Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ

ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಗೆ ಬಿರಾದಾರ ನೇಮಕ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿ ವರ್ತಕ ಮಲ್ಲನಗೌಡ ಬಿರಾದಾರ ಅವರನ್ನು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆಯ ಅಭಿವೃದ್ಧಿಗೆ ಕೈ ಜೋಡಿಸೋಣ

ಮುದ್ದೇಬಿಹಾಳ : ಮುಸ್ಲಿಂ ಸಮಾಜದ ಪ್ರಾತಿನಿಧಿಕ ಸಂಸ್ಥೆ ಅಂಜುಮನ್ ಇಸ್ಲಾಂ ಕಮೀಟಿಗೆ ಆಡಳಿತ ಮಂಡಳಿ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಬಸರಕೋಡ ಪಿಕೆಪಿಎಸ್‌ಗೆ ಅವಿರೋಧ ಆಯ್ಕೆ : ಮತ್ತೆ ಹೇಮರೆಡ್ಡಿ ಮೇಟಿ ಪೆನಲ್‌ಗೆ ಮುನ್ನಡೆ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ವಿವಿಧೋದ್ಧೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ 12

MUDDEBIHAL :  ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

MUDDEBIHAL : ಕಾಲುವೆಯಲ್ಲಿ ಜಾರಿ ಬಿದ್ದು ಮೂವರು ಕಣ್ಮರೆ : ಮುಂದುವರೆದ ಶೋಧ ಕಾರ್ಯ

ಮುದ್ದೇಬಿಹಾಳ ತಾಲ್ಲೂಕಿನ ಶಿರೋಳ ಗ್ರಾಮದ ಸಮೀಪದಲ್ಲಿ ಕಾಲುವೆಯಲ್ಲಿ ಕಾಲು ಜಾರಿ ಮೂವರು ಬಿದ್ದಿರುವ ಘಟನೆ

3500 ರೂ.ದರ ನಿಗದಿಗೊಳಿಸುವವರೆಗೂ ಕಬ್ಬು ಪೂರೈಕೆ ಸ್ಥಗಿತಕ್ಕೆ ರೈತರ ನಿರ್ಧಾರ

3500 ರೂ.ದರ ನಿಗದಿಗೊಳಿಸುವವರೆಗೂ ಕಬ್ಬು ಪೂರೈಕೆ ಸ್ಥಗಿತಕ್ಕೆ ರೈತರ ನಿರ್ಧಾರ

ಮುದ್ದೇಬಿಹಾಳ : ಕಬ್ಬಿಗೆ 3500 ರೂ.ದರ ನಿಗದಿ ಮಾಡುವವರೆಗೂ ಕಬ್ಬು ಕಟಾವು ಮಾಡಲು ಕಾರ್ಖಾನೆಯವರು ಆದೇಶ ನೀಡಬಾರದು.ಅಲ್ಲಿಯವರೆಗೂ ನಾವು ಹೋರಾಟ ಬಿಟ್ಟು ಕದಲುವುದಿಲ್ಲ ಎಂದು ರೈತ ಮುಖಂಡರು ತಿಳಿಸಿದರು. ತಾಲ್ಲೂಕಿನ ಯರಗಲ್ ಮದರಿ ಬಳಿ ಇರುವ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರಾö್ಯಕ್ಟರ್‌ಗಳನ್ನು ತಂಗಡಗಿ ಗ್ರಾಮದ ಸಮೀಪದಲ್ಲಿರುವ ಅಮರಗೋಳ ಕ್ರಾಸ್‌ನಲ್ಲಿ ನಿಲುಗಡೆ ಮಾಡಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಈ ನಿರ್ಧಾರವನ್ನು ಅಧಿಕಾರಿಗಳಿಗೆ ಪ್ರತಿಭಟನಾಕಾರರು ತಿಳಿಸಿದ್ದಾರೆ. ರೈತ ಸಂಘದ ಅಧ್ಯಕ್ಷ ಬಾಲಪ್ಪಗೌಡ

ಮುದ್ದೇಬಿಹಾಳ : ತಾಪಂ ಸಹಾಯಕ ನಿರ್ದೇಶಕರಾಗಿ ಗಣಾಚಾರಿ(ಪ್ರ) ನೇಮಕ

ಮುದ್ದೇಬಿಹಾಳ : ತಾಪಂ ಸಹಾಯಕ ನಿರ್ದೇಶಕರಾಗಿ ಗಣಾಚಾರಿ(ಪ್ರ) ನೇಮಕ

ಮುದ್ದೇಬಿಹಾಳ : ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರಿಗೆ ನೂರು ದಿನಗಳ ಖಾತರಿ ಕೊಡುವ ಯೋಜನೆಯಾಗಿದ್ದು 370 ರೂ.ದಿನಗೂಲಿ ನೀಡುತ್ತಿದೆ ಎಂದು ತಾಪಂ ನೂತನ ಪ್ರಭಾರ ಸಹಾಯಕ ನಿರ್ದೇಶಕ ಎಸ್.ಎಸ್.ಗಣಾಚಾರಿ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಹಿಂದಿನ ಅಧಿಕಾರಿ ಪಿ.ಎಸ್.ಕಸನಕ್ಕಿ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ನೇಮಕವಾದ ಬಳಿಕ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು. ರೈತರ ಹೊಲದಲ್ಲಿ ಬದು ನಿರ್ಮಾಣ, ಕೃಷಿ ಹೊಂಡ ಕೆಲಸಗಳಿಗೆ ಪಂಚಾಯಿತಿಯಿAದ ಆದ್ಯತೆ