ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಮುದ್ದೇಬಿಹಾಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ,ಔದ್ಯೋಗಿಕ ಚಟುವಟಿಕೆಗಳಿಗೆ ನೆರವು ನೀಡುವ ಮೂಲಕ ಜನಮನ್ನಣೆ ಪಡೆದುಕೊಂಡಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ ಹೇಳಿದರು.

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನಿಂದ ಮಂಗಳವಾರ ಕಾರ್ಯನಿರತ ಪತ್ರಕರ್ತರಿಗೆ ಸಿರಿ ಕಿಟ್‌ಗಳನ್ನು ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಒಂದು ಕೆರೆ ಪುನಶ್ಚೇತನ, ಸುಜ್ಞಾನ ನಿಧಿ ಯೋಜನೆಯಡಿ 214 ವಿದ್ಯಾರ್ಥಿಗಳಿಗೆ, ಜ್ಞಾನ ದೀಪ ಶಿಕ್ಷಕರ ಸಂಖ್ಯೆ, ಮಾಶಾಸನ, ದೇವಸ್ಥಾನಗಳಿಗೆ ಅನುದಾನ, ವಾತ್ಸಲ್ಯ ಮನೆ ರಚನೆ,ಶಾಲೆಗಳಿಗೆ ಡೆಸ್ಕ್ ವಿತರಣೆ, ಜನಮಂಗಲ ಸಲಕರಣೆಗಳ ವಿತರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆಯ ಪೂಜ್ಯರಾದ ವೀರೇಂದ್ರ ಹೆಗ್ಗಡೆ ಅವರು ಕೈಗೊಂಡಿದ್ದಾರೆ ಎಂದರು.

ಹಿರಿಯ ಪತ್ರಕರ್ತರಾದ ಡಿ.ಬಿ.ವಡವಡಗಿ, ಶಂಕರ ಹೆಬ್ಬಾಳ, ಪರಶುರಾಮ ಕೊಣ್ಣೂರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ನಿಜವಾದ ಅರ್ಥದಲ್ಲಿ ಗ್ರಾಮಗಳ ಸಬಲೀಕರಣದಲ್ಲಿ ತೊಡಗಿಕೊಂಡಿದೆ ಎಂದರು.

ಇದೇ ಸಮಯದಲ್ಲಿ ಕಾರ್ಯನಿರತ ಪತ್ರಕರ್ತರುಗಳಿಗೆ ಸಂಸ್ಥೆಯಿAದ ಸಿರಿ ಕಿಟ್‌ಗಳನ್ನು ವಿತರಿಸಲಾಯಿತು.ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ನಾಗೇಶ ಎನ್.ಪಿ., ಪತ್ರಕರ್ತರಾದ ಗುಲಾಮಮೊಹ್ಮದ ದಫೇದಾರ, ಚೇತನ ಶಿವಶಿಂಪಿ,ನಾರಾಯಣ ಮಾಯಾಚಾರಿ,ಮುತ್ತು ವಡವಡಗಿ,ಲಾಡ್ಲೇಮಶ್ಯಾಕ ನದಾಫ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಮಾರುತಿ ಹಿಪ್ಪರಗಿ, ಅನೀಲ ತೇಲಂಗಿ, ರವೀಂದ್ರ ನಂದೆಪ್ಪನವರ, ಹಣಮಂತ ನಲವಡೆ, ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ ಮೊದಲಾದವರು ಇದ್ದರು.

Latest News

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಉತ್ತಮ ಸೇವೆ ಒದಗಿಸುವುದೇ ನಮ್ಮ ಗುರಿ-ಡಾ.ರಂಗನಾಥ ವೈದ್ಯ

ಮುದ್ದೇಬಿಹಾಳ : ಸಾರ್ವಜನಿಕರಿಗೆ ನಮ್ಮಿಂದ ಸಾಧ್ಯವಷ್ಟರ ಮಟ್ಟಿಗೆ ಉತ್ತಮ ಸೇವೆ ನೀಡಲು ಶ್ರಮಿಸುತ್ತೇವೆ.ಕೆಲವು ಸಂದರ್ಭಗಳಲ್ಲಿ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ:                  ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಟೆಂಪೋ ಟ್ರಾವೆಲ್ಸ್-ಕಾರು ಮುಖಾಮುಖಿ ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು,ನಾಲ್ವರಿಗೆ ಗಾಯ

ಮುದ್ದೇಬಿಹಾಳ : ಟೆಂಪೋ ಟ್ರಾವೆಲ್ಸ್ ಹಾಗೂ ಕಾರು ಮಧ್ಯೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ರಾಷ್ಟ್ರೀಯ ಕಬಡ್ಡಿ ತಂಡಕ್ಕೆ ಸಿದ್ದಪ್ಪ ಪೂಜಾರಿ ಆಯ್ಕೆ

ಮುದ್ದೇಬಿಹಾಳ : ನಗರದ ಎಂಜಿವಿಸಿ ಕಾಲೇಜಿನ ವಿಶೇಷಚೇತನ ವಿದ್ಯಾರ್ಥಿ ವಿನಾಯಕ ಸಿದ್ದಪ್ಪ ಪೂಜಾರಿರಾಷ್ಟ್ರೀಯ ಹಿರಿಯ

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ನೇತ್ರದಾನದ ಮೂಲಕ ಅಂಧರ ಬಾಳಿಗೆ ಬೆಳಕಾದ ಆಕಾಶ್

ಮುದ್ದೇಬಿಹಾಳ : ರಸ್ತೆ ಅಪಘಾತದಲ್ಲಿ ಮೃತಪಟ್ಟ ಹತ್ತು ವರ್ಷದ ಬಾಲಕನೋರ್ವನ ಕಣ್ಣುಗಳನ್ನು ದಾನ ಮಾಡುವ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ ಸಂಕಷ್ಟ ಎದುರಿಸುತ್ತವೆ. ನಾಗರಿಕರು ಇದನ್ನು ಅರಿತು ತಮ್ಮ ಮನೆಯ ಮುಂದೆ ಕಾಂಪೌOಡ್, ಮಾಳಿಗೆಯ ಮೇಲೆ, ಗಿಡಗಳಲ್ಲಿ ನೀರಿನ ಸೌಲಭ್ಯ ಕಲ್ಪಿಸುವ ಮಾನವೀಯ ಕೆಲಸ ಮಾಡಬೇಕೆಂದು ಸಮಾಜ ಸೇವಕ ಬಸನಗೌಡ ಪಾಟೀಲ ಸರೂರ ಮನವಿ ಮಾಡಿದರು. ಪಟ್ಟಣದ ಹಸಿರು ತೋರಣ ಉದ್ಯಾನವನದಲ್ಲಿ ಶುಕ್ರವಾರ ವಿಶ್ವ ಗುಬ್ಬಚ್ಚಿ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಜನರು ತಮ್ಮ ಮದುವೆ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು ದೇವರ ಜಾತ್ರಾ ಮಹೋತ್ಸವದಲ್ಲಿ ನೂತನವಾಗಿ ಕರ್ನಾಟಕ ಸರಕಾರದ ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಸ್ಥಳೀಯ ನಿವಾಸಿ ಡಾ. ಮೋತಿಲಾಲ ರೂಪಲಪ್ಪ ಚವ್ಹಾಣ ಅವರನ್ನು ಜಾತ್ರಾ ಕಮೀಟಿ ಹಾಗೂ ತಾಂಡಾದ ಹಿರಿಯರು ರಾಜಕೀಯ ಮುಖಂಡರ ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ. ಮೋತಿಲಾಲ