Protest from the right wing community Ny. Demand to reject Nagmohandas report

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಬಲಗೈ ಸಮುದಾಯದಿಂದ ಪ್ರತಿಭಟನೆ ನ್ಯಾ. ನಾಗಮೋಹನ್‌ದಾಸ್ ವರದಿ ತಿರಸ್ಕರಿಸಲು ಆಗ್ರಹ

ಮುದ್ದೇಬಿಹಾಳ : ಕುಲಶಾಸ್ತ್ರಿಯ ಅಧ್ಯಯನದ ಕೊರತೆ, ಬಲಗೈ ಸಮುದಾಯದ ವಿರುದ್ಧ ದ್ವೇಷಪೂರಿತ ನಿರ್ಧಾರವಾಗಿರುವ ಒಳಮೀಸಲಾತಿ ಕೊಡುವ ಹಿನ್ನೆಲೆಯಲ್ಲಿ ನ್ಯಾ. ನಾಗಮೋಹನದಾಸ್ ನೀಡಿರುವ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಬಲಗೈ ಜಾತಿಗಳ ತಾಲ್ಲೂಕು ಒಕ್ಕೂಟದ ನೇತೃತ್ವದಲ್ಲಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಅಂಬೇಡ್ಕರ್ ಸರ್ಕಲ್‌ದಿಂದ ಆರಂಭಗೊಂಡ ಪ್ರತಿಭಟನೆ ಸಂಗೊಳ್ಳಿ ರಾಯಣ್ಣ ವೃತ್ತ, ಬಸವೇಶ್ವರ ವೃತ್ತ, ತಹಸೀಲ್ದಾರ್ ಕಚೇರಿಗೆ ಆಗಮಿಸಿತು. ಮುಖಂಡ ಹರೀಶ ನಾಟೀಕಾರ, ಚೆನ್ನಪ್ಪ ವಿಜಯಕರ್ ಮಾತನಾಡಿ, ನಗರ ಮತ್ತು ಗ್ರಾಮ ಪಂಚಾಯತ್‌ನಲ್ಲಿ ಬೂತ ತೆರೆಯದೇ ಮನೆಗಳಿಗೆ ಚೀಟಿ ಅಚಿಟಿಸುವ ಮೂಲಕ ಸಮೀಕ್ಷೆ ಪೂರ್ಣವಾಗಿದೆ ಎಂದು ತಪ್ಪು ವರದಿ ನೀಡಲಾಗಿದ್ದು ಇದರಲ್ಲಿ 1.47 ಕೋಟಿ ಬದಲು 1.16 ಕೋಟಿ ಜನರ ವರದಿ ಸಲ್ಲಿಕೆಯಾಗಿದೆ. ಅದರಲ್ಲಿ ಆಯೋಗವು 1.05 ಕೋಟಿ ಮಾತ್ರ ಸರ್ವೆ ಮಾಡಿದೆ. 40 ಲಕ್ಷ ಜನರು ಸಮೀಕ್ಷೆಯಿಂದ ಹೊರಗುಳಿದಿದ್ದಾರೆ ಎಂದು ದೂರಿದರು.

ಕೆಲವು ಬಲಗೈ ಜಾತಿಗಳನ್ನು ತಪ್ಪಾಗಿ ಪ್ರವರ್ಗ-ಎ ಗೆ ಸೇರಿಸಲಾಗಿದ್ದು ಬಲಗೈ ಸಮುದಾಯದ ಜನಸಂಖ್ಯೆಯನ್ನು ಒಡೆದು ತೋರಿಸಲಾಗಿದೆ ಎಂದು ದೂರಿದರು. ಅವೈಜ್ಞಾನಿಕವಾಗಿರುವ ನಾಗಮೋಹನದಾಸ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು. ಹೊಲೆಯ ಹಾಗೂ ಮಾದಿಗ ಸಮುದಾಯ ಒಂದೆ ಜೋಡೆತ್ತು ಇದ್ದಂತೆ ಇಬ್ಬರು ಸಮುದಾಯದವರಿಗೂ ಸಮಾನ ನ್ಯಾಯ ದೊರಕಿಸಿಕೊಡುವ ಕಾರ್ಯ ವರದಿಯಿಂದಾಗಬೇಕಿತ್ತು ಎಂದು ಹೇಳಿದರು.

ತಹಸೀಲ್ದಾರ್ ಕೀರ್ತಿ ಚಾಲಕ್ ಮನವಿ ಪತ್ರ ಸ್ವೀಕರಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಪ್ರೊ. ಪಿ. ಎಚ್. ಉಪ್ಪಲದಿನ್ನಿ, ಮುಖಂಡರಾದ ಸಿದ್ದು ಕಟ್ಟಿಮನಿ, ದೌರ್ಜನ್ಯ ತಡೆ ಸಮೀತಿ ಸದಸ್ಯ ಮಲ್ಲು ತಳವಾರ, ಎಸ್. ಆರ್. ಕಟ್ಟೀಮನಿ, ಅಶೋಕ ಪಾದಗಟ್ಟಿ, ಶಿವಪುತ್ರ ಅಜಮನಿ, ಪ್ರಕಾಶ್ ಚಲವಾದಿ ಮಾತನಾಡಿದರು.

ಪುರಸಭೆ ಸದಸ್ಯ ಶಿವು ಶಿವಪೂರ, ಚಲವಾದಿ ಮಹಾಸಭೆ ತಾಲೂಕು ಅಧ್ಯಕ್ಷ ರೇವಣಪ್ಪ ಹರಿಜನ, ಯಲ್ಲಪ್ಪ ಚಲವಾದಿ, ಮಹಾಂತೇಶ ಚಲವಾದಿ, ಕೆ.ಎಂ.ಇಬ್ರಾಹಿಂಪೂರ, ಶ್ರೀಕಾಂತ ಚಲವಾದಿ, ಶರಣು ಚಲವಾದಿ, ಸಂಗು ಚಲವಾದಿ, ಸಿದ್ದು ಚಲವಾದಿ, ಮಂಜುನಾಥ ಬಸರಕೋಡ, ಪ್ರಶಾಂತ ಕಾಳೆ, ಮಂಜುನಾಥ್ ಕಟ್ಟಿಮನಿ, ದೇವರಾಜ್ ಹಂಗರಗಿ, ಎಚ್. ಆರ್. ಗಂಜಾಳ ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ