Quiz competition for high school students: Knowledge of Kannada should be developed among students - Biradara

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ: ವಿದ್ಯಾರ್ಥಿಗಳಲ್ಲಿ ಕನ್ನಡದ ಜ್ಞಾನ ಮೂಡಬೇಕು – ಬಿರಾದಾರ

ಮುದ್ದೇಬಿಹಾಳ : ವಿದ್ಯಾರ್ಥಿಗಳಲ್ಲಿ ಕನ್ನಡದ ಭಗ್ಗೆ ಜ್ಞಾನ ಹಾಗೂ ಆಸಕ್ತಿಯನ್ನು ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ಅವಶ್ಯವಾಗಿದೆ ಎಂದು ಕಸಾಪ ತಾಲೂಕಾ ಅಧ್ಯಕ್ಷರಾದ ಕಾಮರಾಜ ಬಿರಾದಾರ ಅವರು ನುಡಿದರು.

ಪಟ್ಟಣದ ಟಾಪ್ ಇನ್ ಟೌನ್ ಫಂಕ್ಷನ್‌ಹಾಲ್‌ನಲ್ಲಿ ಭಾನುವಾರದಂದು ಕಸಾಪ ತಾಲೂಕಾ ಘಟಕದ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ ತಾಲೂಕ ಮಟ್ಟದ ಕನ್ನಡ ರಸಪ್ರಶ್ನೆ ಸ್ಪರ್ಧೆಯಲ್ಲಿ ಅವರು ಮಾತನಾಡಿದರು.

ಕನ್ನಡವೆಂಬುದು ಹೃದಯದ ಭಾಷೆಯಾಗಿದೆ. ಅದನ್ನು ಯಾರೂ ಎಂದಿಗೂ ಮರೆಯಬಾರದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕನ್ನಡದ ಪುಸ್ತಕಗಳನ್ನು ಹೆಚ್ಚು ಹೆಚ್ಚು ಓದುವದರಿಂದ ಜೀವನದಲ್ಲಿ ಉತ್ತಮ ಸ್ಥಾನವನ್ನು ಸಾಧಿಸಲು ಸಾಧ್ಯ ಟಿವ್ಹಿ ಫೋನ್‌ನಲ್ಲಿ ಹೆಚ್ಚು ಸಮಯವನ್ನು ಕಳೆಯದೇ ಅಧ್ಯಯನದಲ್ಲಿ ಆಸಕ್ತಿಯನ್ನು ಬೆಳೆಸಿಕೊಂಡರೆ ನಮ್ಮ ಮಾತೃಭಾಷೆಯಾದ ಕನ್ನಡದ ಭಗ್ಗೆ ಗೌರವವನ್ನು ಹೆಚ್ಚಿಸಬಹುದಾಗಿದೆ. ಅದಕ್ಕಾಗಿ ಕಸಾಪ ವತಿಯಿಂದ ಮಕ್ಕಳಿಗಾಗಿ ರಸಪ್ರಶ್ನೆ ಸ್ಫರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ ಹಾಗೂ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಎಂ.ಎಂ. ಬೆಳಗಲ್ ಮಾತನಾಡಿ, ವಿದ್ಯಾರ್ಥಿಗಳ ಬೌದ್ದಿಕ ಮಟ್ಟದ ಸಾಮರ್ಥ್ಯವನ್ನು ಹೆಚ್ಚಿಸಲು ಕನ್ನಡದ ಸಾಹಿತ್ಯದ ಭಗ್ಗೆ ಅಭಿಮಾನವನ್ನು ಬೆಳೆಸುವಲ್ಲಿ ಇಂತಹ ಕನ್ನಡದಲ್ಲಿ ರಸಪ್ರಶ್ನೆ ಸ್ಪರ್ಧೆ ಸಹಕಾರಿಯಾಗಿದೆ ಎಂದು ಹೇಳಿದರು.

ಪುರಸಭಾ ಅಧ್ಯಕ್ಷ ಮಹಿಬೂಬ ಗೊಳಸಂಗಿ ಅವರು ಮಾತನಾಡಿ ಇಂತಹ ರಸಪ್ರಶ್ನೆ ಕಾರ್ಯಕ್ರಮಗಳು ಪಟ್ಟಣದಲ್ಲಿ ಹೆಚ್ಚು ನಡೆಯಬೇಕು ಇದು ಮಕ್ಕಳ ಕಲಿಕೆಯನ್ನು ಪರಿಣಾಮಕಾರಿಯನ್ನಾಗಿಸುವದ ಜೊತೆಗೆ ಕನ್ನಡದ ಭಗ್ಗೆ ನಮ್ಮ ಸಂಸ್ಕೃತಿಯ ಭಗ್ಗೆ ಅರಿಯಲು ಸಾಧ್ಯವಾಗುತ್ತದೆ ಎಂದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾದ್ಯಾಪಕ ಹೆಚ್.ಪಿ. ಹಡಪದ ಅವರು ನಿರ್ವಹಣೆ ಮಾಡಿದರು.

ಹಿರಿಯ ಸಾಹಿತಿ ಅಶೋಕ ಮಣಿ, ಶಂಕರ ಬೇವಿನಗಿಡದ, ಮಹಿಬೂಬ ಮುಲ್ಲಾ, ಕಸಾಪ ಗೌರವ ಸಲಹೆಗಾರರಾದ ಪ್ರಭುರಾಜ ಕಲ್ಬುರ್ಗಿ, ಗೌರವ ಕಾರ್ಯದರ್ಶಿಗಳಾದ ವೈ.ಎಚ್. ವಿಜಯಕರ, ಸಿದ್ದನಗೌಡ ಬಿಜ್ಜೂರ, ಪ್ರೋ. ಹಂಪಣ್ಣ, ಮಹಿಬೂಬ ಮುಲ್ಲಾ, ಗೌರವ ಕೋಶಾಧ್ಯಕ್ಷರಾದ ಜಹಾಂಗೀರ ಮುಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಹುಸೇನ ಬಾದಶಾ ಮುಲ್ಲಾ, ರಾಜು ಬಳ್ಳೊಳ್ಳಿ, ರಾಜು ಕಲಬುರ್ಗಿ, ಚಂದ್ರು ಕಲಾಲ, ಹರೀಶ ಬೇವೂರ, ಸಿದ್ದನಗೌಡ ಕಾಶಿನಕುಂಟಿ, ರಾಚಯ್ಯ ಹಿರೇಮಠ, ಶ್ರೀಶೈಲ ಕತ್ತಿ, ಹುಸೇನ್ ಮುಲ್ಲಾ, ಹಾಗೂ ಮುಖಂಡರು ಕನ್ನಡ ಸಾಹಿತ್ಯಾಭಿಮಾನಿಗಳು ಹಾಗೂ ಕಸಾಪ ಪದಾಧಿಕಾರಿಗಳು ಉಪಸ್ತಿತರಿದ್ದರು.

ಪ್ರಶಸ್ತಿ ವಿಜೇತ ತಂಡ: ಪ್ರಥಮ ಬಹುಮಾನ ಪ್ರಾರ್ಥನಾ ವಿದ್ಯಾಮಂದಿರ(ಮಾಸ್ತಿ ವೆಂಕಟೇಶ ಅಯ್ಯಂಗಾರ್ ತಂಡ), ದ್ವಿತೀಯ ಬಹುಮಾನ ಚಿನ್ಮಯಿ ಜೆಸಿ(ಗಿರೀಶ ಕಾರ್ನಾಡ್ ತಂಡ), ತೃತೀಯ ಬಹುಮಾನ ಶ್ರೀ ಶಾರದಾ ವಿದ್ಯಾಮಂದಿರ(ಚಂದ್ರಶೇಖರ ಕಂಬಾರ ತಂಡ) ಪದಕ ಹಾಗೂ ಟ್ರೋಫಿಗಳನ್ನು ಪಡೆದುಕೊಂಡವು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ ಸ್ಥಳೀಯ ಹಾಗೂ ಸುತ್ತಮುತ್ತಲಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ