ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ ಎನ್.ಎ.ಬಿರಾಜದಾರ ಅವರು ಜನಮನ್ನಣೆ ಗಳಿಸಿದ್ದಾರೆ ಎಂದು ಢವಳಗಿ ಸನಾತನ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು.

ತಾಲೂಕಿನ ಢವಳಗಿ ಗ್ರಾಮದ ಸ್ವತಂತ್ರö್ಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎನ್.ಎ.ಬಿರಾಜದಾರ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.ಎಲ್ಲರಿಗೂ ಬೇಕಾಗಿ ಕೆಲಸ ಮಾಡುವವರು ವಿರಳ.ಆದರೆ ಬಿರಾಜದಾರ ಗುರುಗಳ ವಿಷಯದಲ್ಲಿ ಹಾಗಲ್ಲ.ಅವರು ಎಲ್ಲರನ್ನು ಸ್ನೇಹಭಾವದಿಂದ ಕಂಡು ಪ್ರೀತಿಯಿಂದಲೇ ಸೇವೆ ಸಲ್ಲಿಸಿದವರು ಎಂದು ಹೇಳಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಢವಳಗಿ ಸ್ವತಂತ್ರö್ಯ ಪಪೂ ಕಾಲೇಜು ನಿವೃತ್ತ ಪ್ರಾಚಾರ್ಯ ಎನ್.ಎ.ಬಿರಾಜದಾರ ಅವರು, ವಿದ್ಯಾರ್ಥಿಗಳು ತೋರುತ್ತಿದ್ದ ಪ್ರೀತಿ,ಸಹದ್ಯೋಗಿಗಳೊಂದಿಗೆ ಹೊಂದಿದ ಒಡನಾಟವೇ ಎಲ್ಲರ ಪ್ರೀತಿಗೆ ಪಾತ್ರವಾಗಿದೆ.ನಾವು ಕೆಲಸ ಮಾಡುವ ಸ್ಥಳದಲ್ಲಿ ನಾವು ಒಳ್ಳೆಯತನದಿಂದ ಇದ್ದರೆ ಸಾಕು ಅಲ್ಲಿನ ವಾತಾವರಣವೇ ಒಳ್ಳೆಯದನ್ನಾಗಿ ರೂಪಗೊಳ್ಳಲು ಸಾಧ್ಯವಿದೆ.ಢವಳಗಿಯ ಜನ ಹೃದಯವಂತರು ಎಂದು ತಮ್ಮ ಸೇವಾ ಅನುಭವವನ್ನು ಹಂಚಿಕೊAಡರು.

ಢವಳಗಿ ಗದ್ದುಗೆ ಮಠದ ಮಡಿವಾಳೇಶ್ವರ ಸ್ವಾಮೀಜಿ ಮಾತನಾಡಿ, ಅತ್ಯಂತ ಕಷ್ಟ ಕಾಲದಲ್ಲಿ ಢವಳಗಿ ಸ್ವತಂತ್ರö್ಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಜವಾಬ್ದಾರಿ ವಹಿಸಿಕೊಂಡ ಬಿರಾಜದಾರ ಅವರು ತಮ್ಮ ಅವಧಿಯಲ್ಲಿ ಕಾಲೇಜಿಗೆ ಉತ್ತಮ ಹೆಸರು ತರುವುದಕ್ಕೆ ಶ್ರಮಿಸಿದ್ದಾರೆ.ಸನಾತನ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು ಕಾಲೇಜಿನ ಬೆಳವಣಿಗೆಗೆ ಆದ್ಯತೆ ನೀಡುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

ನಿಡಗುಂದಿ ಗ್ರಾಮೀಣ ವಿದ್ಯಾವರ್ಧಕ ಸಂಘದ ನಿವೃತ್ತ ಪ್ರಾಚಾರ್ಯ ಎಸ್.ಎಸ್.ಹೊಸಮನಿ,ಬಸರಕೋಡ ಪವಾಡ ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ವಾಯ್.ಬಿರಾದಾರ,ಪ್ರಗತಿಪರ ರೈತ ವೆಂಕಪ್ಪಗೌಡ ಕೊಣ್ಣೂರ,ಎಂ.ಬಿ.ಬಿ.ಎಸ್ ಅಧ್ಯಯನ ಮಾಡುತ್ತಿರುವ ಅಕ್ಷಯ ಬಿರಾಜದಾರ ಸೇರಿದಂತೆ ಹಲವರು ಬಿರಾಜದಾರ ಗುರುಗಳ ಸೇವೆಯ ಕುರಿತು ಮಾತನಾಡಿದರು.

ನಿವೃತ್ತ ಪ್ರಾಚಾರ್ಯ ಎಸ್.ಎನ್.ಬಿರಾದಾರ,ಸರಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಅಂಗಡಿ, ಬಸರಕೋಡ ಕಾಲೇಜಿನ ಪ್ರಾಚಾರ್ಯ ಎಸ್.ಎಂ.ಕಮತರ, ಎಸ್.ವಿ.ವಿ.ಎಸ್ ಸಂಘದ ಮಾಜಿ ಕಾರ್ಯದರ್ಶಿ ಬಾಪುಗೌಡ ಪೀರಾಪೂರ, ಗಣ್ಯರಾದ ಬಸವಂತರಾಯ ಬಿರಾದಾರ,ಎಂ.ಜಿ.ಬಿರಾದಾರ,ಆಕ್ಸಫರ್ಡ್ ಪಾಟೀಲ್ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ವಿಜಯಕುಮಾರ ಪಾಟೀಲ ಮೊದಲಾದವರು ಇದ್ದರು.ಮಲ್ಲನಗೌಡ ಕಡಕಲ್ಲ ನಿರೂಪಿಸಿದರು.ವಿ.ಕೆ.ಮಾಲಗತ್ತಿ ಸ್ವಾಗತಿಸಿದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ