ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಮೃತ PSI ಪರಶುರಾಮ ಕುಟುಂಬಕ್ಕೆ 2 ತಿಂಗಳ ಸಂಬಳ ನೀಡಿದ ಶಾಸಕ ಕಂದಕೂರು,‌ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ

ಯಾದಗಿರಿ: ನಗರ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ ಅವರ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು. ಇದರಲ್ಲಿ ಪ್ರಭಾವಿಗಳ ಹೆಸರು ಕೇಳಿ ಬರುತ್ತಿದ್ದು, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರು ಅವರು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದಾರೆ.

ಪಿಎಸ್ಐ ಪರಶುರಾಮ ಅವರ ಪತ್ನಿ ಶ್ವೇತಾ ಅವರು ಏಳು ತಿಂಗಳ ಗರ್ಭಿಣಿ. ಅವರ ಕುಟುಂಬ ನಿರ್ವಹಣೆಗೆ ನನ್ನ ಎರಡು ತಿಂಗಳ ಶಾಸಕ ಸಂಬಳ ನೀಡುತ್ತೇನೆ ಹಾಗೂ ರಾಜ್ಯ ಸರ್ಕಾರವು ಸಹ ಮೃತ ಪಿಎಸ್ಐ ಕುಟುಂಬಕ್ಕೆ ನ್ಯಾಯ ಒದಗಿಸಿ ಆರ್ಥಿಕ ನೆರವು ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

ನಗರ ಪೊಲೀಸ್ ಠಾಣೆಗೆ ಬಂದು ಇನ್ನು ಒಂದು ವರ್ಷವೂ ಪೂರ್ಣಗೊಂಡಿರಲಿಲ್ಲ. ಆಗಲೇ ಪಿಎಸ್ಐ ಪರಶುರಾಮ ಅವರಿಗೆ ವರ್ಗಾವಣೆಯಾಗಿದ್ದು ಅವೈಜ್ಞಾನಿಕ. ವರ್ಗಾವಣೆ ಜಿಲ್ಲೆಯಲ್ಲಿ ಹೆಚ್ಚಾಗಿದೆ.‌ ಗೃಹ ಇಲಾಖೆ ಹಾಗೂ‌ ಇಲಾಖೆ ಮೇಲಾಧಿಕಾರಿಗಳು ಪಿಎಸ್ಐ ಪರಶುರಾಮ ಅವರ ಸಾವಿಗೆ ಹಾಗೂ ಅವರ ಪತ್ನಿ ಶ್ವೇತಾ ಅವರಿಗೆ ನ್ಯಾಯ ಒದಗಿಸಬೇಕು ಎಂದು ಶಾಸಕ ಕಂದಕೂರು ಪತ್ರದಲ್ಲಿ ಆಗ್ರಹಿಸಿದ್ದಾರೆ.

Latest News

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ ಎಸ್.ಆಯ್.ಆರ್ ಪ್ರಗತಿಯನ್ನು ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲ್ಲೂಕಿನ ನೇಬಗೇರಿಯ ಭಾಗ ಸಂಖ್ಯೆ 211 ಹಾಗೂ 212ರಲ್ಲಿ,ಮುದ್ದೇಬಿಹಾಳದ ಕಿಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿರುವ ತಹಶೀಲ್ದಾರರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊAಡಿರುವ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ;                                                                                          ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮಹಿಳಾ ಆಯೋಗದ ಅಧ್ಯಕ್ಷೆ ಹೆಸರು ದುರುಪಯೋಗ ಮಾಡಿಲ್ಲ; ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುದ್ದೇಬಿಹಾಳ : ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ‘ಡಿ’ ದರ್ಜೆ ಸಿಬ್ಬಂದಿ ಕುಸುಮಾ ಹುಡೇದ ಅವರು ಮಂಗಳವಾರ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ನಾನೇ ಕಾರಣ ಎಂದು ಆರೋಪಿಸಿದ್ದು, ಅದರಲ್ಲಿ ನನ್ನದು ಯಾವುದೇ ಪಾತ್ರವಿಲ್ಲ.ನನ್ನ ಹೋರಾಟವನ್ನು ಹತ್ತಿಕ್ಕಲು ಈ ಸಂಚು ಕೆಲವರು ರೂಪಿಸಿದ್ದಾರೆ ಎಂದು ಪ್ರತ್ಯಾರೋಪ ಮಾಡಿರುವ ಯುವಕ ವೀರೇಶ ಆಲಕೊಪ್ಪರ ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆಸ್ಪತ್ರೆಯ ಎದುರಿಗೆ