Protest in front of Kuntoji Grama

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಕುಂಟೋಜಿ ಗ್ರಾಪಂ ಮುಂದೆ ಧರಣಿ: ನಕಲಿ ದಾಖಲೆ ಸೃಷ್ಟಿಸಿ ನೇಮಕವಾದ ವಾಟರ್‌ಮನ್‌ಗಳ ವಜಾಗೆ ಆಗ್ರಹ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮ ಪಂಚಾಯಿತಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನೇಮಕಗೊಂಡಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರದಿಂದ ಮಾದಿಗ ಜನಸಂಘದ ಪದಾಧಿಕಾರಿಗಳು ಧರಣಿ ಸತ್ಯಾಗ್ರಹ ಆರಂಭಿಸಿದರು.

ಹೋರಾಟದ ನೇತೃತ್ವ ವಹಿಸಿದ ಜಿಲ್ಲಾ ದೌರ್ಜನ್ಯ ತಡೆ ಸಮಿತಿ ಮಾಜಿ ಸದಸ್ಯ ಬಸವರಾಜ ಪೂಜಾರಿ, ಗ್ರಾಮ ಪಂಚಾಯಿತಿ ಪಿಡಿಒ, ಅಧ್ಯಕ್ಷರು ಸೇರಿಕೊಂಡು ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿಯಮಬಾಹಿರವಾಗಿ ಕೆಲಸದಲ್ಲಿ ಮುಂದುವರೆದಿರುವ ಮೂವರು ವಾಟರ್‌ಮನ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಆದೇಶ ಮಾಡಿದ್ದರೂ ಅದಕ್ಕೆ ಬೆಲೆ ಕೊಡದೇ ಅವರನ್ನು ಹಾಗೆ ಮುಂದುವರೆಸಿದ್ದಾರೆ. ಅಕ್ರಮವಾಗಿ ನೇಮಕಗೊಂಡಿರುವ ವಾಟರ್‌ಮನ್‌ಗಳಿಂದ ಪಿಡಿಒ, ಅಧ್ಯಕ್ಷರು ಲಂಚ ಪಡೆದುಕೊಂಡಿದ್ದಾರೆಯೇ ಎಂಬ ಅನುಮಾನ ಸೃಷ್ಟಿಯಾಗಿದೆ. ಮೇಲಧಿಕಾರಿಯಾಗಿರುವ ತಾಪಂ ಇಒ ಅವರು ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು ಹಾರಿಕೆ ಉತ್ತರಗಳನ್ನು ಕೊಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಕ್ಕೆ ವಂಚಿಸುತ್ತಿರುವ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನಧಿಕೃತವಾಗಿ ಸರ್ಕಾರದ ವೇತನವನ್ನೂ ಪಡೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿರುವ ಪಂಚಾಯಿತಿ ಅಧ್ಯಕ್ಷ, ಪಿಡಿಒ ವಿರುದ್ಧವೂ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ತಾಪಂ ಇಒ ನಿಂಗಪ್ಪ ಮಸಳಿ ಹೋರಾಟಗಾರರ ಮನವೊಲಿಸಲು ಯತ್ನಿಸಿದರೂ ವಾಟರ್‌ಮನ್‌ಗಳ ವಜಾಗೊಳಿಸಿದ ಬಳಿಕವೇ ನಮ್ಮ ಹೋರಾಟ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರಿಂದ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಅಧಿಕಾರಿ ವಾಪಸ್ ಮರಳಿದರು.

ಮಾದಿಗ ಸಮಾಜದ ಮುಖಂಡರಾದ ರಮೇಶ ದೊಡ್ಡಮನಿ, ಶಿವಪುತ್ರಪ್ಪ ಪೂಜಾರಿ, ದುರಗಪ್ಪ ಮಾದರ, ಹಣಮಂತ ಅಬ್ಬಿಹಾಳ, ರಾಮಪ್ಪ ಕವಡಿಮಟ್ಟಿ,ಕುಂಟಪ್ಪ ಜೋಗಿನ , ಪರಶುರಾಮ ಫಿರಂಗಿ, ಮುದಕಪ್ಪ ಫಿರಂಗಿ, ಹಣಮಂತ ಕವಡಿಮಟ್ಟಿ ಮೊದಲಾದವರು ಇದ್ದರು.

Latest News

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ ಕ್ಷೇತ್ರದಿಂದ ನಾಲ್ಕು ಸಾವಿರ ಜನ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ನನಗೆ ಬಿ.ಎಸ್.ಯಡಿಯೂರಪ್ಪನವರು ರಾಜಕೀಯ ಗುರುಗಳು.ರಾಜಕೀಯ ಭವಿಷ್ಯ ಕಲ್ಪಿಸಿದ ಮಾರ್ಗದರ್ಶಕರಾಗಿದ್ದಾರೆ.ಮೇ.9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ:                ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ: ಮುದ್ದೇಬಿಹಾಳ : ಗುರುಸ್ಪಂದನ ಶಿಕ್ಷಕರ ಬಳಗಕ್ಕೆ ಮತ್ತೆ ಮುನ್ನಡೆ

ಮುದ್ದೇಬಿಹಾಳ : ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಒಟ್ಟು ಮೂರು ಪೆನಲ್‌ಗಳು ಸ್ಪರ್ಧಿಸಿದ್ದವು.ಅದರಲ್ಲಿ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳ ನಿರ್ಲಕ್ಷ : ರೈತರ ಆಕ್ರೋಶ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್ ಅಡಿ ನಿರ್ಮಿಸಲಾದ ಕಾಲುವೆ ಸಂಖ್ಯೆ 16ಎ- ಲ್ಯಾಟರಲ್ ನಂ.2 ಕಾಲುವೆ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಪ್ರಥಮ ವರ್ಷದಲ್ಲಿಯೇ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಮೂವರು ಡಿಸ್ಟಿಂಕ್ಷನ್,ಮೂವರು ಪ್ರಥಮ ದರ್ಜೆ,ಇಬ್ಬರು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ದೀಪಾ ಹರಿಂದ್ರಾಳ 90% ರಷ್ಟು ಅಂಕ ಪಡೆದು ಶಾಲೆಗೆ ಪ್ರಥಮ, ದೀಕ್ಷಾ ಬೂದಿಹಾಳ 86.24% ದ್ವಿತೀಯ ಸ್ಥಾನ ಹಾಗೂ ಪೂಜಾ ಕೆಸರಗೊಪ್ಪ 85.12 % ಪಡೆದುಕೊಂಡಿದ್ದಾರೆ. ಕನ್ನಡ ವಿಷಯಕ್ಕೆ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಪ್ರಥಮ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ. 100 ರಷ್ಟು ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಮೊದಲ ಬ್ಯಾಚ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ. ಸುಮೈಯಾ ವೈ. ಮುಲ್ಲಾ: ಶೇ. 96.32 ಶಾಲೆಗೆ ಪ್ರಥಮ,ಜವೇರಿಯಾ ಅಂಬರ್ ಕೆ. ಯತ್ತಿನಮನಿ ಶೇ. 94.56 ಹಾಗೂ ಉಮ್ಮೆಐಮನ್ ಎಸ್. ಯಲಿಗಾರ್