Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಎಕರೆಗೆ 50 ಸಾವಿರ ರೂ.ಪರಿಹಾರ ನೀಡಿ-ಎನ್.ರವಿಕುಮಾರ್

ಮುದ್ದೇಬಿಹಾಳ : ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕ ಭಾಗದಲ್ಲಿ ಭೀಕರ ಬರಗಾಲ ತಲೆದೋರಿದ್ದು ರೈತರ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾತಿಯಾಗಿದ್ದು ಅದನ್ನು ಕೂಡಲೇ ಕಾರ್ಯಾರಂಭಗೊಳಿಸಲು ಕ್ರಮ ಜರುಗಿಸುವಂತೆ ಮುದ್ದೇಬಿಹಾಳದ ಜನಸೇವಾ ಸಂಸ್ಥೆಯ ಪದಾಧಿಕಾರಿಗಳು ಬೆಳಗಾವಿ ಐಜಿಪಿ ಸಂದೀಪ್ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದ್ದ ವೇಳೆ ಐಜಿಪಿ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜನಸೇವಾ ಸಂಸ್ಥೆಯ ಅಧ್ಯಕ್ಷ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ದೊರಕಿದ್ದು ಶೀಘ್ರದಲ್ಲಿ ಪ್ರಕರಣವನ್ನು ಬೇಧಿಸಲಾಗುವುದು ಎಂದು ಬೆಳಗಾವಿ ಉತ್ತರ ವಲಯ ಐಜಿಪಿ ಸಂದೀಪ ಪಾಟೀಲ್ ಹೇಳಿದರು. ತಾಲ್ಲೂಕಿನ ಬಸರಕೋಡ ಗ್ರಾಮದ ಐತಿಹಾಸಿಕ ಶ್ರೀ ಪವಾಡ ಬಸವೇಶ್ವರ ದೇವಾಲಯಕ್ಕೆ ಮಂಗಳವಾರ ಭೇಟಿ ನೀಡಿದ್ದ ಅವರು ದೇವಸ್ಥಾನದ ಕರ್ತೃಗದ್ದುಗೆ ಮೇಲಿನ 32 ಕೆಜಿ ಬೆಳ್ಳಿಯ ಕವಚ ಕಳ್ಳತನ ಪ್ರಕರಣದ ಕುರಿತು ವಿಜಯಪುರ ಎಸ್ಪಿ