Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ಜ.6 ರಂದು ಈ ಭಾಗದಲ್ಲಿ ವಿದ್ಯುತ್ ವ್ಯತ್ಯಯ

ಮುದ್ದೇಬಿಹಾಳ : ತಾಲ್ಲೂಕಿನ 220-110ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ಬಸರಕೋಡದಿಂದ ಹಾಲಿ ಇರುವ 110

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಕೆಕೆಆರ್‌ಟಿಸಿ ನೂತನ ಘಟಕ ವ್ಯವಸ್ಥಾಪಕರಾಗಿ ಅಶೋಕಕುಮಾರ ಭೋವಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ಪಟ್ಟಣದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್‌ಟಿಸಿ) ಮುದ್ದೇಬಿಹಾಳ ಘಟಕಕ್ಕೆ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ;                                                                                          ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಚುನಾವಣೆ; ಠೇವಣಿ ಕಳೆದುಕೊಂಡ ಮಂಜೇಗೌಡ, ಭರ್ಜರಿ ಗೆಲುವು ಸಾಧಿಸಿದ ಆನಂದಗೌಡ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳಿ ನಿಯಮಿತ ಬೆಂಗಳೂರು ಈ

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ:                                                                               ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ಹೆಬ್ಬಾಳ ಪಬ್ಲಿಸಿಟಿ-ಜನರಕೂಗು ನ್ಯೂಸ್ ಕ್ಯಾಲೆಂಡರ್ ಬಿಡುಗಡೆ: ಸತ್ಯ ಸಂಗತಿಗಳಿಗೆ ಮಾಧ್ಯಮ ಧ್ವನಿಯಾಲಿ-ಸಿದ್ಧಲಿಂಗ ದೇವರು

ತಾಳಿಕೋಟಿ : ಮಾಧ್ಯಮಗಳು ಸಮಾಜದಲ್ಲಿ ನಡೆದಿರುವ ಸತ್ಯ ಸಂಗತಿಗಳ ಬಗ್ಗೆ ಬೆಳಕು ಚೆಲ್ಲಬೇಕು ಎಂದು

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮಡಿಕೇಶ್ವರದ ಹಾಲುಮತದ ಹಿರಿಯ ಜೀವಿ ಮಲ್ಲಮ್ಮ ರೂಡಗಿ ನಿಧನ

ಮುದ್ದೇಬಿಹಾಳ : ತಾಲ್ಲೂಕಿನ ಮಡಿಕೇಶ್ವರ ಗ್ರಾಮದ ನಿವಾಸಿ ಮಲ್ಲಮ್ಮ ಬಸಪ್ಪ ರೂಡಗಿ ಶುಕ್ರವಾರ ನಿಧನರಾದರು. ಅಂತ್ಯಕ್ರಿಯೆ ಜ.3 ರಂದು ಮದ್ಯಾಹ್ನ 3 ಕ್ಕೆ ಮಡಿಕೇಶ್ವರದಲ್ಲಿ ನಡೆಯಲಿದೆ. ಮೃತರು ಮುದ್ದೇಬಿಹಾಳ ಬಿಇಒ ಕಚೇರಿ ಅಧೀಕ್ಷಕಿ ಎನ್.ಬಿ.ರೂಡಗಿ,ಹಾರ್ವರ್ಡ್ ಪಿಯು ಕಾಲೇಜಿನ ಪ್ರಾಚಾರ್ಯೆ ಆರ್.ಬಿ.ರೂಡಗಿ ಅವರ ತಾಯಿಯವರು ಹಾಗೂ ಬಾಪೂಜಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎಂ.ನೆರಬೆಂಚಿ,ಹಿರಿಯ ವಕೀಲ ಎಸ್.ಬಿ.ಬಾಚಿಹಾಳ ಅವರ ಅತ್ತೆಯವರಾಗಿದ್ದಾರೆ. .

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ:                                               ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಆಧಾರ ರಹಿತ ಆರೋಪಗಳಿಗೆ ಬೆಲೆ ಇಲ್ಲ: ಮುದ್ದೇಬಿಹಾಳ : ಅಂಜುಮನ್ ಕಮೀಟಿಯಲ್ಲಿ ಅವ್ಯವಹಾರ ನಡೆದಿಲ್ಲ-ನಾಯ್ಕೋಡಿ

ಮುದ್ದೇಬಿಹಾಳ : ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿಯ ಅಧಿಕಾರ ವಹಿಸಿಕೊಂಡ ಅವಧಿಯಿಂದ ಮುಕ್ತಾಯದ ಅವಧಿಯವರೆಗೆ ನಾವು ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದೇವೆ ಹೊರತು ಒಂದು ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡಿಲ್ಲ.ಅAಜುಮನ್ ಸಂಸ್ಥೆಯ ಹಿತಚಿಂತಕರು ಈಚೇಗೆ ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನಿರಾಧಾರ ಎಂದು ಅಂಜುಮನ್ ಇಸ್ಲಾಂ ಕಮೀಟಿ ಮಾಜಿ ಅಧ್ಯಕ್ಷ ಅಲ್ಲಾಭಕ್ಷö್ಯ ನಾಯ್ಕೋಡಿ ಹೇಳಿದರು.ಪಟ್ಟಣದ ಅಂಜುಮನ್ ಇಸ್ಲಾಂ ಕಮೀಟಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯಲ್ಲಿ ನಡೆದಿರುವ ವ್ಯವಹಾರಗಳ ಲೆಕ್ಕಪತ್ರಗಳನ್ನು ಬಿಚ್ಚಿಟ್ಟರು. ನಮ್ಮ ಅವಧಿ ಆರಂಭವಾಗಿದ್ದೇ