ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ ಸಂಕಷ್ಟ ಎದುರಿಸುತ್ತವೆ. ನಾಗರಿಕರು ಇದನ್ನು ಅರಿತು ತಮ್ಮ ಮನೆಯ ಮುಂದೆ ಕಾಂಪೌOಡ್, ಮಾಳಿಗೆಯ ಮೇಲೆ, ಗಿಡಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಮಾನವೀಯ ಕೆಲಸ ಮಾಡಬೇಕೆಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಮನವಿ ಮಾಡಿದರು.

ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ಶುಕ್ರವಾರ ವಿಶ್ವ ಗುಬ್ಬಚ್ಚಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರು ತಮ್ಮ ಮದುವೆ ವಾರ್ಷಿಕೋತ್ಸವ, ಮಕ್ಕಳ ಹುಟ್ಟುಹಬ್ಬದ ಸಮಯದಲ್ಲಿ ದುಂದುವೆಚ್ಚ ಮಾಡುವುದರ ಬದಲು ಪರಿಸರ ಪ್ರೀತಿಯ ಗಿಡಗಳ ನೆಡುವಿಕೆ ಮಾಡಬೇಕೆಂದರು.

ಹಸಿರು ತೋರಣ ಬಳಗದ ಅಧ್ಯಕ್ಷ ಅಮರೇಶ ಗೂಳಿ ಮಾತನಾಡಿ, ಪ್ರತೀ ವರ್ಷವೂ ನಮ್ಮ ಬಳಗವು ಪಕ್ಷಿ ಸಂಕುಲ ಉಳಿಸಲು ಗುಬ್ಬಚ್ಚಿಗಳ ದಿನಾಚರಣೆ ಮಾಡುತ್ತಿದ್ದೇವೆ ಎಂದರು. ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಗುಬ್ಬಚ್ಚಿಗಳು ರೈತನ ಮಿತ್ರರು. ಪರಿಸರದ ಸಮತೋಲನ ಕಾಪಾಡುವ ಕೆಲಸವನ್ನು ಪಕ್ಷಿಗಳು ಮಾಡುತ್ತವೆ. ನಮ್ಮ ಮನೆಗಳಲ್ಲಿ ಪಕ್ಷಿಗಳಿಗೆ ನೀರು ಇಡುವ, ಆಹಾರ ಧಾನ್ಯ ಕೊಡುವ ಕೆಲಸ ಮಾಡಬೇಕೆಂದರು.

ಬಳಗದ ಮಾಜಿ ಅಧ್ಯಕ್ಷ ರವಿ ಗೂಳಿ ಮಾತನಾಡಿ, ಪ್ರಾಣಿ ಪಕ್ಷಿಗಳಿಗೂ ಈ ಭೂಮಿಯ ಮೇಲೆ ಜೀವಿಸುವ ಹಕ್ಕಿದ್ದು ಅವುಗಳ ಸಂರಕ್ಷಣೆ ನಮ್ಮ ಜವಾಬ್ದಾರಿ ಎಂದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎಚ್.ವೈ.ಪಾಟೀಲ, ಡಾ.ವೀರೇಶ ಇಟಗಿ ಮಾತನಾಡಿದರು.

ಬಳಗದ ಕಾರ್ಯದರ್ಶಿ ಬಸವರಾಜ ಬಿಜ್ಜೂರ, ಉಪಾಧ್ಯಕ್ಷ ವಿಲಾಸರಾವ್ ದೇಶಪಾಂಡೆ, ಗೌರವಾಧ್ಯಕ್ಷ ಸೋಮಶೇಖರ ಚೀರಲದಿನ್ನಿ, ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ಬಿ.ಎಸ್.ಮೇಟಿ, ರಾಜಶೇಖರ ಕಲ್ಯಾಣಮಠ, ಬಿ.ಎಚ್.ಬಳಬಟ್ಟಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಸುರೇಶ ಕಲಾಲ, ವೆಂಕನಗೌಡ ಪಾಟೀಲ, ಜಿ.ಎಂ.ಹುಲಗಣ್ಣಿ, ಪರಶುರಾಮ ಕೂಡಗಿ, ವೀರೇಶ ಢವಳಗಿ, ವೀರೇಶ ಹಂಪನಗೌಡ್ರ, ಡಾ.ವಿಜಯಕುಮಾರ ಗೂಳಿ, ಅಮರೇಶ ಐಹೊಳೆ, ಬಿ.ಎಂ.ಪಲ್ಲೇದ, ವಿನಯ ಹಿರೇಮಠ, ಡಾ.ಚಂದ್ರಶೇಖರ ಶಿವಯೋಗಿಮಠ, ಮಹೇಶ ಕೆಂದೂಳಿ, ವಿರುಪಾಕ್ಷಿ ಪತ್ತಾರ, ಪ್ರೀತಮ ಕೆಂದೂಳಿ ಮತ್ತಿತರರು ಇದ್ದರು. ಬಳಗದ ಕಾರ್ಯದರ್ಶಿ ಬಸವರಾಜ ಬಿಜ್ಜೂರ ವಂದಿಸಿದರು.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ