ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ ಸಂಕಷ್ಟ ಎದುರಿಸುತ್ತವೆ. ನಾಗರಿಕರು ಇದನ್ನು ಅರಿತು ತಮ್ಮ ಮನೆಯ ಮುಂದೆ ಕಾಂಪೌOಡ್, ಮಾಳಿಗೆಯ ಮೇಲೆ, ಗಿಡಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಮಾನವೀಯ ಕೆಲಸ ಮಾಡಬೇಕೆಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಮನವಿ ಮಾಡಿದರು.

ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ಶುಕ್ರವಾರ ವಿಶ್ವ ಗುಬ್ಬಚ್ಚಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರು ತಮ್ಮ ಮದುವೆ ವಾರ್ಷಿಕೋತ್ಸವ, ಮಕ್ಕಳ ಹುಟ್ಟುಹಬ್ಬದ ಸಮಯದಲ್ಲಿ ದುಂದುವೆಚ್ಚ ಮಾಡುವುದರ ಬದಲು ಪರಿಸರ ಪ್ರೀತಿಯ ಗಿಡಗಳ ನೆಡುವಿಕೆ ಮಾಡಬೇಕೆಂದರು.

ಹಸಿರು ತೋರಣ ಬಳಗದ ಅಧ್ಯಕ್ಷ ಅಮರೇಶ ಗೂಳಿ ಮಾತನಾಡಿ, ಪ್ರತೀ ವರ್ಷವೂ ನಮ್ಮ ಬಳಗವು ಪಕ್ಷಿ ಸಂಕುಲ ಉಳಿಸಲು ಗುಬ್ಬಚ್ಚಿಗಳ ದಿನಾಚರಣೆ ಮಾಡುತ್ತಿದ್ದೇವೆ ಎಂದರು. ಸಂಚಾಲಕ ಮಹಾಬಲೇಶ್ವರ ಗಡೇದ ಮಾತನಾಡಿ, ಗುಬ್ಬಚ್ಚಿಗಳು ರೈತನ ಮಿತ್ರರು. ಪರಿಸರದ ಸಮತೋಲನ ಕಾಪಾಡುವ ಕೆಲಸವನ್ನು ಪಕ್ಷಿಗಳು ಮಾಡುತ್ತವೆ. ನಮ್ಮ ಮನೆಗಳಲ್ಲಿ ಪಕ್ಷಿಗಳಿಗೆ ನೀರು ಇಡುವ, ಆಹಾರ ಧಾನ್ಯ ಕೊಡುವ ಕೆಲಸ ಮಾಡಬೇಕೆಂದರು.

ಬಳಗದ ಮಾಜಿ ಅಧ್ಯಕ್ಷ ರವಿ ಗೂಳಿ ಮಾತನಾಡಿ, ಪ್ರಾಣಿ ಪಕ್ಷಿಗಳಿಗೂ ಈ ಭೂಮಿಯ ಮೇಲೆ ಜೀವಿಸುವ ಹಕ್ಕಿದ್ದು ಅವುಗಳ ಸಂರಕ್ಷಣೆ ನಮ್ಮ ಜವಾಬ್ದಾರಿ ಎಂದರು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎಚ್.ವೈ.ಪಾಟೀಲ, ಡಾ.ವೀರೇಶ ಇಟಗಿ ಮಾತನಾಡಿದರು.

ಬಳಗದ ಕಾರ್ಯದರ್ಶಿ ಬಸವರಾಜ ಬಿಜ್ಜೂರ, ಉಪಾಧ್ಯಕ್ಷ ವಿಲಾಸರಾವ್ ದೇಶಪಾಂಡೆ, ಗೌರವಾಧ್ಯಕ್ಷ ಸೋಮಶೇಖರ ಚೀರಲದಿನ್ನಿ, ಮಾಜಿ ಅಧ್ಯಕ್ಷರಾದ ನಾಗಭೂಷಣ ನಾವದಗಿ, ಅಶೋಕ ರೇವಡಿ, ಬಿ.ಎಸ್.ಮೇಟಿ, ರಾಜಶೇಖರ ಕಲ್ಯಾಣಮಠ, ಬಿ.ಎಚ್.ಬಳಬಟ್ಟಿ, ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಸುರೇಶ ಕಲಾಲ, ವೆಂಕನಗೌಡ ಪಾಟೀಲ, ಜಿ.ಎಂ.ಹುಲಗಣ್ಣಿ, ಪರಶುರಾಮ ಕೂಡಗಿ, ವೀರೇಶ ಢವಳಗಿ, ವೀರೇಶ ಹಂಪನಗೌಡ್ರ, ಡಾ.ವಿಜಯಕುಮಾರ ಗೂಳಿ, ಅಮರೇಶ ಐಹೊಳೆ, ಬಿ.ಎಂ.ಪಲ್ಲೇದ, ವಿನಯ ಹಿರೇಮಠ, ಡಾ.ಚಂದ್ರಶೇಖರ ಶಿವಯೋಗಿಮಠ, ಮಹೇಶ ಕೆಂದೂಳಿ, ವಿರುಪಾಕ್ಷಿ ಪತ್ತಾರ, ಪ್ರೀತಮ ಕೆಂದೂಳಿ ಮತ್ತಿತರರು ಇದ್ದರು. ಬಳಗದ ಕಾರ್ಯದರ್ಶಿ ಬಸವರಾಜ ಬಿಜ್ಜೂರ ವಂದಿಸಿದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ