Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಅಂಜುಮನ್ ಸಂಸ್ಥೆಯಲ್ಲಿ ನನ್ನ ಮಕ್ಕಳು ಕಲಿಯುತ್ತಾರಾ ?-ನಾಡಗೌಡ ಪ್ರಶ್ನೆ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಪವಿತ್ರವಾದ ಸಂಸ್ಥೆಯಾಗಿದೆ. ಅಂಜುಮನ್ ಕಮೀಟಿ ಹದಿನೈದು ವರ್ಷಗಳಿಂದ ಅಭಿವೃದ್ಧಿ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಹಸಿರು,ಅರ್ಧ ಚಂದ್ರ ಮುಸ್ಲಿಂರ ನಿಶಾನೆಯಲ್ಲ-ಲಾಲ್‌ಹುಸೇನ್ ಕಂದಗಲ್

ಮುದ್ದೇಬಿಹಾಳ : ಹಸಿರು ಬಣ್ಣ,ಅರ್ಧ ಚಂದ್ರಾಕೃತಿ,ನಕ್ಷತ್ರ ಇವು ಮುಸ್ಲಿಂರ ಗುರುತುಗಳಲ್ಲ.ಅದೇ ರೀತಿ ಕೇಸರಿ ಬಣ್ಣವೂ ಹಿಂದೂಗಳದ್ದಲ್ಲ.ಎಲ್ಲ ಬಣ್ಣಗಳು ಯಾವುದೇ ಒಂದು ಸಮುದಾಯಕ್ಕೆ ಸೇರಿಲ್ಲ.ಲಾಂಛನಗಳನ್ನು ನಾವು ಮಾಡಿಕೊಂಡು ನಮ್ಮ ನಮ್ಮಲ್ಲಿ ಬೇಧಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ ಎಂದು ಇಳಕಲ್‌ನ ಖ್ಯಾತ ಪ್ರವಚನಕಾರ ಲಾಲ್‌ಹುಸೇನ್ ಕಂದಗಲ್ ಹೇಳಿದರು. ಪಟ್ಟಣದ ಸಾರಿಗೆ ಘಟಕದಲ್ಲಿ ಬುಧವಾರ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾನವನ ಘನತೆ ಎತ್ತಿ ಹಿಡಿಯುವ ಕೆಲಸವನ್ನು ಪ್ರವಾದಿ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ:          ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

3056 ಜನರಿಗೆ ನೋಟಿಸ್ ಕೊಡಲು ಸಿದ್ಧತೆ: ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಂಟು ಹೊಸ ಮತಗಟ್ಟೆ ಸ್ಥಾಪನೆ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಬಳಿಕ ಕರಡು ಪಟ್ಟಿ ಪ್ರಕಟಿಸಲಾಗಿದ್ದು ಯಾರ ಹೆಸರು ಬಂದಿಲ್ಲವೋ ಅವರಿಗೆ ನೋಟಿಸ್ ಕೊಡುವ ಕಾರ್ಯ ಆರಂಭಗೊಳ್ಳಲಿದೆ ಎಂದು ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ ತಿಳಿಸಿದ್ದಾರೆ. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ ಕುರಿತು ಮಾಹಿತಿ ನೀಡಿದರು. ಜೂ.29,2026ರಲ್ಲಿ ಮತಕ್ಷೇತ್ರದ ಮತಗಟ್ಟೆ ಸಂಖ್ಯೆ 246 ಇದ್ದು ಪರಿಷ್ಕರಣೆಯ