ರೈತರ ದಿನಾಚರಣೆ : ಕೃಷಿಯೊಂದಿಗೆ ಉಪಕಸುಬು ಅನುಸರಿಸಿ-ವೆಂಕನಗೌಡ ಪಾಟೀಲ

ರೈತರ ದಿನಾಚರಣೆ : ಕೃಷಿಯೊಂದಿಗೆ ಉಪಕಸುಬು ಅನುಸರಿಸಿ-ವೆಂಕನಗೌಡ ಪಾಟೀಲ

ಮುದ್ದೇಬಿಹಾಳ : ಕೃಷಿಯೊಂದಿಗೆ ಉಪ ಕಸುಬುಗಳನ್ನು ಕೈಗೊಂಡಾಗ ಕೃಷಿಯಲ್ಲಿ ಲಾಭ ಗಳಿಸಲು ಸಾಧ್ಯವಿದೆ ಎಂದು ಕೃಷಿಕ ಸಮಾಜದ ತಾಲ್ಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲ ಹೇಳಿದರು.

ಪಟ್ಟಣದ ಕೃಷಿ ಇಲಾಖೆಯ ಸಭಾಭವನದಲ್ಲಿ ಮಂಗಳವಾರ ತಾಲೂಕು ಕೃಷಿಕ ಸಮಾಜ ಮತ್ತು ಕೃಷಿ ಇಲಾಖೆಯ ಸಹಯೋಗದಲ್ಲಿ ನಡೆದ ರೈತ ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಅತಿಥಿಗಳಾಗಿದ್ದ ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಮಹಾಂತಗೌಡ ಎಸ್. ಕಾಶಿನಕುಂಟಿ ಮಾತನಾಡಿ,ಒಕ್ಕಲುತನದಲ್ಲಿ ಸಾವಯವ ಕೃಷಿಯನ್ನು ಹೆಚ್ಚು ಕೈಗೊಂಡರೆ ಉತ್ತಮ ಫಸಲು ಬರಲು ಸಾಧ್ಯವಿದೆ ಎಂದರು.

ಕೃಷಿಕ ಸಮಾಜದ ಉಪಾಧ್ಯಕ್ಷ ಸಂಗನಗೌಡ ಬಿರಾದಾರ, ಪ್ರ.ಕಾರ್ಯದರ್ಶಿ ಅಮಾತಿಗೌಡ, ಖಜಾಂಚಿ ಸಂಗಮ ಶೆಟ್ಟರ, ಸದಸ್ಯರಾದ ಸೋಮನಗೌಡ ಬಿರಾದಾರ, ಲೋಕನಾಥ ಲಮಾಣಿ,ಅರವಿಂದ ಕಾಶಿನಕುಂಟಿ,ಕೃಷಿ ಅಧಿಕಾರಿಗಳಾದ ಸೋಮನಗೌಡ ಬಿರಾದಾರ, ರಾಜೇಶ್ವರಿ ನಾಡಗೌಡ,ಮುಬಿನಾ, ಗೋವಿಂದರೆಡ್ಡಿ ಮೆದಕಿನಾಳ ಇದ್ದರು.ಶ್ರೇಷ್ಠ ಕೃಷಿಕರನ್ನು ಇಲಾಖೆಯಿಂದ ಸನ್ಮಾನಿಸಲಾಯಿತು.

Latest News

ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ದಿ.ಡಿ.ಬಿ.ಮುದೂರಗೆ ನುಡಿನಮನ : ಅಸ್ಪೃಶ್ಯತೆಯ ವಿರುದ್ಧ ಡಿ.ಬಿ.ಮುದೂರ ದಿಟ್ಟ ಹೋರಾಟ -ನಾಡಗೌಡ

ಮುದ್ದೇಬಿಹಾಳ : ಮತಕ್ಷೇತ್ರದಲ್ಲಿ ಬೇರೂರಿದ್ದ ಅಸ್ಪೃಶ್ಯತೆಯ ವಿರುದ್ಧ ದಿಟ್ಟತನದ ಹೋರಾಟ ಸಂಘಟಿಸಿ ಅದರಲ್ಲಿ ಯಶಸ್ವಿಯಾಗಿದ್ದವರು

‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’

‘ಎಂ.ಎಲ್.ಎ ಬಳಿ ಹೋದ್ರೆ ಚಿನ್ನು ಧಣಿ ಬಳಿ ಹೋಗು ಅಂತಾರೆ, ಚಿನ್ನು ಧಣಿ ಚೀಫ್ ಆಫೀಸರ್ ಬಳಿ ಹೋಗು ಅನ್ನುತ್ತಾರೆ’

ಮುದ್ದೇಬಿಹಾಳ : ಪಟ್ಟಣದ ಇಂದಿರಾ ನಗರದಲ್ಲಿರುವ ಬಡವರಿಗೆ ಉತಾರೆ ಕೊಡಲು ಪುರಸಭೆಯಿಂದ ಆಗುತ್ತಿಲ್ಲ.ಇದರಿಂದ ಸಾಕಷ್ಟು

ಸಾಲದ ಬಾಧೆ ತಾಳದೇ ಗಂಗೂರದಲ್ಲಿ ರೈತ ಆತ್ಮಹತ್ಯೆ

ಸಾಲದ ಬಾಧೆ ತಾಳದೇ ಗಂಗೂರದಲ್ಲಿ ರೈತ ಆತ್ಮಹತ್ಯೆ

ಮುದ್ದೇಬಿಹಾಳ : ಬೆಳೆದ ಬೆಳೆ ಸರಿಯಾಗಿ ಕೈಗೆ ಬಾರದ್ದನ್ನೇ ಮನಸಿಗೆ ಹಚ್ಚಿಕೊಂಡ ರೈತರೊಬ್ಬರು ನೇಣು

ಬಿಎಎಸ್ ಇಂಟರ್ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟ ಮಟ್ಸೋಗಿ-ಡೊ ಟೂರ್ನಿಗೆ ಆಯ್ಕೆ

ಪಟ್ಟಣದ ಬಿಎಎಸ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಜರುಗಲಿರುವ 20 ನೇ ರಾಷ್ಟ್ರೀಯ

ಚವನಭಾವಿ : ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಚವನಭಾವಿ : ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಮುದ್ದೇಬಿಹಾಳ : ಎಲ್ಲಾ ಪಾಲಕರು,ಪೋಷಕರು ಐದು ವರ್ಷದ ಒಳಗಿನ ಮಕ್ಕಳ ಆರೋಗ್ಯದ ಹಾಗೂ ದೇಹದ ಸದೃಢತೆಗಾಗಿ ಪಲ್ಸ್ ಪೊಲೀಯೊ ಲಸಿಕೆಯನ್ನು ತಪ್ಪದೆ ಹಾಕಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಇಂದಿರಾ ಕುಂಬಾರ ಹೇಳಿದರು. ತಾಲ್ಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಭಾನುವಾರ ಮೊದಲ ಸುತ್ತಿನ ಪಲ್ಸ್‌ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇದೇ ವೇಳೆ ಪಲ್ಸ್ ಪೋಲಿಯೊ ಕುರಿತು ಅಂಗನವಾಡಿ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ:                    ಎಮ್.ಜಿ.ಎಮ್.ಕೆ ಆಂಗ್ಲ ಮಾಧ್ಯಮ ಶಾಲೆಯ ಹೆಗಡೆ ಪ್ರಥಮ

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಎಮ್.ಜಿ.ಎಮ್.ಕೆ ಆಂಗ್ಲ ಮಾಧ್ಯಮ ಶಾಲೆಯ ಹೆಗಡೆ ಪ್ರಥಮ

ಮುದ್ದೇಬಿಹಾಳ : ಪಟ್ಟಣದ ಎಮ್.ಜಿ.ಎಮ್.ಕೆ ಆಂಗ್ಲ ಮಾಧ್ಯಮ ಶಾಲೆಯ ಅಭಿರಾಮ ಹೆಗಡೆ ವಿಜಯಪುರದ ಕಗ್ಗೋಡಿನ ಪ್ರಕೃತಿ ಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಧಾರ್ಮಿಕ ಪಠಣ (ಸಂಸ್ಕೃತ) ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿಕೊಂಡಿದ್ದಾನೆ. ವಿದ್ಯಾರ್ಥಿಯ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಎಮ್.ಎಮ್.ಕೋರಿ, ಪದವಿ ಪ್ರಾಚಾರ್ಯ ಎಸ್.ಕೆ.ಹರನಾಳ, ಮುಖ್ಯ ಗುರುಮಾತೆ ವೀಣಾ ಹಿರೇಮಠ, ಆಡಳಿತಾಧಿಕಾರಿಗಳಾದ ಎಸ್.ಎಸ್.ಆಳವಿ, ರಾಜೇಶ್ವರಿ ಬಿರಾದಾರ, ಶೋಭಾ ಬಲಕುಂದಿ, ಶಿಕ್ಷಕರಾದ ಶ್ರೀವಿಜಯ ಹಳ್ಳೂರ,