ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ

ಮುದ್ದೇಬಿಹಾಳದಲ್ಲಿ ಪ್ರತಿಭಟನಾ ರ‍್ಯಾಲಿ : ವಕ್ಫ್ ಕಾಯ್ದೆ ರದ್ದುಗೊಳಿಸಲು ವಿ.ಎಚ್.ಪಿ, ಬಜರಂಗ ದಳ ಆಗ್ರಹ


ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.ಮುದ್ದೇಬಿಹಾಳ : ವಕ್ಭ್ ಕಾಯ್ದೆ ರದ್ದುಗೊಳಿಸಿ ರೈತರ ಜಮೀನುಗಳಲ್ಲಿ ವಕ್ಭ್ ಹೆಸರು ಕಡಿಮೆ ಮಾಡಿ ಹೊಸ ಪಹಣಿಗಳನ್ನು ಸರ್ಕಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷತ್ ತಾಲ್ಲೂಕು ಅಧ್ಯಕ್ಷ ಶಿವಯೋಗೆಪ್ಪ ರಾಂಪೂರ ಆಗ್ರಹಿಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳ,ಮಾಜಿ ಸೈನಿಕರ ಸಂಘದ ನೇತೃತ್ವದಲ್ಲಿ ಸೋಮವಾರ ವಕ್ಭ್ ಕಾಯ್ದೆ ರದ್ದುಗೊಳಿಸಲು ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಒಂದು ಸಮುದಾಯದ ಓಲೈಕೆಗಾಗಿ ರಚಿಸಿರುವ ವಕ್ಭ್ ಬೋರ್ಡ್ ರದ್ದುಗೊಳಿಸಬೇಕು. ರೈತರಿಗೆ ಅನ್ಯಾಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದಲ್ಲಿ ಅಳಿಗಾಲ ಶುರುವಾಗಿದೆ ಎಂದು ಹೇಳಿದರು.

ಮಾಜಿ ಸೈನಿಕ ಪಿ.ಜಿ.ಬಿರಾದಾರ ಮಾತನಾಡಿ, ಕುಂಟೋಜಿ, ಬಿದರಕುಂದಿ, ಬಿಜ್ಜೂರ, ನಾಲತವಾಡ ಭಾಗದಲ್ಲಿ ಹಲವು ಜಮೀನುಗಳಲ್ಲಿ ವಕ್ಭ್ ಹೆಸರು ದಾಖಲಾಗಿದೆ.ಪ್ರಜಾಪ್ರಭುತ್ವ ಸರ್ಕಾರ ಎಂದು ಹೇಳಿಕೊಂಡೇ ಪ್ರಜೆಗಳ ಹಕ್ಕುಗಳನ್ನು ದಮನ ಮಾಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಆರೋಪಿಸಿದರು.

   ಬಿಜೆಪಿ ಮುಖಂಡ ಪ್ರಭು ಕಡಿ ಮಾತನಾಡಿದರು.ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಪುರಸಭೆ ಮಾಜಿ ಸದಸ್ಯ ಬಸವರಾಜ ನಂದಿಕೇಶ್ವರಮಠ, ಬಿಜೆಪಿ ಮಂಡಲ ಅಧ್ಯಕ್ಷ ಜಗದೀಶ ಪಂಪಣ್ಣವರ, ಸಂಜೀವ ಬಾಗೇವಾಡಿ, ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾನಪ್ಪ ನಾಯಕ, ರವೀಂದ್ರ ಬಿರಾದಾರ, ಪುನೀತ ಹಿಪ್ಪರಗಿ, ಸಂಗಮೇಶ ಹತ್ತಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಗಿರೀಶ ಪಾಟೀಲ್ ಇದ್ದರು.ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ, ರಾಮನಗೌಡ ಸಂಕನಾಳ ಭದ್ರತೆ ಒದಗಿಸಿದ್ದರು.ಅಂಬೇಡ್ಕರ ಸರ್ಕಲ್‌ನಲ್ಲಿ ಹೋರಾಟಗಾರರು ಕೆಲಕಾಲ ರಸ್ತಾ ರೋಕೋ ಚಳವಳಿ ನಡೆಸಿದರು.ಎತ್ತು ಹಾಗೂ ಗಾಡಿಗಳೊಂದಿಗೆ ಹೋರಾಟದಲ್ಲಿ ರೈತ ಸಂಘಟನೆಯವರು ಪಾಲ್ಗೊಂಡಿದ್ದರು.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ