Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಫೆ.19 ರಂದು ನೌಕಾಪಡೆ ನಿವೃತ ಯೋಧ ಸತೀಶ ನಾಯ್ಕಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : 15 ವರ್ಷಗಳ ಕಾಲ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿ ಮರಳಿ ತವರಿಗೆ ಆಗಮಿಸುತ್ತಿರುವ

ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು:                         ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ

ಸುಡುಗಾಡ ಸಿದ್ಧರ ಕುಟುಂಬಗಳಿಗೆ ನೆರವು: ಸಿಎಂ ಪರಿಹಾರ ನಿಧಿಯಿಂದ ಆರು ಲಕ್ಷ ರೂ. ಪರಿಹಾರ ಧನ ಬಿಡುಗಡೆ

ಮುದ್ದೇಬಿಹಾಳ : ತಾಲ್ಲೂಕಿನ ಶಿರೋಳ ಗ್ರಾಮದ ಹತ್ತಿರ ಕಾಲುವೆಯಲ್ಲಿ ನ.11, 2025ರಂದು ಒಂದೇ ಕುಟುಂಬದ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ:               ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಶಿವರಾತ್ರಿ ಅಂಗವಾಗಿ ದಿನಸಿ ಕಿಟ್,ಬಟ್ಟೆ ವಿತರಣೆ: ದಾನ ಕೊಡುವ ಪ್ರವೃತ್ತಿ ಬೆಳೆಸಿಕೊಳ್ಳಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಸಮಾಜದಲ್ಲಿ ಸಾಕಷ್ಟು ಜನ ಸಂಪತ್ತು ಹೊಂದಿದವರಿದ್ದಾರೆ.ಆದರೆ ಕೊಡುವ ಮನಸ್ಸು ಎಲ್ಲರಲ್ಲೂ ಇರುವುದಿಲ್ಲ.ನಿಸ್ವಾರ್ಥದಿಂದ

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಮಾಡಿದ ಮೋಮಿನ: ಮುದ್ದೇಬಿಹಾಳ : ಸಂತೆ ಕರ 15 ಲಕ್ಷ ರೂ.ಗೆ ಹರಾಜು

ಮುದ್ದೇಬಿಹಾಳ : ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿರುವ ಜಾಗೆಯಲ್ಲಿ ದೈನಂದಿನ ಸಂತೆ ಕರ ವಸೂಲಿಗಾಗಿ ಮಂಗಳವಾರ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ ಅವರ ಆರ್ಥಿಕ ಮಟ್ಟದ ವೃದ್ಧಿಗೆ ಸಹಕಾರ ಸಂಸ್ಥೆಗಳು ಶ್ರಮಿಸಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಂಗಡಗಿ ರಸ್ತೆಯಲ್ಲಿ ಸೋಮವಾರ ಕಮತಗಿಯ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಮುದ್ದೇಬಿಹಾಳ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮುದ್ದೇಬಿಹಾಳ ತಾಲ್ಲೂಕು ಆರ್ಥಿಕವಾಗಿ ಸುಧಾರಣೆಯಾಗುತ್ತಿರುವುದಕ್ಕೆ ಇಂದು ಹತ್ತಾರು ಸಹಕಾರಿ ಶಾಖೆಗಳು ಇಲ್ಲಿ ಆರಂಭಗೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ ತೋರಿಸುತ್ತದೆ.ಸಮಾನ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ;                    ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಸರದಿಯಲ್ಲಿ ನಿಂತು ಶಿವಲಿಂಗದ ದರ್ಶನ; ಎಲ್ಲೆಲ್ಲೂ ಅನುರಣಿಸಿದ ಶಿವನಾಮ

ಮುದ್ದೇಬಿಹಾಳ : ಪಟ್ಟಣದಾದ್ಯಂತ ಶಿವರಾತ್ರಿ ಅಂಗವಾಗಿ ಭಕ್ತರು ಭಾನುವಾರ ಸಂಜೆ ಶಿವನ ದೇವಾಲಯಗಳಲ್ಲಿ ಸರದಿಯಲ್ಲಿ ನಿಂತುಕೊoಡು ಈಶ್ವರ ಲಿಂಗದ ದರ್ಶನ ಪಡೆದುಕೊಂಡು ಪುನೀತರಾದರು. ದಿನವೀಡಿ ಉಪವಾಸ ವ್ರತ ಆಚರಿಸಿದ ಶಿವನ ಆರಾಧಕರು ಸಂಜೆ ವೇಳೆ ವಿವಿಧ ವಿಶೇಷ ಖಾದ್ಯಗಳನ್ನು ತಯಾರಿಸಿ ಶಿವಲಿಂಗಕ್ಕೆ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಅಂತ್ಯಗೊಳಿಸಿದರು. ಪಟ್ಟಣದ ಕಿಲ್ಲಾದ ಹಳೇ ಈಶ್ವರಲಿಂಗ ದೇವಸ್ಥಾನ, ವಿಜಯ ವಿಠ್ಠಲ ಮಂದಿರ,ಕಾಶೀ ವಿಶ್ವನಾಥ ದೇವಸ್ಥಾನ,ಮರುಳಸಿದ್ದಪ್ಪನ ಗುಡಿ, ಹಳೇ ಕೋರ್ಟ್ ಆವರಣದಲ್ಲಿರುವ ಈಶ್ವರ