ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ

ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ


ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

   ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ