ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಪತ್ರಕರ್ತರಿಗೆ ಸಿರಿ ಕಿಟ್ ವಿತರಣೆ: ಧರ್ಮಸ್ಥಳ ಸಂಸ್ಥೆಯಿಂದ ಜನೋಪಯೋಗಿ ಕಾರ್ಯ-ಸಂತೋಷಕುಮಾರ ರೈ

ಮುದ್ದೇಬಿಹಾಳ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ,ಔದ್ಯೋಗಿಕ ಚಟುವಟಿಕೆಗಳಿಗೆ ನೆರವು ನೀಡುವ ಮೂಲಕ ಜನಮನ್ನಣೆ ಪಡೆದುಕೊಂಡಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ಸಂತೋಷಕುಮಾರ ರೈ ಹೇಳಿದರು.

ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ನಿಂದ ಮಂಗಳವಾರ ಕಾರ್ಯನಿರತ ಪತ್ರಕರ್ತರಿಗೆ ಸಿರಿ ಕಿಟ್‌ಗಳನ್ನು ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಒಂದು ಕೆರೆ ಪುನಶ್ಚೇತನ, ಸುಜ್ಞಾನ ನಿಧಿ ಯೋಜನೆಯಡಿ 214 ವಿದ್ಯಾರ್ಥಿಗಳಿಗೆ, ಜ್ಞಾನ ದೀಪ ಶಿಕ್ಷಕರ ಸಂಖ್ಯೆ, ಮಾಶಾಸನ, ದೇವಸ್ಥಾನಗಳಿಗೆ ಅನುದಾನ, ವಾತ್ಸಲ್ಯ ಮನೆ ರಚನೆ,ಶಾಲೆಗಳಿಗೆ ಡೆಸ್ಕ್ ವಿತರಣೆ, ಜನಮಂಗಲ ಸಲಕರಣೆಗಳ ವಿತರಣೆ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಸಂಸ್ಥೆಯ ಪೂಜ್ಯರಾದ ವೀರೇಂದ್ರ ಹೆಗ್ಗಡೆ ಅವರು ಕೈಗೊಂಡಿದ್ದಾರೆ ಎಂದರು.

ಹಿರಿಯ ಪತ್ರಕರ್ತರಾದ ಡಿ.ಬಿ.ವಡವಡಗಿ, ಶಂಕರ ಹೆಬ್ಬಾಳ, ಪರಶುರಾಮ ಕೊಣ್ಣೂರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ನಿಜವಾದ ಅರ್ಥದಲ್ಲಿ ಗ್ರಾಮಗಳ ಸಬಲೀಕರಣದಲ್ಲಿ ತೊಡಗಿಕೊಂಡಿದೆ ಎಂದರು.

ಇದೇ ಸಮಯದಲ್ಲಿ ಕಾರ್ಯನಿರತ ಪತ್ರಕರ್ತರುಗಳಿಗೆ ಸಂಸ್ಥೆಯಿAದ ಸಿರಿ ಕಿಟ್‌ಗಳನ್ನು ವಿತರಿಸಲಾಯಿತು.ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ನಾಗೇಶ ಎನ್.ಪಿ., ಪತ್ರಕರ್ತರಾದ ಗುಲಾಮಮೊಹ್ಮದ ದಫೇದಾರ, ಚೇತನ ಶಿವಶಿಂಪಿ,ನಾರಾಯಣ ಮಾಯಾಚಾರಿ,ಮುತ್ತು ವಡವಡಗಿ,ಲಾಡ್ಲೇಮಶ್ಯಾಕ ನದಾಫ, ಬಸವರಾಜ ಕುಂಬಾರ, ಸಾಗರ ಉಕ್ಕಲಿ, ಮಾರುತಿ ಹಿಪ್ಪರಗಿ, ಅನೀಲ ತೇಲಂಗಿ, ರವೀಂದ್ರ ನಂದೆಪ್ಪನವರ, ಹಣಮಂತ ನಲವಡೆ, ಮುತ್ತು ಕನ್ನೂರ, ವಿನಯ ಕಡ್ಲಿಮಟ್ಟಿ ಮೊದಲಾದವರು ಇದ್ದರು.

Latest News

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಕಾನ್ಪುರ ಐಐಟಿಗೆ ಆಯ್ಕೆಯಾದ ವಿದ್ಯಾರ್ಥಿನಿಗೆ ಬಂಪರ್ ಕೊಡುಗೆ

ಮುದ್ದೇಬಿಹಾಳ(ಜಿಲ್ಲೆ : ವಿಜಯಪುರ) : ದೇಶದ ಪ್ರತಿಷ್ಠಿತ ಐಐಟಿ ಕಾಲೇಜುಗಳಲ್ಲಿ ಒಂದಾಗಿರುವ ಕಾನ್ಪುರದ ಐಐಟಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ ಗ್ರಾಮೀಣ ಪೊಲೀಸ್ ಠಾಣೆ ಶೀಘ್ರ ಕಾರ್ಯಾರಂಭಗೊಳಿಸಿ

ಮುದ್ದೇಬಿಹಾಳ : ಸಿಎಂ ಸಿದ್ಧರಾಮಯ್ಯನವರ ಅವಧಿಯಲ್ಲಿ ಕಳೆದ ಬಜೆಟ್‌ನಲ್ಲಿ ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ತನಿಖೆಯಲ್ಲಿ ಮಹತ್ವದ ಸುಳಿವು ಲಭ್ಯ-ಐಜಿಪಿ ಸಂದೀಪ ಪಾಟೀಲ್

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಕವಚ ಕಳ್ಳತನ ಪ್ರಕರಣಕ್ಕೆ

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ:                          ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಪುನೀತ ಹಿಪ್ಪರಗಿ ಅಧ್ಯಕ್ಷರಾಗಿ ಆಯ್ಕೆ: ಮುದ್ದೇಬಿಹಾಳ : ಕಾರ್ಗಿಲ್ ಸ್ಮಾರಕ ಸಮಿತಿಗೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂತನ ಕಾರ್ಗಿಲ್ ವೀರಯೋಧರ ಸ್ಮಾರಕ ನಿರ್ಮಾಣ ಸಮಿತಿಯ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಮಿತಿಯ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಉಪಾಧ್ಯಕ್ಷರಾಗಿ ಸೋಮನಗೌಡ ಬಿರಾದಾರ ಹಾಗೂ ಕಾರ್ಯದರ್ಶಿಯಾಗಿ ಕಾಶಿನಾಥ ಹುಗ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ಮಹಾಂತೇಶ ಬೂದಿಹಾಳಮಠ, ನೂತನ ಪದಾಧಿಕಾರಿಗಳು ಕಾರ್ಗಿಲ್ ಸಮಿತಿಯ ಉದ್ದೇಶಗಳನ್ನು ಮತ್ತಷ್ಟು ಬಲಪಡಿಸಿ, ದೇಶಭಕ್ತಿ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ಹೆಚ್ಚಿನ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೆಸರು ಹೇಳಿ ಬ್ಲಾಕ್‌ಮೇಲ್ ಆರೋಪ

ಮುದ್ದೇಬಿಹಾಳ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರ ಹೆಸರು ಹೇಳಿಕೊಂಡು ಸ್ಥಳೀಯ ಯುವಕನೋರ್ವ ಕರ್ತವ್ಯಕ್ಕೆ ಅಡ್ಡಿ ಪಡಿಸುವುದಲ್ಲದೆ, ಕಳೆದ ಒಂದು ವರ್ಷದಿಂದ ಉದ್ದೇಶಪೂರ್ವಕವಾಗಿ ತನ್ನ ವಿಡಿಯೋ,ಪೋಟೋ ಚಿತ್ರೀಕರಣ ಮಾಡಿ ಅಧಿಕಾರಿಗಳಿಗೆ ಹರಿ ಬಿಡುತ್ತಿದ್ದಾನೆ ಎಂದು ಆರೋಪಿಸಿದ ತಾಲ್ಲೂಕಿನ ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ಹೊರ ಗುತ್ತಿಗೆ ಮಹಿಳಾ ಸಿಬ್ಬಂದಿಯೋರ್ವರು ಮಂಗಳವಾರ ಆಸ್ಪತ್ರೆಯಲ್ಲೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.ಏತನ್ಮಧ್ಯೆ ಘಟನೆ ಖಂಡಿಸಿ ಆಸ್ಪತ್ರೆಯ ಹೊರಗೆ