PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

PSI ಸಾವು ಪ್ರಕರಣ; ಶಾಸಕ ಚೆನ್ನಾರಡ್ಡಿ ವಿರುದ್ಧ ಮಹತ್ವದ ಸಾಕ್ಷ್ಯ ಲಭ್ಯ

ಯಾದಗಿರಿ: ನಗರ ಠಾಣೆಯ ಪಿಎಸ್‌ಐ ಪರಶುರಾಮ್ ತಂಕಾಸದ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳ ತಂಡ, ಗುರುವಾರ ಅವರ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ.

ಕೊಪ್ಪಳ ಜಿಲ್ಲೆ ಗಂಗಾವತಿ ಸಮೀಪದ ಸೋಮನಾಳ ಗ್ರಾಮದಿಂದ ಗುರುವಾರ ಯಾದಗಿರಿಗೆ ಆಗಮಿಸಿದ ಪರಶುರಾಮ್ ಅವರ ತಂದೆ ಜನಕಮುನಿ, ಸಹೋದರ ಹನುಮಂತ, ಮಾವ ವೆಂಕಟಸ್ವಾಮಿ ಹಾಗೂ ಸ್ನೇಹಿತ ಯರ್ರಿಸ್ವಾಮಿ ಮತ್ತಿತರರು ಸಿಐಡಿ ಅಧಿಕಾರಿಗಳ ಎದುರು ತಮಗೆ ತಿಳಿದ ಮಾಹಿತಿ ನೀಡಿದ್ದಾರೆ.

ಸಿಐಡಿ ಎಸ್‌ಪಿ ಋತ್ವಿಕ್ ಶಂಕರ್ ಹಾಗೂ ಡಿವೈಎಸ್ ಪಿ ಪುನೀತ್ ಹಾಗೂ ಇನ್ನಿತರ ಅಧಿಕಾರಿಗಳ ತಂಡ ಮಾಹಿತಿ ಪಡೆದಿದೆ.

ಇಲ್ಲಿನ ಡಿವೈಎಸ್‌ಪಿ ಕಚೇರಿಗೆ ಆಗಮಿಸಿದ ಕುಟುಂಬ ಸ್ಥರಿಂದ ಮಾಹಿತಿ ಪಡೆದು, ನಂತರ ನೇರವಾಗಿ ಪೊಲೀಸ್ ವಸತಿ ಗೃಹದ ಪರಶುರಾಮ್ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿ ದ್ದಾರೆ. ಮನೆಯಲ್ಲಿ ಇಲಾಖಾ ರಿವಾಲ್ವರ್ (ಬಂದೂಕು) ವಾಕಿಟಾಕಿ ಕಂಡುಬಂದಿದೆ. 2 ಮೊಬೈಲ್‌ಗಳನ್ನೂ ಜಪ್ತಿ ಮಾಡಿದ್ದಾರೆ. ನೆಲದ ಮೇಲೆ ಬಿದ್ದಿದ್ದ ರಕ್ತದ ಕಲೆ ಹಾಗೂ ಮತ್ತಿತರ ಕೆಲ ವಸ್ತುಗಳನ್ನು ಲ್ಯಾಬ್‌ಗೆ (ಎಫ್‌ಎಸ್‌ಎಲ್) ಕಳುಹಿಸಲಾಗಿದೆ.

ಇದನ್ನೂ ಓದಿ: ಬೈಕ್‌ಗೆ ಡಿಕ್ಕಿಯಾಗಿ ಕಾರಿಗೆ ಸಿಲುಕಿದ ಶವವನ್ನು 1 ಕಿ.ಮೀ ಎಳೆದೊಯ್ದ ಭೂಪ!

ಪರಿಶೀಲನೆ ವೇಳೆ 27.33 ಲಕ್ಷ ನಗದು, ಶಾಸಕರ ಚನ್ನಾರೆಡ್ಡಿ ಹೆಸರಿನ ಖಾಲಿ ಲೆಟರ್ ಹೆಡ್ ಪತ್ತೆಯಾಗಿದ್ದು, ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಪರತುರಾಮ್ ಅವರು ಸ್ವಗ್ರಾಮದಲ್ಲಿ ತಾಯಿ ಹೆಸರಲ್ಲಿನ ಪ್ರಾಟ್ ಮಾರಿ ಹಣ ಪಡೆದಿದ್ದರು ಎನ್ನಲಾಗಿದೆ.

ಕಾರಟಗಿಯಲ್ಲಿರುವ ತಮ್ಮ ಸ್ನೇಹಿತರ ಜೊತೆ ಮಾತನಾಡಿದ್ದ ಪರಕುರಾಜ್, 12 ಲಕ್ಷ ಹಣದ ಸಹಾಯ ಕೇಳಿದ್ದರು. ಒಂದು ವಾರದ ನಂತರ ಹಣ ಕೊಡುವುದಾಗಿ ಸ್ನೇಹಿತ ಹೇಳಿದಾಗ, ಅಷ್ಟರಲ್ಲೇ ನೌಕರಿ ಹೋಗುತ್ತದೆ ಎಂದಿದ್ದರು ಎಂದು ಕುಟುಂದ ಮೂಲಗಳು ತಿಳಿಸಿವೆ.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು