PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

ಯಾದಗಿರಿ: ನಗರ ಠಾಣೆಯ ಪಿಎಸ್‌ಐ ಪರಶುರಾಮ್ ತಂಕಾಸದ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳ ತಂಡ, ಗುರುವಾರ ಅವರ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿ ಸಮೀಪದ ಸೋಮನಾಳ ಗ್ರಾಮದಿಂದ ಗುರುವಾರ ಯಾದಗಿರಿಗೆ ಆಗಮಿಸಿದ ಪರಶುರಾಮ್ ಅವರ ತಂದೆ ಜನಕಮುನಿ, ಸಹೋದರ ಹನುಮಂತ, ಮಾವ ವೆಂಕಟಸ್ವಾಮಿ ಹಾಗೂ ಸ್ನೇಹಿತ ಯರ್ರಿಸ್ವಾಮಿ ಮತ್ತಿತರರು ಸಿಐಡಿ ಅಧಿಕಾರಿಗಳ ಎದುರು ತಮಗೆ ತಿಳಿದ ಮಾಹಿತಿ ನೀಡಿದ್ದಾರೆ.

ಸಿಐಡಿ ಎಸ್‌ಪಿ ಋತ್ವಿಕ್ ಶಂಕರ್ ಹಾಗೂ ಡಿವೈಎಸ್ ಪಿ ಪುನೀತ್ ಹಾಗೂ ಇನ್ನಿತರ ಅಧಿಕಾರಿಗಳ ತಂಡ ಮಾಹಿತಿ ಪಡೆದಿದೆ.

ಇಲ್ಲಿನ ಡಿವೈಎಸ್‌ಪಿ ಕಚೇರಿಗೆ ಆಗಮಿಸಿದ ಕುಟುಂಬ ಸ್ಥರಿಂದ ಮಾಹಿತಿ ಪಡೆದು, ನಂತರ ನೇರವಾಗಿ ಪೊಲೀಸ್ ವಸತಿ ಗೃಹದ ಪರಶುರಾಮ್ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿ ದ್ದಾರೆ. ಮನೆಯಲ್ಲಿ ಇಲಾಖಾ ರಿವಾಲ್ವರ್ (ಬಂದೂಕು) ವಾಕಿಟಾಕಿ ಕಂಡುಬಂದಿದೆ. 2 ಮೊಬೈಲ್‌ಗಳನ್ನೂ ಜಪ್ತಿ ಮಾಡಿದ್ದಾರೆ. ನೆಲದ ಮೇಲೆ ಬಿದ್ದಿದ್ದ ರಕ್ತದ ಕಲೆ ಹಾಗೂ ಮತ್ತಿತರ ಕೆಲ ವಸ್ತುಗಳನ್ನು ಲ್ಯಾಬ್‌ಗೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ.

ಇದನ್ನೂ ಓದಿ: ಬೈಕ್‌ಗೆ ಡಿಕ್ಕಿಯಾಗಿ ಕಾರಿಗೆ ಸಿಲುಕಿದ ಶವವನ್ನು 1 ಕಿ.ಮೀ ಎಳೆದೊಯ್ದ ಭೂಪ!

ಪರಿಶೀಲನೆ ವೇಳೆ 27.33 ಲಕ್ಷ ನಗದು, ಶಾಸಕರ ಚನ್ನಾರೆಡ್ಡಿ ಹೆಸರಿನ ಖಾಲಿ ಲೆಟರ್ ಹೆಡ್ ಪತ್ತೆಯಾಗಿದ್ದು, ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಪರತುರಾಮ್ ಅವರು ಸ್ವಗ್ರಾಮದಲ್ಲಿ ತಾಯಿ ಹೆಸರಲ್ಲಿನ ಪ್ರಾಟ್ ಮಾರಿ ಹಣ ಪಡೆದಿದ್ದರು ಎನ್ನಲಾಗಿದೆ.

ಕಾರಟಗಿಯಲ್ಲಿರುವ ತಮ್ಮ ಸ್ನೇಹಿತರ ಜೊತೆ ಮಾತನಾಡಿದ್ದ ಪರಕುರಾಜ್, 12 ಲಕ್ಷ ಹಣದ ಸಹಾಯ ಕೇಳಿದ್ದರು. ಒಂದು ವಾರದ ನಂತರ ಹಣ ಕೊಡುವುದಾಗಿ ಸ್ನೇಹಿತ ಹೇಳಿದಾಗ, ಅಷ್ಟರಲ್ಲೇ ನೌಕರಿ ಹೋಗುತ್ತದೆ ಎಂದಿದ್ದರು ಎಂದು ಕುಟುಂದ ಮೂಲಗಳು ತಿಳಿಸಿವೆ.

Latest News

JavaScript isn’t montys millions slot free spins readily available

ArticlesTotally free Revolves | montys millions slot free spinsTrendy Fruits Slot

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಬಡವರ ಸ್ನೇಹದಿಂದ ಬದುಕಿನ ಪಾಠ-ಇಬ್ರಾಹಿಂ ಮುಲ್ಲಾ

ಮುದ್ದೇಬಿಹಾಳ : ಸಿರಿವಂತರು ಸಿರಿವಂತಿಕೆಯ ಬಗ್ಗೆ ಮಾತನಾಡುತ್ತಾರೆಯೇ ಹೊರತು ಬಡವರ ಕುರಿತು ಮಾತನಾಡುವುದು ಅಪರೂಪ.ಆದರೆ ಬಡವನ ಸ್ನೇಹ ಮಾಡಿದರೆ ಆತ ಬದುಕಿನ ಅನುಭವದ ಪಾಠ ಹೇಳುತ್ತಾನೆ ಎಂದು ಹಿರಿಯ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಹೇಳಿದರು. ಪಟ್ಟಣದ ಗಣೇಶ ನಗರದಲ್ಲಿ ಕಾರ್ಮಿಕ ಮುಖಂಡ ಇಬ್ರಾಹಿಂ ಮುಲ್ಲಾ ಅವರ ನೇತೃತ್ವದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸದಾಶಿವ ಮಠ ಹಾಗೂ ಮೊಹ್ಮದ ರಫೀಕ ಶಿರೋಳ ಅವರ ತಂದೆಯವರು ನನಗೆ ಆಪ್ತರು.ಅವರ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ