Quiz competition for high school students: Knowledge of Kannada should be developed among students - Biradara

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಕನ್ನಡದ ಭಗ್ಗೆ ಜ್ಞಾನ ಹಾಗೂ ಆಸಕ್ತಿಯನ್ನು ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಅವಶ್ಯವಾಗಿದೆ ಎಂದು ಕಸಾಪ ತಾಲೂಕಾ ಅಧ್ಯಕ್ಷರಾದ ಕಾಮರಾಜ ಬಿರಾದಾರ ಅವರು ನುಡಿದರು.

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್‌ಹಾಲ್‌ನಲ್ಲಿ ಭಾನುವಾರದಂದು ಕಸಾಪ ತಾಲೂಕಾ ಘಟಕದ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ತಾಲೂಕ ಮಟ್ಟದ ಕನ್ನಡ ರಸಪ್ರಶ್ನೆ ಸ್ಪರ್ಧೆಯಲ್ಲಿ ಅವರು ಮಾತನಾಡಿದರು.

ಕನ್ನಡವೆಂಬುದು ಹೃದಯದ ಭಾಷೆಯಾಗಿದೆ. ಅದನ್ನು ಯಾರೂ ಎಂದಿಗೂ ಮರೆಯಬಾರದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕನ್ನಡದ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವದರಿಂದ ಜೀವನದಲ್ಲಿ ಉತ್ತಮ ಸ್ಥಾನವನ್ನು ಸಾಧಿಸಲು ಸಾಧ್ಯ ಟಿವ್ಹಿ ಫೋನ್‌ನಲ್ಲಿ ಹೆಚ್ಚು ಸಮಯವನ್ನು ಕಳೆಯದೇ ಅಧ್ಯಯನದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡರೆ ನಮ್ಮ ಮಾತೃಭಾಷೆಯಾದ ಕನ್ನಡದ ಭಗ್ಗೆ ಗೌರವವನ್ನು ಹೆಚ್ಚಿಸಬಹುದಾಗಿದೆ. ಅದಕ್ಕಾಗಿ ಕಸಾಪ ವತಿಯಿಂದ ಮಕ್ಕಳಿಗಾಗಿ ರಸಪ್ರಶ್ನೆ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹಾಗೂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಂ. ಬೆಳಗಲ್ ಮಾತನಾಡಿ, ವಿದ್ಯಾರ್ಥಿಗಳ ಬೌದ್ದಿಕ ಮಟ್ಟದ ಸಾಮರ್ಥ್ಯವನ್ನು ಹೆಚ್ಚಿಸಲು ಕನ್ನಡದ ಸಾಹಿತ್ಯದ ಭಗ್ಗೆ ಅಭಿಮಾನವನ್ನು ಬೆಳೆಸುವಲ್ಲಿ ಇಂತಹ ಕನ್ನಡದಲ್ಲಿ ರಸಪ್ರಶ್ನೆ ಸ್ಪರ್ಧೆ ಸಹಕಾರಿಯಾಗಿದೆ ಎಂದು ಹೇಳಿದರು.

ಪುರಸಭಾ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ಮಾತನಾಡಿ ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ಪಟ್ಟಣದಲ್ಲಿ ಹೆಚ್ಚು ನಡೆಯಬೇಕು ಇದು ಮಕ್ಕಳ ಕಲಿಕೆಯನ್ನು ಪರಿಣಾಮಕಾರಿಯನ್ನಾಗಿಸುವದ ಜೊತೆಗೆ ಕನ್ನಡದ ಭಗ್ಗೆ ನಮ್ಮ ಸಂಸ್ಕೃತಿಯ ಭಗ್ಗೆ ಅರಿಯಲು ಸಾಧ್ಯವಾಗುತ್ತದೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕ ಹೆಚ್.ಪಿ. ಹಡಪದ ಅವರು ನಿರ್ವಹಣೆ ಮಾಡಿದರು.

ಹಿರಿಯ ಸಾಹಿತಿ ಅಶೋಕ ಮಣಿ, ಶಂಕರ ಬೇವಿನಗಿಡದ, ಮಹಿಬೂಬ ಮುಲ್ಲಾ, ಕಸಾಪ ಗೌರವ ಸಲಹೆಗಾರರಾದ ಪ್ರಭುರಾಜ ಕಲ್ಬುರ್ಗಿ, ಗೌರವ ಕಾರ್ಯದರ್ಶಿಗಳಾದ ವೈ.ಎಚ್. ವಿಜಯಕರ, ಸಿದ್ದನಗೌಡ ಬಿಜ್ಜೂರ, ಪ್ರೋ. ಹಂಪಣ್ಣ, ಮಹಿಬೂಬ ಮುಲ್ಲಾ, ಗೌರವ ಕೋಶಾಧ್ಯಕ್ಷರಾದ ಜಹಾಂಗೀರ ಮುಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಹುಸೇನ ಬಾದಶಾ ಮುಲ್ಲಾ, ರಾಜು ಬಳ್ಳೊಳ್ಳಿ, ರಾಜು ಕಲಬುರ್ಗಿ, ಚಂದ್ರು ಕಲಾಲ, ಹರೀಶ ಬೇವೂರ, ಸಿದ್ದನಗೌಡ ಕಾಶಿನಕುಂಟಿ, ರಾಚಯ್ಯ ಹಿರೇಮಠ, ಶ್ರೀಶೈಲ ಕತ್ತಿ, ಹುಸೇನ್ ಮುಲ್ಲಾ, ಹಾಗೂ ಮುಖಂಡರು ಕನ್ನಡ ಸಾಹಿತ್ಯಾಭಿಮಾನಿಗಳು ಹಾಗೂ ಕಸಾಪ ಪದಾಧಿಕಾರಿಗಳು ಉಪಸ್ತಿತರಿದ್ದರು.

ಪ್ರಶಸ್ತಿ ವಿಜೇತ ತಂಡ: ಪ್ರಥಮ ಬಹುಮಾನ ಪ್ರಾರ್ಥನಾ ವಿದ್ಯಾಮಂದಿರ(ಮಾಸ್ತಿ ವೆಂಕಟೇಶ ಅಯ್ಯಂಗಾರ್ ತಂಡ), ದ್ವಿತೀಯ ಬಹುಮಾನ ಚಿನ್ಮಯಿ ಜೆಸಿ(ಗಿರೀಶ ಕಾರ್ನಾಡ್ ತಂಡ), ತೃತೀಯ ಬಹುಮಾನ ಶ್ರೀ ಶಾರದಾ ವಿದ್ಯಾಮಂದಿರ(ಚಂದ್ರಶೇಖರ ಕಂಬಾರ ತಂಡ) ಪದಕ ಹಾಗೂ ಟ್ರೋಫಿಗಳನ್ನು ಪಡೆದುಕೊಂಡವು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಥಳೀಯ ಹಾಗೂ ಸುತ್ತಮುತ್ತಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ