ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಸರ್ಕಾರಿ ಶಾಲೆಗಳಲ್ಲೇ ಗುಣಮಟ್ಟದ ಶಿಕ್ಷಣ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಖಾಸಗಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ದೊರೆಯುತ್ತದೆ ಎಂಬ ಪಾಲಕರಲ್ಲಿರುವ ಅಭಿಪ್ರಾಯ ಸರಿಯಲ್ಲ.ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂಬುದನ್ನು ಮನಗಾಣಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಮಾರುತಿ ನಗರದಲ್ಲಿ ಶುಕ್ರವಾರ ಲೋಕೋಪಯೋಗಿ ಇಲಾಖೆಯಿಂದ ನಿರ್ಮಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಸರ್ಕಾರಿ ಬಾಲಕಿಯರ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ನುರಿತ ಶಿಕ್ಷಕರನ್ನು ನಿಯೋಜಿಸಲಾಗಿರುತ್ತದೆ.ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾಸಾಗಿ ಬಂದವರು ಇರುತ್ತಾರೆ.ಆದರೆ ಸ್ಪರ್ಧಾತ್ಮಕ ಪರೀಕ್ಷೆ ಅನುತ್ತೀರ್ಣರಾಗಿ ಬಂದವರು ಖಾಸಗಿ ಶಾಲೆಗಳಲ್ಲಿರುತ್ತಾರೆ.ಅಂತಹವರು ಇರುವ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತದೆ ಎಂದು ನಂಬಿಕೊAಡಿರುವ ಪಾಲಕರ ಅಭಿಪ್ರಾಯ ಬದಲಾಗಬೇಕಿದೆ ಎಂದರು.

ಇತ್ತೀಚಿಗೆ ಹಾಸ್ಟೆಲ್‌ಗಳ ಮೇಲೆ ಒತ್ತಡ ಹೆಚ್ಚುತ್ತಿದೆ.ಮಕ್ಕಳು ಮನೆಯಲ್ಲಿದ್ದರೆ ಮೊಬೈಲ್,ಟಿವಿ ದಾಸರಾಗುತ್ತಾರೆ.ಗೆಳೆಯರ ಜೊತೆ ಹೊರಗಡೆ ಹರಟೆ ಹೊಡೆಯಲು ಹೋಗುತ್ತಾರೆ.ಚೆನ್ನಾಗಿ ಓದುವುದಿಲ್ಲ ಎಂಬ ಭಾವನೆಯಿಂದ ಮಕ್ಕಳನ್ನು ಹಾಸ್ಟೆಲ್‌ನಲ್ಲಿ ಸೇರಿಸುವುದಕ್ಕೆ ಮುಂದಾಗುತ್ತಿದ್ದಾರೆ.ವಿಶೇಷವಾಗಿ ಸರಕಾರಿ ಹಾಸ್ಟೆಲ್, ಶಾಲೆಗಳಲ್ಲಿ ಓದುವ ಮಕ್ಕಳು ಉನ್ನತ ಅಂಕ ಪಡೆದುಕೊಳ್ಳುತ್ತಾರೆ.ಮೂಲಸೌಕರ್ಯ ಹೆಚ್ಚಿರುತ್ತದೆ.ಬಡವರ ಮಕ್ಕಳಷ್ಟೇ ಅಲ್ಲಿ ಓದುತ್ತಾರೆ ಎನ್ನುವುದಕ್ಕಿಂತ ಇಂದು ಉಳ್ಳವರು ತಮ್ಮ ಮಕ್ಕಳನ್ನು ಹಾಸ್ಟೆಲ್‌ಗಳಿಗೆ ಸೇರಿಸುತ್ತಿದ್ದಾರೆ ಎಂದರು.

ಪಿಡಬ್ಲೂö್ಯಡಿ ಎಇಇ ಎ.ಬಿ.ರೆಡ್ಡಿ ಮಾತನಾಡಿ, ಎಸ್.ಸಿ.ಪಿ/ಟಿಎಸ್‌ಪಿ ಅನುದಾನದ ಅಡಿಯಲ್ಲಿ 6.50 ಕೋಟಿ ರೂ.ವೆಚ್ಚದಲ್ಲಿ ಕಾಲಮಿತಿಯಲ್ಲಿ ಈ ಕಾಮಗಾರಿ ಪೂರ್ಣಗೊಂಡಿದೆ.100ವಿದ್ಯಾರ್ಥಿಗಳ ಸಾಮರ್ಥ್ಯ ಹಾಸ್ಟೆಲ್‌ನಲ್ಲಿದ್ದು ಶುದ್ಧ ಕುಡಿವ ನೀರಿನ ಘಟಕ,ಪುಸ್ತಕ ಇಡಲು ಗ್ರಂಥಾಲಯ,ಇAಟರನೆಟ್ ಸೌಲಭ್ಯ,ಸಿಸಿಟಿವಿ ಅಳವಡಿಸಲಾಗಿದೆ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳಿಗೆ 10ನೇ ತರಗತಿ ಮುಗಿದ ಕೂಡಲೇ ಶಾಲೆಯನ್ನು ಬಿಡಿಸುವ ಮನೋಭಾವ ಪಾಲಕರಲ್ಲಿದೆ.ಆದರೆ ಸರ್ಕಾರ ಇಂತಹ ವಸತಿ ನಿಲಯಗಳನ್ನು ಆರಂಭಿಸುವ ಮೂಲಕ ಹೆಣ್ಣು ಮಕ್ಕಳು ಉನ್ನತ ಶಿಕ್ಷಣಕ್ಕೆ ದಾರಿಯಾಗಲು ಅವಕಾಶ ದೊರೆಯುತ್ತದೆ.ಈ ವಸತಿ ನಿಲಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿದರೆ ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗಿ ಸರಿಯಾದ ಸಮಯಕ್ಕೆ ನಿಲಯದಲ್ಲಿರಲು ಅನುಕೂಲವಾಗುತ್ತದೆ ಎಂದು ಹೇಳಿದರು. ತಾಪಂ ಪ್ರಭಾರ ಇಒ ಸಂಗನಗೌಡ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಗಣ್ಯರಾದ ಸತೀಶ ಓಸ್ವಾಲ್, ಶ್ರೀಕಾಂತ ಚಲವಾದಿ,ಪುರಸಭೆ ಮಾಜಿ ಸದಸ್ಯ ವೀರೇಶ ಹಡಲಗೇರಿ,ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಗುತ್ತಿಗೆದಾರ ಅರುಣ ಮಠ ಮತ್ತಿತರರು ಇದ್ದರು.ಟಿ.ಡಿ.ಲಮಾಣಿ ನಿರೂಪಿಸಿದರು.

ವಸತಿ ನಿಲಯದ ಕಟ್ಟಡದ ಬಗ್ಗೆ ಶಾಸಕರ ಅಸಮಾಧಾನ:
ವಸತಿ ನಿಲಯದ ಮುಂಭಾಗದಲ್ಲಿರುವ ಕಂಪೌAಡ್ ಅತ್ಯಂತ ಕೆಳಮಟ್ಟದಲ್ಲಿರುವುದಕ್ಕೆ ಶಾಸಕ ಸಿ.ಎಸ್.ನಾಡಗೌಡ ಆಕ್ಷೇಪ ವ್ಯಕ್ತಪಡಿಸಿದರು.ಹೆಣ್ಣುಮಕ್ಕಳಿರುವ ಹಾಸ್ಟೆಲ್ ಇದಾಗಿದ್ದು ಹೆಚ್ಚಿನ ಭದ್ರತೆ ಇರಬೇಕು.ಆದರೆ ಪುಂಡಪೋಕರಿಗಳು ತಡೆಗೋಡೆ ಜಿಗಿದು ಹೋಗಲು ಆಗುವಂತೆ ಕೆಳಮಟ್ಟದಲ್ಲಿ ತಡೆಗೋಡೆ ಇದೆ.ಇದನ್ನು ಎತ್ತರಿಸಿ ತಂತಿಬೇಲಿ ಅಳವಡಿಸಿ ಎಂದು ಹೇಳಿದರಲ್ಲದೇ ಇಂಜಿನಿಯರ್ ಕಟ್ಟಡ ಕಾಮಗಾರಿ ಮಾಡುವಾಗ ಗಮನಿಸಲಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.ಕಟ್ಟಡ ಇನ್ನುಳಿದ ಸುತ್ತಮುತ್ತಲಿನ ಕಟ್ಟಡಕ್ಕಿಂತ ಕೆಳಮಟ್ಟದಲ್ಲಿದ್ದು ಮಳೆಗಾಲದಲ್ಲಿ ನೀರು ಹಾಸ್ಟೆಲ್ ಆವರಣದಲ್ಲಿಯೇ ನಿಲ್ಲುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Latest News

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ತಮ್ಮ ಸ್ವಂತ ರಾಜಕೀಯ ಲಾಭಕ್ಕೆ ಗುತ್ತಿಗೆದಾರರಿಂದ ಸಹಾಯ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ಕೆಲವು ಗುತ್ತಿಗೆದಾರರು ಸಹಾಯ ಮಾಡುವುದು ತಮ್ಮ ರಾಜಕೀಯ ಲಾಭಕ್ಕೋಸ್ಕರ ಮಾಡುತ್ತಾರೆಯೇ ಹೊರತು

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಹುಲ್ಲೂರ ಎಸ್‌ಎನ್‌ಡಿ ಪಬ್ಲಿಕ್ ಸ್ಕೂಲ್‌ಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ಗ್ರಾಮದ ಎಸ್.ಎನ್.ಡಿ ನ್ಯಾಷನಲ್ ಪಬ್ಲಿಕ್ ಶಾಲೆಗೆ 2025-26ನೇ ಸಾಲಿನಲ್ಲಿ

ಎಸ್.ಎಸ್.ಎಲ್.ಸಿ ಪರೀಕ್ಷೆ:                                         ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಎಸ್.ಎಸ್.ಎಲ್.ಸಿ ಪರೀಕ್ಷೆ: ಕವಡಿಮಟ್ಟಿಯ ಆರ್ಚ್ ಏಂಜಲ್ ಶಾಲೆಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲೂಕಿನ ಸರೂರ ಕ್ರಾಸ್ ಬಳಿ ಇರುವ ಕವಡಿಮಟ್ಟಿಯ ದಿ ಆರ್ಚ್ ಏಂಜಲ್

ಉತ್ತಮ ಕಾರ್ಯನಿರ್ವಹಣೆ :                                              KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆ : KRIDL ಇಇ ಆನಂದಸ್ವಾಮಿ ಅವರಿಗೆ ಪ್ರಶಸ್ತಿ

ಮುದ್ದೇಬಿಹಾಳ : ವಿಜಯಪುರದ ಕೆ.ಆರ್.ಐ.ಡಿ.ಎಲ್ ಇಲಾಖೆಯ ಇಇ ಆನಂದಸ್ವಾಮಿ ಅವರು ಇಲಾಖೆಯಲ್ಲಿ ಸಲ್ಲಿಸುತ್ತಿರುವ ಉತ್ತಮ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗೆ ಆನಂದ ಪೂಜಾರಿ ನೇಮಕ

ಮುದ್ದೇಬಿಹಾಳ : ಇಲ್ಲಿನ ಯುವ ಉದ್ಯಮಿ,ಕಾಂಗ್ರೆಸ್ ಪಕ್ಷದ ಮುಖಂಡ ಆನಂದ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷದ ಎಸ್.ಟಿ.ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರ ಶಿಫಾರಸ್ಸಿನ ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮೀತಿ ಪರಿಶಿಷ್ಟ ಪಂಗಡ ವಿಭಾಗದ ರಾಜ್ಯ ಅಧ್ಯಕ್ಷ ಎಂ.ವಿಜಯನಾಯಕ ನೇಮಕ ಮಾಡಿ ಆದೇಶಿಸಿದ್ದಾರೆ.

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಅಖಿಲ ಭಾರತ ದೇವಾಂಗ ಜಾಗೃತ ಸಮಾವೇಶ ಯಶಸ್ವಿಗೊಳಿಸಿ-ದಯಾನಂದಪುರಿ ಸ್ವಾಮೀಜಿ

ಮುದ್ದೇಬಿಹಾಳ : ದೇವಾಂಗ(ನೇಕಾರ)ಸಮುದಾಯದ ಸಂಘಟನೆ,ಜಾಗೃತಿಗಾಗಿ ಅಖಿಲ ಭಾರತ ದೇವಾಂಗ ಬೃಹತ್ ಜನಜಾಗೃತಿ ಸಮಾವೇಶ ಹಾಗೂ ದಯಾನಂದಪುರಿ ಸ್ವಾಮೀಜಿಗಳ 36ನೇ ಪಟ್ಟಾಭಿಷೇಕ ಮಹೋತ್ಸವವನ್ನು ಮೇ.8 ಹಾಗೂ 9 ರಂದು ಬಾದಾಮಿ ತಾಲ್ಲೂಕು ಬನಶಂಕರಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ದೇವಾಂಗ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಚಿತ್ತರಗಿ ಹೇಳಿದರು. ಪಟ್ಟಣದ ಬನಶಂಕರಿ ದೇವಸ್ಥಾನದಲ್ಲಿ ಬುಧವಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಲು ಹಂಪಿ ಹೇಮಕೂಟ ಶ್ರೀ ಗಾಯತ್ರಿಪೀಠದ