Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಮಾನವ ಬಂಧುತ್ವ ವೇದಿಕೆ ಖಂಡನೆ :                                ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮಾನವ ಬಂಧುತ್ವ ವೇದಿಕೆ ಖಂಡನೆ : ಏಐಸಿಸಿ ಅಧ್ಯಕ್ಷ ಖರ್ಗೆ ಭಾಷಣ ಮಾಡಿದ ಜಾಗೆ ಶುದ್ಧೀಕರಣ

ಮುದ್ದೇಬಿಹಾಳ : ಉತ್ತರಖಂಡದ ರಾಮಲೀಲಾ ಮೈದಾನದಲ್ಲಿನ ಸಾರ್ವಜನಿಕ ಸ್ಥಳದಲ್ಲಿ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಜಾನಪದ ಕ್ಷೇತ್ರದ ಪುನಃಶ್ಚೇತನಕ್ಕೆ ಶ್ರಮಿಸಿ-ಅಶೋಕ ತಡಸದ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿರುವ ಜನಪದ ಕಲೆಗಳನ್ನು,ಕಲಾವಿದರನ್ನು ಗುರುತಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಲು

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :               ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಬಾವಿ ನೀರು ಖಾಲಿಯಾದರೂ ಪತ್ತೆಯಾಗದ ತಂದೆ :   ತೋಟದ ಬಾವಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

ಮುದ್ದೇಬಿಹಾಳ : ಅಕ್ಕ ತಂಗಿಯರ ಶವ ಬಾವಿಯಲ್ಲಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ತಾಲ್ಲೂಕಿನ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ನಶಾಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಜ್ಞೆ : ಬಿ.ಕೆ. ಶೃತಿ

ವಿಜಯಪುರ: ನಾವು ನಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಲು ದುಶ್ಚಟಗಳಿಂದ ದೂರ ಇರಬೇಕೆಂದು ನಗರದ ಪ್ರಜಾಪಿತ ಬ್ರಹ್ಮಕುಮಾರಿ

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ  ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಕಲಾವಿದ,ಶಿಕ್ಷಕ ಗೋಪಾಲ ಹೂಗಾರ ಮಾದರಿ ನಡೆ: ಜನುಮದಿನದ ನಿಮಿತ್ಯ ಸರ್ಕಾರಿ ಶಾಲೆಯ 500 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್

ಮುದ್ದೇಬಿಹಾಳ : ಹಾಸ್ಯ ಕಲಾವಿದ ,ಶಿಕ್ಷಕ ಗೋಪಾಲ ಎನ್.ಹೂಗಾರ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಕಲಾಸಿಂಚನ ಸಾಂಸ್ಕೃತಿಕ ಸಂಸ್ಥೆಯಿoದ ಗೋಪಾಲ ಹೂಗಾರ ಅವರ ಜನುಮದಿನದ ನಿಮಿತ್ಯವಾಗಿ ಯರಗಲ್ಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 500 ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ವಿತರಿಸುವ ಕಾರ್ಯ ಕೈಗೊಳ್ಳಲಾಯಿತು. ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಬಿ.ಧಮ್ಮೂರಮಠ ಮಾತನಾಡಿ, ಭಗವಂತ ಎಲ್ಲರಿಗೂ ಎಲ್ಲವನ್ನೂ ಕೊಟ್ಟಿರುತ್ತಾನೆ. ಆದರೆ ಕೊಡುವ ಮನಸ್ಸನ್ನು ಕೆಲವರಿಗೆ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು:       ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಹೈಕೋರ್ಟ್ ಕದ ತಟ್ಟಿದ್ದ ನಾಲ್ವರಿಗೂ ಗೆಲುವು: ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆ ಫಲಿತಾಂಶ ಪ್ರಕಟ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಅಂಜುಮನ್ ಇಸ್ಲಾಂ ಕಮೀಟಿ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ನಾಮಪತ್ರ ತಿರಸ್ಕೃತಗೊಂಡು ಹೈಕೋರ್ಟ್ ಆದೇಶದೊಂದಿಗೆ ಕಣದಲ್ಲಿ ಉಳಿದಿದ್ದ ನಾಲ್ವರು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಅಂಜುಮನ್ ಹೈಸ್ಕೂಲ್‌ನಲ್ಲಿ ಸೋಮವಾರ ಸಂಜೆ 4.30ಕ್ಕೆ ಆರಂಭಗೊoಡ ಮತ ಎಣಿಕೆ ಕಾರ್ಯ ರಾತ್ರಿ 12 ಗಂಟೆಗೆ ಪೂರ್ಣಗೊಂಡಿತು.ಮತಎಣಿಕೆ ಕಾರ್ಯವನ್ನು ಕಂದಾಯ ಇಲಾಖೆಯವರಿಗೆ ವಹಿಸಿದ್ದರಿಂದ ಯಾವುದೇ ಗೊಂದಲಗಳಿಲ್ಲದoತೆ ಫಲಿತಾಂಶ ಪ್ರಕಟಿಸಲಾಯಿತು. ಚುನಾವಣಾಧಿಕಾರಿಯೂ ಆಗಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಔದ್ರಾಮ್,