R Ashok: President's rule should be brought in Karnataka: Leader of Opposition

R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಆದರೆ ಅವರು ಕಲ್ಲು ಹೊಡೆಯಿರಿ, ಟಯರ್‌ ಸುಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಬಿಜೆಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದೆ. ಈ ಸರ್ಕಾರವೇ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಕಾಂಗ್ರೆಸ್‌ ನಾಯಕರು, ತಮ್ಮವರು ಪ್ರತಿಭಟನೆ ಮಾಡುತ್ತಾರೆ, ನೀವು ಸಹಕಾರ ನೀಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಪೊಲೀಸರ ಕೈ ಕಟ್ಟಿ ಹಾಕಿ ಕಾನೂನು ಸುವ್ಯವಸ್ಥೆ ಹಾಳುಗೆಡವಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು R Ashok ಹೇಳಿದೆರು.

ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ 187 ಕೋಟಿ ರೂ. ಅಕ್ರಮ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ವತಃ ಲೂಟಿಕೋರರಾಗಿದ್ದು, ಅವರು ಅಧಿಕಾರದಿಂದ ಕೆಳಕ್ಕಿಳಿಯಬೇಕೆಂದು ಜನರು ಹೇಳುತ್ತಿದ್ದಾರೆ.

ಮುಖ್ಯಮಂತ್ರಿಯವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸದಿದ್ದರೂ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಕಳ್ಳತನ ಮಾಡಿದ್ದಾರೆ, ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಮುಖ್ಯಮಂತ್ರಿಯವರು ಶಾಸಕಾಂಗ ಪಕ್ಷದ ಬೆಂಬಲವನ್ನು ತೋರಿಸುತ್ತಿದ್ದಾರೆ. ಇದರಿಂದ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.

ವಿಧಾನಸಭೆಯಲ್ಲಿ ಮುಡಾ ಹಗರಣ ಕುರಿತು ಬಿಜೆಪಿ ಚರ್ಚಿಸಲು ಮುಂದಾದಾಗ ಸಿಎಂ ಸಿದ್ದರಾಮಯ್ಯ ಪಲಾಯನ ಮಾಡಿದ್ದಾರೆ. ಅಲ್ಲಿ 224 ಶಾಸಕರು, ಮಾಧ್ಯಮಗಳು, ಅಧಿಕಾರಿಗಳಿದ್ದರೂ, ಉತ್ತರ ನೀಡಲಿಲ್ಲ. ವಿರೋಧ ಪಕ್ಷವಾಗಿ ಕರ್ತವ್ಯದಂತೆ ಬಿಜೆಪಿ ಪಾದಯಾತ್ರೆ ಮಾಡಿದೆ. ಆದರೆ ಸರ್ಕಾರದ ಅಧಿಕಾರ ಬಳಸಿಕೊಂಡು ಕಾಂಗ್ರೆಸ್‌ ಸಮಾವೇಶ ಮಾಡಿದೆ. ಇದನ್ನು ಸರ್ಕಾರ ಎನ್ನುತ್ತಾರೆಯೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಕಾಂಗ್ರೆಸ್‌ ಸರ್ಕಾರದ ಹಗರಣದ ಕುರಿತು ಬಿಜೆಪಿ, ಜೆಡಿಎಸ್‌ ಮಾತ್ರ ಪ್ರತಿಭಟಿಸುತ್ತಿಲ್ಲ. ಮಾಧ್ಯಮಗಳು ನಮಗಿಂತ ಮೊದಲೇ ಹಗರಣದ ತನಿಖೆಯ ಸುದ್ದಿಗಳನ್ನು ಪ್ರಕಟ ಮಾಡಿವೆ. ಜನರಿಗೂ ಈಗ ಸರ್ಕಾರದ ಮೇಲೆ ಅನುಮಾನ ಬಂದಿದೆ. ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಟಿ.ಜೆ.ಅಬ್ರಹಾಂ ಕೋರಿದ್ದಾರೆಯೇ ಹೊರತು ಬಿಜೆಪಿ ಕಾರ್ಯಕರ್ತರು ಕೋರಿಕೆ ಸಲ್ಲಿಸಿಲ್ಲ. ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಜ್ಯಪಾಲರು ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು ಸರ್ಕಾರ ವಜಾ ಮಾಡಿಲ್ಲ ಎಂದರು.

ಬಿ.ಎಸ್‌.ಯಡಿಯೂರಪ್ಪ, ಎಲ್‌.ಕೆ.ಅಡ್ವಾಣಿ, ರಾಮಕೃಷ್ಣ ಹೆಗಡೆ ಅವರ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಸಚಿವ ಬಿ.ನಾಗೇಂದ್ರ ಅವರ ತಪ್ಪು ಇಲ್ಲವಾದರೆ ರಾಜೀನಾಮೆ ಕೊಟ್ಟಿದ್ದು ಏಕೆ? ದಲಿತರಾದರೆ ರಾಜೀನಾಮೆ ಕೊಡಬೇಕು. ಆದರೆ ಸಿದ್ದರಾಮಯ್ಯ ಮಾತ್ರ ರಾಜೀನಾಮೆ ಕೊಡಬಾರದು ಎಂದರೆ ಹೇಗೆ? 5 ಲಕ್ಷ ರೂ.ಗೆ ಜಮೀನು ಪಡೆದು 62 ಕೋಟಿ ರೂ. ಕೇಳುವ ಯೋಜನೆ ರಾಜ್ಯದಲ್ಲಿದ್ದರೆ ಎಲ್ಲರಿಗೂ ತಿಳಿಸಲಿ. ಇಂತಹ ಲೂಟಿಕೋರರಿಗೆ ಶಿಕ್ಷೆಯಾಗಬೇಕು ಎಂದರು.

ರಾಜ್ಯಪಾಲರ ಚಿತ್ರ ಸುಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಕಳೆದ ವರ್ಷ ಮಾಡಿದ ಪ್ರತಿಭಟನೆಗೆ ಈಗ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇಂತಹ ದ್ವೇಷ ರಾಜಕಾರಣ ಮಾಡುವ ಕಾಂಗ್ರೆಸ್‌ ನಾಯಕರು ಎಷ್ಟು ದಿನ ಅಧಿಕಾರದಲ್ಲಿರುತ್ತಾರೆ? ಅನ್ಯಾಯದ ವಿರುದ್ಧ, ಜನರ ಪರವಾಗಿ ಹೋರಾಡುವ ಹಕ್ಕು ವಿರೋಧ ಪಕ್ಷದಲ್ಲಿರುವ ಎಲ್ಲ ಶಾಸಕರಿಗೂ ಇದೆ. ಬಿಜೆಪಿ ಕೂಡ ಕಾನೂನು ಪ್ರಕಾರ ಮುಂದೆ ಹೆಜ್ಜೆ ಇಡಲಿದೆ ಎಂದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ