ಮುದ್ದೇಬಿಹಾಳ : ಮನೆ ಕಟ್ಟಡಕ್ಕೆ ನೀರು ಹೊಡೆಯುವ ಸಂದರ್ಭದಲ್ಲಿ ಮೋಟರ್ಗೆ ಪೈಪ್ ಜೋಡಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ತಾಲ್ಲೂಕಿನ ನಾಲತವಾಡ ಪಟ್ಟಣದ ನಿವಾಸಿ, ಭಾವಸಾರ ಕ್ಷತ್ರಿಯ ಕೋ ಆಪರೇಟಿವ್ ಬ್ಯಾಂಕಿನ ಪಿಗ್ಮಿ ಸಂಗ್ರಾಹಕರ ನಾಗೇಶ ಬಿ.ಲೋಕರೆ (42) ಶುಕ್ರವಾರ ಮೃತಪಟ್ಟಿದ್ದಾರೆ. ವಿದ್ಯುತ್ ಸ್ಪರ್ಶಿಸಿ ಪ್ರಜ್ಞಾಹೀನರಾದ ಅವರನ್ನು ಸ್ಥಳದಲ್ಲೇ ಇದ್ದ ಯುವಕರು ಸ್ಥಳೀಯ ಆರೋಗ್ಯ ಸಮುದಾಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸುವುದರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದರು. ಅವರಿಗೆ ತಂದೆ. ಪತ್ನಿ,ಪುತ್ರ,ಪುತ್ರಿ ಇದ್ದಾರೆ.
ಮಾಜಿ ಶಾಸಕ ನಡಹಳ್ಳಿ ಭೇಟಿ ಸಾಂತ್ವನ :
ವಿದ್ಯುತ್ ಪ್ರವಹಿಸಿ ಮೃತಪಟ್ಟ ನಾಗೇಶ ಲೋಕರೆ ಕುಟುಂಬದವರನ್ನು ಭೇಟಿಯಾದ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ವಿದ್ಯುತ್ ಸಂಬoಧಿ ಕೆಲಸಗಳಿದ್ದಾಗ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರಲ್ಲದೇ ಮೃತರ ಕುಟುಂಬಕ್ಕೆ ವಯಕ್ತಿಕವಾಗಿ ಧನಸಹಾಯ ಮಾಡಿದರು.ಬಿಜೆಪಿ ಮುಖಂಡರಾದ ಎಂ.ಎಸ್.ಪಾಟೀಲ,ಎo.ಬಿ.ಅoಗಡಿ , ಕೆಂಚಪ್ಪ ಆರ್ ಬಿರಾದಾರ .ಖಾಜಾಹುಸೇನ ಎತ್ತಿನಮನಿ, ಗಿರೀಶಗೌಡ ಪಾಟೀಲ್,ಶಿವಪುತ್ರಯ್ಯ ಸ್ಥಾವರಮಠ,ಸಂಗಮೇಶ ಮೇಟಿ, ಸಂಗಣ್ಣ ಹಾವರಗಿ. ಅಮರೇಶ ಹಟ್ಟಿ. ಅಂಬಾಜಿ ಪೇಟಕರ ಮೊದಲಾದವರು ಇದ್ದರು.







