ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಸರ್ಕಾರಿ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರನ್ನು ನಿಯೋಜಿಸಲಾಗಿರುತ್ತದೆ.ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಬಂದವರು ಇರುತ್ತಾರೆ.ಆದರೆ ಸ್ಪರ್ಧಾತ್ಮಕ ಪರೀಕ್ಷೆ ಅನುತ್ತೀರ್ಣರಾಗಿ ಬಂದವರು ಖಾಸಗಿ ಶಾಲೆಗಳಲ್ಲಿರುತ್ತಾರೆ.ಅಂತಹವರು ಇರುವ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತದೆ ಎಂದು ನಂಬಿಕೊAಡಿರುವ ಪಾಲಕರ ಅಭಿಪ್ರಾಯ ಬದಲಾಗಬೇಕಿದೆ ಎಂದರು.

ಇತ್ತೀಚಿಗೆ ಹಾಸ್ಟೆಲ್‌ಗಳ ಮೇಲೆ ಒತ್ತಡ ಹೆಚ್ಚುತ್ತಿದೆ.ಮಕ್ಕಳು ಮನೆಯಲ್ಲಿದ್ದರೆ ಮೊಬೈಲ್,ಟಿವಿ ದಾಸರಾಗುತ್ತಾರೆ.ಗೆಳೆಯರ ಜೊತೆ ಹೊರಗಡೆ ಹರಟೆ ಹೊಡೆಯಲು ಹೋಗುತ್ತಾರೆ.ಚೆನ್ನಾಗಿ ಓದುವುದಿಲ್ಲ ಎಂಬ ಭಾವನೆಯಿಂದ ಮಕ್ಕಳನ್ನು ಹಾಸ್ಟೆಲ್‌ನಲ್ಲಿ ಸೇರಿಸುವುದಕ್ಕೆ ಮುಂದಾಗುತ್ತಿದ್ದಾರೆ.ವಿಶೇಷವಾಗಿ ಸರಕಾರಿ ಹಾಸ್ಟೆಲ್, ಶಾಲೆಗಳಲ್ಲಿ ಓದುವ ಮಕ್ಕಳು ಉನ್ನತ ಅಂಕ ಪಡೆದುಕೊಳ್ಳುತ್ತಾರೆ.ಮೂಲಸೌಕರ್ಯ ಹೆಚ್ಚಿರುತ್ತದೆ.ಬಡವರ ಮಕ್ಕಳಷ್ಟೇ ಅಲ್ಲಿ ಓದುತ್ತಾರೆ ಎನ್ನುವುದಕ್ಕಿಂತ ಇಂದು ಉಳ್ಳವರು ತಮ್ಮ ಮಕ್ಕಳನ್ನು ಹಾಸ್ಟೆಲ್‌ಗಳಿಗೆ ಸೇರಿಸುತ್ತಿದ್ದಾರೆ ಎಂದರು.

ಪಿಡಬ್ಲೂö್ಯಡಿ ಎಇಇ ಎ.ಬಿ.ರೆಡ್ಡಿ ಮಾತನಾಡಿ, ಎಸ್.ಸಿ.ಪಿ/ಟಿಎಸ್‌ಪಿ ಅನುದಾನದ ಅಡಿಯಲ್ಲಿ 6.50 ಕೋಟಿ ರೂ.ವೆಚ್ಚದಲ್ಲಿ ಕಾಲಮಿತಿಯಲ್ಲಿ ಈ ಕಾಮಗಾರಿ ಪೂರ್ಣಗೊಂಡಿದೆ.100ವಿದ್ಯಾರ್ಥಿಗಳ ಸಾಮರ್ಥ್ಯ ಹಾಸ್ಟೆಲ್‌ನಲ್ಲಿದ್ದು ಶುದ್ಧ ಕುಡಿವ ನೀರಿನ ಘಟಕ,ಪುಸ್ತಕ ಇಡಲು ಗ್ರಂಥಾಲಯ,ಇAಟರನೆಟ್ ಸೌಲಭ್ಯ,ಸಿಸಿಟಿವಿ ಅಳವಡಿಸಲಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳಿಗೆ 10ನೇ ತರಗತಿ ಮುಗಿದ ಕೂಡಲೇ ಶಾಲೆಯನ್ನು ಬಿಡಿಸುವ ಮನೋಭಾವ ಪಾಲಕರಲ್ಲಿದೆ.ಆದರೆ ಸರ್ಕಾರ ಇಂತಹ ವಸತಿ ನಿಲಯಗಳನ್ನು ಆರಂಭಿಸುವ ಮೂಲಕ ಹೆಣ್ಣು ಮಕ್ಕಳು ಉನ್ನತ ಶಿಕ್ಷಣಕ್ಕೆ ದಾರಿಯಾಗಲು ಅವಕಾಶ ದೊರೆಯುತ್ತದೆ.ಈ ವಸತಿ ನಿಲಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದರೆ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗಿ ಸರಿಯಾದ ಸಮಯಕ್ಕೆ ನಿಲಯದಲ್ಲಿರಲು ಅನುಕೂಲವಾಗುತ್ತದೆ ಎಂದು ಹೇಳಿದರು. ತಾಪಂ ಪ್ರಭಾರ ಇಒ ಸಂಗನಗೌಡ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಗಣ್ಯರಾದ ಸತೀಶ ಓಸ್ವಾಲ್, ಶ್ರೀಕಾಂತ ಚಲವಾದಿ,ಪುರಸಭೆ ಮಾಜಿ ಸದಸ್ಯ ವೀರೇಶ ಹಡಲಗೇರಿ,ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಗುತ್ತಿಗೆದಾರ ಅರುಣ ಮಠ ಮತ್ತಿತರರು ಇದ್ದರು.ಟಿ.ಡಿ.ಲಮಾಣಿ ನಿರೂಪಿಸಿದರು.

ವಸತಿ ನಿಲಯದ ಕಟ್ಟಡದ ಬಗ್ಗೆ ಶಾಸಕರ ಅಸಮಾಧಾನ:
ವಸತಿ ನಿಲಯದ ಮುಂಭಾಗದಲ್ಲಿರುವ ಕಂಪೌAಡ್ ಅತ್ಯಂತ ಕೆಳಮಟ್ಟದಲ್ಲಿರುವುದಕ್ಕೆ ಶಾಸಕ ಸಿ.ಎಸ್.ನಾಡಗೌಡ ಆಕ್ಷೇಪ ವ್ಯಕ್ತಪಡಿಸಿದರು.ಹೆಣ್ಣುಮಕ್ಕಳಿರುವ ಹಾಸ್ಟೆಲ್ ಇದಾಗಿದ್ದು ಹೆಚ್ಚಿನ ಭದ್ರತೆ ಇರಬೇಕು.ಆದರೆ ಪುಂಡಪೋಕರಿಗಳು ತಡೆಗೋಡೆ ಜಿಗಿದು ಹೋಗಲು ಆಗುವಂತೆ ಕೆಳಮಟ್ಟದಲ್ಲಿ ತಡೆಗೋಡೆ ಇದೆ.ಇದನ್ನು ಎತ್ತರಿಸಿ ತಂತಿಬೇಲಿ ಅಳವಡಿಸಿ ಎಂದು ಹೇಳಿದರಲ್ಲದೇ ಇಂಜಿನಿಯರ್ ಕಟ್ಟಡ ಕಾಮಗಾರಿ ಮಾಡುವಾಗ ಗಮನಿಸಲಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.ಕಟ್ಟಡ ಇನ್ನುಳಿದ ಸುತ್ತಮುತ್ತಲಿನ ಕಟ್ಟಡಕ್ಕಿಂತ ಕೆಳಮಟ್ಟದಲ್ಲಿದ್ದು ಮಳೆಗಾಲದಲ್ಲಿ ನೀರು ಹಾಸ್ಟೆಲ್ ಆವರಣದಲ್ಲಿಯೇ ನಿಲ್ಲುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Latest News

ಮಾಜಿ ಶಾಸಕ ನಡಹಳ್ಳಿ ಆಗ್ರಹ:                                                           ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮಾಜಿ ಶಾಸಕ ನಡಹಳ್ಳಿ ಆಗ್ರಹ: ರೈತರ ಐದು ಲಕ್ಷ ರೂ.ಗಳವರೆಗೆ ಸಾಲ ಮನ್ನಾ ಮಾಡಿ

ಮುದ್ದೇಬಿಹಾಳ : ರಾಜ್ಯದಲ್ಲಿ 199 ತಾಲ್ಲೂಕುಗಳು ಬರಪೀಡಿತ ಪ್ರದೇಶಗಳಾಗಿದ್ದು ಕಾಂಗ್ರೆಸ್ ಸರ್ಕಾರ ರೈತರ ಐದು

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಸೆ.11 ರಂದು ಪೊಲೀಸರಿಗೆ ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡ ಪವಾಡ ಬಸವೇಶ್ವರ ಸಂಸ್ಥೆಯ ವತಿಯಿಂದ ಸೆ.11 ರಂದು ಬೆಳಗ್ಗೆ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಟಿಎಪಿಸಿಎಂಎಸ್‌ನ 69ನೇ ವಾರ್ಷಿಕ ಮಹಾಸಭೆ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ 20.34 ಲಕ್ಷ ರೂ.ಲಾಭ-ಎಂ.ಎಸ್.ಮೇಟಿ

ಮುದ್ದೇಬಿಹಾಳ : ರೈತರ ಸಹಕಾರದಿಂದ ಸನ್ 2025-26ನೇ ಸಾಲಿನ ಮಾರ್ಚ ಅಂತ್ಯಕ್ಕೆ ನಮ್ಮ ಸಂಘವು

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಸೆ.9 ರಂದು ಬರಪರಿಸ್ಥಿತಿ ಅವಲೋಕನಕ್ಕೆ ಟಾಸ್ಕಫೋರ್ಸ್ ಸಭೆ

ಮುದ್ದೇಬಿಹಾಳ : ಬರಪರಿಸ್ಥಿತಿ,ಕುಡಿವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಚರ್ಚೆ ನಡೆಸಲು ಸೆ.9 ರಂದು ಬೆಳಗ್ಗೆ 9 ಕ್ಕೆ ಪಟ್ಟಣದ ಪ್ರವಾಸಿ ಮಂದಿರದ ಸಭಾಭವನದಲ್ಲಿ ಕೆಎಸ್‌ಡಿಎಲ್ ನಿಗಮದ ಅಧ್ಯಕ್ಷರು, ಶಾಸಕ ಸಿ.ಎಸ್.ನಾಡಗೌಡ ಅಧ್ಯಕ್ಷತೆಯಲ್ಲಿ ಟಾಸ್ಕಫೋರ್ಸ್ ಸಭೆ ನಿಗದಿಪಡಿಸಲಾಗಿದೆ. ಟಾಸ್ಕಫರ‍್ಸ್ ಸಭೆಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ತಹಶೀಲ್ದಾರ್‌ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಅವಳಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡುವಂತೆ ಮಾಜಿ ಶಾಸಕ ಎ.ಎಸ್.ಪಾಟೀಲ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಶಾಸಕ ನಾಡಗೌಡರು ಹಸಿ ಸುಳ್ಳುಗಳ ಸರದಾರರು-ನಡಹಳ್ಳಿ

ಮುದ್ದೇಬಿಹಾಳ : ಮತಕ್ಷೇತ್ರದ ರೈತರಿಂದ ಆಯ್ಕೆಯಾಗಿರುವ ನೀವು ಅವರ ಬದುಕಿಗೆ ಸಂಕಷ್ಟ ಎದುರಾದಾಗ ಸ್ಪಂದಿಸುವ ಕೆಲಸ ಮಾಡಬೇಕು.ಅದು ಬಿಟ್ಟು ಮೂವ್ವತ್ತು ವರ್ಷಗಳಿಂದ ಹಸಿ ಸುಳ್ಳುಗಳನ್ನೇ ಹೇಳುತ್ತಾ ರಾಜಕಾರಣ ಮಾಡಿಕೊಂಡು ಬಂದಿದ್ದೀರಿ.ಜನ ಇನ್ನು ಮುಂದೆ ನಿಮ್ಮನ್ನು ನಂಬುವುದಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ,ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಮಂಗಳವಾರ ಬರ ಘೋಷಣೆಗೆ ಆಗ್ರಹಿಸಿ ನಡೆದಿರುವ ಬಿಜೆಪಿಯ ಎರಡನೇ ದಿನದ ಧರಣಿ ಸತ್ಯಾಗ್ರಹವನ್ನುದ್ದೇಶಿಸಿ ಅವರು