ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಯಾದಗಿರಿ: ನಗರ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ ಅವರ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು. ಇದರಲ್ಲಿ ಪ್ರಭಾವಿಗಳ ಹೆಸರು ಕೇಳಿ ಬರುತ್ತಿದ್ದು, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.

ಪಿಎಸ್ಐ ಪರಶುರಾಮ ಅವರ ಪತ್ನಿ ಶ್ವೇತಾ ಅವರು ಏಳು ತಿಂಗಳ ಗರ್ಭಿಣಿ. ಅವರ ಕುಟುಂಬ ನಿರ್ವಹಣೆಗೆ ನನ್ನ ಎರಡು ತಿಂಗಳ ಶಾಸಕ ಸಂಬಳ ನೀಡುತ್ತೇನೆ ಹಾಗೂ ರಾಜ್ಯ ಸರ್ಕಾರವು ಸಹ ಮೃತ ಪಿಎಸ್ಐ ಕುಟುಂಬಕ್ಕೆ ನ್ಯಾಯ ಒದಗಿಸಿ ಆರ್ಥಿಕ ನೆರವು ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ನಗರ ಪೊಲೀಸ್ ಠಾಣೆಗೆ ಬಂದು ಇನ್ನು ಒಂದು ವರ್ಷವೂ ಪೂರ್ಣಗೊಂಡಿರಲಿಲ್ಲ. ಆಗಲೇ ಪಿಎಸ್ಐ ಪರಶುರಾಮ ಅವರಿಗೆ ವರ್ಗಾವಣೆಯಾಗಿದ್ದು ಅವೈಜ್ಞಾನಿಕ. ವರ್ಗಾವಣೆ ಜಿಲ್ಲೆಯಲ್ಲಿ ಹೆಚ್ಚಾಗಿದೆ.‌ ಗೃಹ ಇಲಾಖೆ ಹಾಗೂ‌ ಇಲಾಖೆ ಮೇಲಾಧಿಕಾರಿಗಳು ಪಿಎಸ್ಐ ಪರಶುರಾಮ ಅವರ ಸಾವಿಗೆ ಹಾಗೂ ಅವರ ಪತ್ನಿ ಶ್ವೇತಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಶಾಸಕ ಕಂದಕೂರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Latest News

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮೂರುವರೆ ವರ್ಷದಲ್ಲಿ 500 ಕಾರ್ಯಕರ್ತರ ಮೇಲೆ ಎಫ್.ಐ.ಆರ್-ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ತಾಲ್ಲೂಕು ಬರಪೀಡಿತ ಎಂದು ಘೋಷಣೆಗೆ ಸ್ಥಳ ಪರಿಶೀಲನೆಗೆ ಆದೇಶ ಮಾಡಿದ್ದಾರೆ.ಅಧಿಕೃತವಾಗಿ ಬರಪೀಡಿತ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ ಬರಪೀಡಿತ ತಾಲ್ಲೂಕು ಘೋಷಣೆ ; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮುದ್ದೇಬಿಹಾಳ : ಬರಪೀಡಿತ ತಾಲ್ಲೂಕು ಪಟ್ಟಿಯಲ್ಲಿ ಮುದ್ದೇಬಿಹಾಳ ತಾಲ್ಲೂಕು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು,ನಾಡಗೌಡರ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ:                                ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಅಧ್ಯಕ್ಷ ಬಿ.ಎಂ.ಇಸ್ಲಾoಪೂರ ಹೇಳಿಕೆ: ಬಸವಜ್ಯೋತಿ ಪತ್ತಿನ ಸಹಕಾರ ಸಂಘಕ್ಕೆ 13.56 ಲಕ್ಷ ರೂ.ಲಾಭ

ಮುದ್ದೇಬಿಹಾಳ : ಸನ್ 2025-26ನೇ ಸಾಲಿನ ವರದಿ ವರ್ಷದಲ್ಲಿ ಸಂಘದ ಆದಾಯ ಒಟ್ಟು 1.04

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ:                              ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಬರ ಪರಿಸ್ಥಿತಿಯಲ್ಲಿ ಸರ್ಕಾರ ನೆರವು ನೀಡಲಿ: ರೈತರ ಸಾಲ,ಬಡ್ಡಿ ಮನ್ನಾಕ್ಕೆ ಆಗ್ರಹ-ಬಿ.ಕೆ.ಬಿರಾದಾರ

ಮುದ್ದೇಬಿಹಾಳ : ಪ್ರಕೃತಿ ವಿಕೋಪ ಹಾಗೂ ತೀವ್ರ ಬರಪೀಡಿತ ಸಂದರ್ಭದಲ್ಲಿ ರೈತರಿಗೆ ನೆರವು ಒದಗಿಸುವ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ ಪಟ್ಟಣ ಬಂದ್ ಸಂಪೂರ್ಣ ಯಶಸ್ವಿ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ನೇತೃತ್ವದಲ್ಲಿ ಶನಿವಾರ ಕರೆ ನೀಡಿದ್ದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ನಡೆಸುತ್ತಿದ್ದ ಹೋರಾಟದ ಭಾಗವಾಗಿ ಆರನೇ ದಿನದ ಪ್ರತಿಭಟನೆಯನ್ನು ಮುದ್ದೇಬಿಹಾಳ ಬಂದ್ ಕರೆ ನೀಡುವ ಮೂಲಕ ಮುಂದುವರೆಸಲಾಗಿತ್ತು.ಬoದ್‌ಗೆ ವ್ಯಾಪಾರಸ್ಥರು,ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಮುದ್ದೇಬಿಹಾಳ ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಎಲ್ಲ ಅಂಗಡಿ

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ 50 ಸಾವಿರ ರೂ.ಗಳಿಂದ ಗರಿಷ್ಠ 5 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ ಪಡೆಯಬಹುದಾಗಿದೆ.ಫಲಾನುಭವಿಗಳು ಯೋಜನೆಯ ಸದುಪಯೋಗ ಪಡೆದುಕೊಂಡು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಶಿವಾನಂದ ಪಿ. ಹೇಳಿದರು. ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಚೇರಿಯಲ್ಲಿ ಶುಕ್ರವಾರ ನಡೆದ ಸಿಡ್ಬಿ ಸಮೃದ್ಧಿ