Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ:              ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಅಸ್ಕಿ ಫೌಂಡೇಶನ್ ಜನಸೇವೆ ಶ್ಲಾಘನೀಯ: ಪವನಸುತನ ನಾಡಲ್ಲಿ ಅಸ್ಕಿ ಫೌಂಡೇಶನ್ ದಿನದರ್ಶಿಕೆ ಬಿಡುಗಡೆ

ಆಲಮಟ್ಟಿ : ಇಲ್ಲಿಗೆ ಸಮೀಪದ ಯಲಗೂರು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಾಂಗ್ರೆಸ್ ಮುಖಂಡ,

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ ಸಾರಿಗೆ ಘಟಕಕ್ಕೆ ಕೆಕೆಆರ್‌ಟಿಸಿ ಎಂ.ಡಿ ಭೇಟಿ: 40 ಲಕ್ಷ ರೂ.ವೆಚ್ಚದಲ್ಲಿ ನಿಲ್ದಾಣದ ಕಾಂಕ್ರಿಟ್,ಶೌಚಗೃಹ ನಿರ್ಮಾಣ

ಮುದ್ದೇಬಿಹಾಳ : ಪಟ್ಟಣದ ಸಾರಿಗೆ ಘಟಕದಲ್ಲಿ ಶೌಚಾಲಯ ನಿರ್ಮಾಣ ಹಾಗೂ ನಿಲ್ದಾಣದ ಆವರಣದಲ್ಲಿ ಕಾಂಕ್ರಿಟ್

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ:                                                                           ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ಮುಳುಗಡೆ ಸಂತ್ರಸ್ತ ರೈತರಿಗೆ ಎಕರೆಗೆ 35-40 ಲಕ್ಷ ಪರಿಹಾರ: ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರದ ಅಸಹಕಾರ : ಡಿಸಿಎಂ ಡಿ.ಕೆ.ಶಿ ಅಸಮಾಧಾನ

ವಿಜಯಪುರ : “ಕೃಷ್ಣಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಸಹಕಾರ ನೀಡುತ್ತಿಲ್ಲ. ಈ ಯೋಜನೆಗೆ

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮಹಿಳೆಯರು ಹಿಂದೂ ಸಮ್ಮೇಳನ ಯಶಸ್ವಿಗೊಳಿಸಿ-ಕಾಶೀಬಾಯಿ ರಾಂಪೂರ

ಮುದ್ದೇಬಿಹಾಳ : ಪಟ್ಟಣದಲ್ಲಿ ಜ.11 ರಂದು ನಡೆಯಲಿರುವ ಹಿಂದೂ ಮಹಾ ಸಮ್ಮೇಳನ ಯಶಸ್ವಿಗೊಳಿಸುವಂತೆ ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಕಿತ್ತೂರ ಕರ್ನಾಟಕ ಮಹಿಳಾ ಘಟಕದ ಅಧ್ಯಕ್ಷೆ ಕಾಶೀಬಾಯಿ ರಾಂಪೂರ ವಿನಂತಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಮ್ಮೇಳನದಲ್ಲಿ ಎಲ್ಲ ಜಾತಿ ಜನಾಂಗದವರು ಪಾಲ್ಗೊಳ್ಳಲಿದ್ದು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದ್ದಾರೆ.ಹಿಂದೂ ಸಮ್ಮೇಳನದ ಅಂಗವಾಗಿ ವಿವಿಧ ಕಡೆಗಳಲ್ಲಿ ಸ್ವತಃ ತಿರುಗಾಡಿ ಸಮ್ಮೇಳನದ ಕರಪತ್ರಗಳನ್ನು ವಿತರಿಸಿ ಸಮ್ಮೇಳನಕ್ಕೆ ಆಹ್ವಾನಿಸಿದ್ದಾರೆ.

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ಜನಪರ ಸೇವೆಯಲ್ಲಿ ಅಸ್ಕಿ ಫೌಂಡೇಶನ್ ಸದಾ ಮುಂದೆ-ಸಿದ್ಧಲಿಂಗ ದೇವರು

ತಾಳಿಕೋಟಿ :  ಕೊಡುಗೈ ದಾನಿಗಳಲ್ಲಿ ಈ ಭಾಗದಲ್ಲಿ ಒಳ್ಳೆಯ ಹೆಸರು ಸಂಪಾದಿಸಿರುವ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಅಸ್ಕಿ ಫೌಂಡೇಶನ್ ಅತ್ಯುತ್ತಮ ಕೆಲಸ ಮಾಡುತ್ತಿದೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಕಾರಿ ಸಿದ್ಧಲಿಂಗ ದೇವರು ನುಡಿದರು.        ತಾಳಿಕೋಟಿ ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಗುರುವಾರ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ನೂತನ ವರ್ಷದ ದಿನದರ್ಶಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.         ಮಠದ ಆಡಳಿತಾಧಿಕಾರಿ ವೇ.ಮರುಗೇಶ ವಿರಕ್ತಮಠ ಮಾತನಾಡಿ, ಹಣವುಳ್ಳವರು ಸಮಾಜದಲ್ಲಿ