Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ ತಿಪರೆಡ್ಡಿ ಭವಿಷ್ಯದಲ್ಲಿ ತಾವು ಸಲ್ಲಿಸುವ ಇಲಾಖೆಯಲ್ಲಿ ಉನ್ನತ ಸೇವೆ ಗಳಿಸುವಂತಾಗಲಿ ಎಂದು ಹೇಮರಡ್ಡಿ ಮಲ್ಲಮ್ಮ ಸೇವಾ ಸಂಸ್ಥೆಯ ನಿರ್ದೇಶಕ ಸುರೇಶಗೌಡ ಪಾಟೀಲ ಇಂಗಳಗೇರಿ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವರ್ಗಾವಣೆಗೊಂಡಿರುವ ಪಿಎಸ್‌ಐ ಸಂಜಯ ತಿಪರೆಡ್ಡಿ ದಂಪತಿಯ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ನೇರ,ನಿಷ್ಠುರ ಅಧಿಕಾರಿಯಾಗಿದ್ದ ತಿಪರೆಡ್ಡಿ ಅವರು ರಾಜ್ಯದಲ್ಲಿಯೇ ಮಾದರಿ