Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ 5.30 ಕ್ಕೆ ನಿಡಗುಂದಿ ತಾಲ್ಲೂಕು ಕಾಶಿನಕುಂಟಿ ಗ್ರಾಮದಲ್ಲಿ ಇಫ್ತಾರಕೂಟ ಹಮ್ಮಿಕೊಂಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಈ ಬಾರಿ ಎಂಟು ಕಡೆಗಳಲ್ಲಿ ಫೌಂಡೇಶನ್ ವತಿಯಿಂದ ಇಫ್ತಾರಕೂಟ ಆಯೋಜಿಸಲಾಗಿದೆ. ಇಂದು ಕಾಶಿನಕುಂಟಿ ಗ್ರಾಮದಲ್ಲಿ ನಡೆಯಲಿರುವ ಇಫ್ತಾರಕೂಟ ಕಾರ್ಯಕ್ರಮದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರಾದ ಸಿ.ಬಿ.ಅಸ್ಕಿ ಅವರು ಪಾಲ್ಗೊಳ್ಳಲಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಆಗಮಿಸಿ ಇಫ್ತಾರಕೂಟದಲ್ಲಿ ಪಾಲ್ಗೊಳ್ಳುವಂತೆ ಫೌಂಡೇಶನ್ ಸಾರ್ವಜನಿಕ ಸಂಪರ್ಕಾಧಿಕಾರಿ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾರ್ಟರ್ಸ್ನ ಸ್ಥಳವನ್ನು ಶನಿವಾರ ಪೊಲೀಸ್ ಅಧಿಕಾರಿಗಳು,ನಗರದ ಗಣ್ಯರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸರಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಗ್ರಾಮೀಣ ಪೊಲೀಸ್ ಠಾಣೆ ಆರಂಭಿಸಲಾಗುವುದು ಎಂದು ತಿಳಿಸಿದೆ.ನಾನು ಯಾವ