾಜೇಶ್ವರಿ ಪಾಟೀಲ್

ಮುದ್ದೇಬಿಹಾಳ : ಲಕ್ಷಾಂತರ ಜನ ಹಿರಿಯರು,ಯುವಕರ ತ್ಯಾಗ,ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು ಅದನ್ನು

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ತಂಗಡಗಿಯಲ್ಲಿ ಧ್ವಜಾರೋಹಣ: ಪೊಲೀಸರಿಗೆ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದ ಸ್ನೇಹಸಿರಿ ಸೇವಾ ಸಂಘದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ; ಬರಗಾಲದ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಹುನ್ನಾರ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಈ ವರ್ಷ ಹಿಂದೆoದಿಗಿoತಲೂ ಅಧಿಕ ಪ್ರಮಾಣದಲ್ಲಿ ಬರಗಾಲ ಕಾಡುತ್ತಿದೆ.ಆದರೆ ಕೆಲವರು ಬರಗಾಲವನ್ನು

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ;              ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಶೇರುದಾರರಿಗೆ ಶೇ.12 ರಷ್ಟು ಲಾಭಾಂಶ ಘೋಷಣೆ; ಶರಣ ವೀರೇಶ್ವರ ಬ್ಯಾಂಕಿಗೆ 1.15 ಕೋಟಿ ರೂ.ಲಾಭ-ಎಂ.ಎಸ್.ಪಾಟೀಲ್

ಮುದ್ದೇಬಿಹಾಳ / ನಾಲತವಾಡ : ಗ್ರಾಹಕರ ಉತ್ತಮ ಸಹಕಾರ ಹಾಗೂ ಶೇರುದಾರರ ಬೆಂಬಲ,ಆಡಳಿತ ಮಂಡಳಿಯ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಆ.11,12 ರಂದು ಶಾಸಕ ನಾಡಗೌಡರಿಂದ ಬರ ಪರಿಸ್ಥಿತಿ ವೀಕ್ಷಣೆ

ಮುದ್ದೇಬಿಹಾಳ : ಕೆಎಸ್‌ಡಿಎಲ್ ಅಧ್ಯಕ್ಷ,ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅವರು ಬರ ಪರಿಸ್ಥಿತಿ ಕುರಿತು ಆ.11,12 ರಂದು ಅವಲೋಕನ ನಡೆಸಿ ಬೆಳೆ ವೀಕ್ಷಣೆ ಮಾಡಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ. ಆ.11 ರದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಕುರಿತು ಚರ್ಚೆ, ಮದ್ಯಾಹ್ನ 2.30ಕ್ಕೆ ಬರಪೀಡಿತ ಪ್ರದೇಶಗಳಾದ ಹರಿಂದ್ರಾಳ,ಹಡಲಗೇರಿ ಗ್ರಾಮಗಳಲ್ಲಿ ಹತ್ತಿ,ತೊಗರಿ,ಸಜ್ಜೆ ಬೆಳೆಗಳ ವೀಕ್ಷಣೆ,ಸಂಜೆ 4ಕ್ಕೆ ಢವಳಗಿ ಹೋಬಳಿಯ ಹತ್ತಿ ತೊಗರಿ ಬೆಳೆಗಳ ವೀಕ್ಷಣೆ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ ಬದಲಿಗೆ ಪರಸ್ಪರ ಮಾತನಾಡದಿರುವುದರಿಂದ, ಮುಖ ಗಂಟು ಹಾಕಿರುವುದರಿಂದ ಬಡವನಾಗಿ ಕಾಣುತ್ತಾನೆ. ಮನುಷ್ಯ ಬದುಕಿನಲ್ಲಿ ನೂರು ಕಾಲ ಬದುಕಿರುವಷ್ಟು ನಗು ಸಂಗ್ರಹಿಸಬೇಕು. ಗೆಳೆಯರ ನಡುವೆ ಸರಿ, ತಪ್ಪುಗಳ ಆರೋಗ್ಯಕರ ಚರ್ಚೆ ನಡೆಯಬೇಕು ಎಂದು ಹಿರೂರು ಜಯಸಿದ್ದೇಶ್ವರ ಸ್ವಾಮೀಜಿ ಹೇಳಿದರು. ಪಟ್ಟಣದ ಹಡಲಗೇರಿ ರಸ್ತೆ ಪಕ್ಕದಲ್ಲಿರುವ ಶ್ರೀ ಪದ್ಮಾವತಿ ದೇವಸ್ಥಾನದ ಸಮುದಾಯ ಭವನದಲ್ಲಿ ವಿಬಿಸಿ ಪ್ರೌಢಶಾಲೆಯ 1985-86ನೇ