PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

ಯಾದಗಿರಿ: ನಗರ ಠಾಣೆಯ ಪಿಎಸ್‌ಐ ಪರಶುರಾಮ್ ತಂಕಾಸದ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳ ತಂಡ, ಗುರುವಾರ ಅವರ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿ ಸಮೀಪದ ಸೋಮನಾಳ ಗ್ರಾಮದಿಂದ ಗುರುವಾರ ಯಾದಗಿರಿಗೆ ಆಗಮಿಸಿದ ಪರಶುರಾಮ್ ಅವರ ತಂದೆ ಜನಕಮುನಿ, ಸಹೋದರ ಹನುಮಂತ, ಮಾವ ವೆಂಕಟಸ್ವಾಮಿ ಹಾಗೂ ಸ್ನೇಹಿತ ಯರ್ರಿಸ್ವಾಮಿ ಮತ್ತಿತರರು ಸಿಐಡಿ ಅಧಿಕಾರಿಗಳ ಎದುರು ತಮಗೆ ತಿಳಿದ ಮಾಹಿತಿ ನೀಡಿದ್ದಾರೆ.

ಸಿಐಡಿ ಎಸ್‌ಪಿ ಋತ್ವಿಕ್ ಶಂಕರ್ ಹಾಗೂ ಡಿವೈಎಸ್ ಪಿ ಪುನೀತ್ ಹಾಗೂ ಇನ್ನಿತರ ಅಧಿಕಾರಿಗಳ ತಂಡ ಮಾಹಿತಿ ಪಡೆದಿದೆ.

ಇಲ್ಲಿನ ಡಿವೈಎಸ್‌ಪಿ ಕಚೇರಿಗೆ ಆಗಮಿಸಿದ ಕುಟುಂಬ ಸ್ಥರಿಂದ ಮಾಹಿತಿ ಪಡೆದು, ನಂತರ ನೇರವಾಗಿ ಪೊಲೀಸ್ ವಸತಿ ಗೃಹದ ಪರಶುರಾಮ್ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿ ದ್ದಾರೆ. ಮನೆಯಲ್ಲಿ ಇಲಾಖಾ ರಿವಾಲ್ವರ್ (ಬಂದೂಕು) ವಾಕಿಟಾಕಿ ಕಂಡುಬಂದಿದೆ. 2 ಮೊಬೈಲ್‌ಗಳನ್ನೂ ಜಪ್ತಿ ಮಾಡಿದ್ದಾರೆ. ನೆಲದ ಮೇಲೆ ಬಿದ್ದಿದ್ದ ರಕ್ತದ ಕಲೆ ಹಾಗೂ ಮತ್ತಿತರ ಕೆಲ ವಸ್ತುಗಳನ್ನು ಲ್ಯಾಬ್‌ಗೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ.

ಇದನ್ನೂ ಓದಿ: ಬೈಕ್‌ಗೆ ಡಿಕ್ಕಿಯಾಗಿ ಕಾರಿಗೆ ಸಿಲುಕಿದ ಶವವನ್ನು 1 ಕಿ.ಮೀ ಎಳೆದೊಯ್ದ ಭೂಪ!

ಪರಿಶೀಲನೆ ವೇಳೆ 27.33 ಲಕ್ಷ ನಗದು, ಶಾಸಕರ ಚನ್ನಾರೆಡ್ಡಿ ಹೆಸರಿನ ಖಾಲಿ ಲೆಟರ್ ಹೆಡ್ ಪತ್ತೆಯಾಗಿದ್ದು, ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಪರತುರಾಮ್ ಅವರು ಸ್ವಗ್ರಾಮದಲ್ಲಿ ತಾಯಿ ಹೆಸರಲ್ಲಿನ ಪ್ರಾಟ್ ಮಾರಿ ಹಣ ಪಡೆದಿದ್ದರು ಎನ್ನಲಾಗಿದೆ.

ಕಾರಟಗಿಯಲ್ಲಿರುವ ತಮ್ಮ ಸ್ನೇಹಿತರ ಜೊತೆ ಮಾತನಾಡಿದ್ದ ಪರಕುರಾಜ್, 12 ಲಕ್ಷ ಹಣದ ಸಹಾಯ ಕೇಳಿದ್ದರು. ಒಂದು ವಾರದ ನಂತರ ಹಣ ಕೊಡುವುದಾಗಿ ಸ್ನೇಹಿತ ಹೇಳಿದಾಗ, ಅಷ್ಟರಲ್ಲೇ ನೌಕರಿ ಹೋಗುತ್ತದೆ ಎಂದಿದ್ದರು ಎಂದು ಕುಟುಂದ ಮೂಲಗಳು ತಿಳಿಸಿವೆ.

Latest News

PSI ಪತ್ನಿ ಆತ್ಮಹತ್ಯೆ!

PSI ಪತ್ನಿ ಆತ್ಮಹತ್ಯೆ!

ಬಳ್ಳಾರಿ: PSI ಪತಿ ಹಾಗೂ ಇಬ್ಬರು ಮಕ್ಕಳನ್ನ ರೆಡಿ ಮಾಡಿ, ಧ್ವಜಾರೋಹಣಕ್ಕೆ ಕಳಿಸಿದ ಬಳಿಕ

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಮಹಿಳೆ ಗರ್ಭಕೋಶದಿಂದ 17 ಕೆ.ಜಿ. ಗೆಡ್ಡೆ ತೆಗೆದ ಇಎಸ್‌ಐಸಿ ಆಸ್ಪತ್ರೆ ವೈದ್ಯರು

ಬೆಂಗಳೂರು: ಮಹಿಳೆಯ ಗರ್ಭಕೋಶದಿಂದ ಮಹತ್ವದ ಶಸ್ತ್ರ ಚಿಕಿತ್ಸೆ ನಡೆಸಿದ ರಾಜಾಜಿನಗರದ ಇಎಸ್‌ಐಸಿ, ಎಂಸಿ ಪಿಜಿಐಎಂಎಸ್‌ಆರ್

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರ: ಕಲ್ಲಪ್ಪ ಜಂಜಿಗಡ್ಡಿ

ನಾರಾಯಣಪುರ : ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ ಎಂದು ಕೊಡೇಕಲ್ ಉಪತಶೀಲ್ದಾರ ಕಲ್ಲಪ್ಪ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಸರಕಾರದ ನಿರ್ಲಕ್ಷಕ್ಕೊಳಗಾದ ಸ್ವಾತಂತ್ರ್ಯ ಹೋರಾಟಗಾರ ಸಂಗಪ್ಪ ಮಂಟೆ

ಕೊಡೇಕಲ್ : ‘ಬರೀ ಭ್ರಷ್ಟಾಚಾರ ಮರಾಯ, ನಾನು ಬ್ರಿಟಿಷ್ ಕಾಲದಲ್ಲಿ ಇಂತಹ ಅವ್ಯವಸ್ಥೆ ದುರಾಡಳಿತ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಪಹಲ್ಗಾಮ್ ದಾಳಿಗೆ ಭಾರತದ ಸಮರ್ಥ ಪ್ರತ್ಯುತ್ತರ : ಶಾಸಕ ನಾಡಗೌಡ

ಮುದ್ದೇಬಿಹಾಳ : ನಮ್ಮಲ್ಲಿರುವ ಆಂತರಿಕ ಭಿನ್ನಭಿಪ್ರಾಯವೇ ದೇಶದ ನಾಗರಿಕರ ಮೇಲಿನ ದಾಳಿಗಳಂತಹ ಘಟನೆಗಳಿಗೆ ವೈರಿ ರಾಷ್ಟ್ರಗಳು ಕೈ ಹಾಕುತ್ತಿವೆ. ನಾವೆಲ್ಲ ಭಾರತ ಅಖಂಡವಾಗಿ ಉಳಿಯುವ ಸಂಕಲ್ಪವನ್ನು ಮಾಡಬೇಕಾಗಿದೆ. ಪಹಲ್ಗಾಮ್ ದಾಳಿಗೆ ಆಪರೇಷನ್ ಸಿಂಧೂರ ಮೂಲಕ ಸಮರ್ಥವಾಗಿ ಭಾರತದ ಸೇನಾಶಕ್ತಿ ಪ್ರತ್ಯುತ್ತರ ಕೊಟ್ಟಿದೆ ಎಂದು ಮೆಲಕು ಹಾಕಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ತಾಲ್ಲೂಕು ಆಡಳಿತ ಸೌಧ ಆವರಣದಲ್ಲಿ ಶುಕ್ರವಾರ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಜನಪರ ಆಡಳಿತವನ್ನು ಜನಸಾಮಾನ್ಯರಿಗೆ ತಲುಪಿಸುವುದೇ ನಮ್ಮ ಸರ್ಕಾರದ ಮೂಲ ಉದ್ದೇಶ: ಸಚಿವ ಲಾಡ್

ಧಾರವಾಡ, ಆ.15: ಸ್ವಾತಂತ್ರ್ಯ ದಿನವು ಕೇವಲ ರಜಾ ದಿನವಲ್ಲ, ಬದಲಾಗಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಧನ್ಯವಾದ ಹೇಳಲು ಮತ್ತು ಅವರ ಮೌಲ್ಯಗಳನ್ನು ನೆನಪಿಸಿಕೊಳ್ಳಲು ಒಂದು ಅವಕಾಶ. ನಮ್ಮ ಧ್ವಜವನ್ನು ಹಾರಿಸುವುದು, ನಮ್ಮ ಇತಿಹಾಸವನ್ನು ನೆನಪಿಸಿಕೊಳ್ಳುವುದು ಮತ್ತು ಏಕತೆಯ ಮನೋಭಾವವನ್ನು ರೂಢಿಸಿಕೊಳ್ಳುವ ದಿನವಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್ ಲಾಡ್ ಅವರು ಹೇಳಿದರು. ಧಾರವಾಡ ಜಿಲ್ಲಾಡಳಿತವು ಆರ್ ಎನ್ ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ