R Ashok: President's rule should be brought in Karnataka: Leader of Opposition

R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

R Ashok: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಕಾಂಗ್ರೆಸ್‌ ಸರ್ಕಾರ ಕಾನೂನು ಹಾಳುಗೆಡವಿದೆ. ಆದ್ದರಿಂದ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R Ashok) ಹೇಳಿದರು.

ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿ-ಜೆಡಿಎಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಪಮುಖ್ಯಮಂತ್ರಿಯೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕು. ಆದರೆ ಅವರು ಕಲ್ಲು ಹೊಡೆಯಿರಿ, ಟಯರ್‌ ಸುಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಇನ್ನಷ್ಟು ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನಲ್ ಗೆ ಸೇರಿ.. https://t.me/dcgkannada

ಬಿಜೆಪಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದೆ. ಈ ಸರ್ಕಾರವೇ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಕಾಂಗ್ರೆಸ್‌ ನಾಯಕರು, ತಮ್ಮವರು ಪ್ರತಿಭಟನೆ ಮಾಡುತ್ತಾರೆ, ನೀವು ಸಹಕಾರ ನೀಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಪೊಲೀಸರ ಕೈ ಕಟ್ಟಿ ಹಾಕಿ ಕಾನೂನು ಸುವ್ಯವಸ್ಥೆ ಹಾಳುಗೆಡವಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ತರಬೇಕೆಂದು ರಾಜ್ಯಪಾಲರಿಗೆ ಮನವಿ ಮಾಡುತ್ತೇನೆ ಎಂದು R Ashok ಹೇಳಿದೆರು.

ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ರೂ. ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ 187 ಕೋಟಿ ರೂ. ಅಕ್ರಮ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸ್ವತಃ ಲೂಟಿಕೋರರಾಗಿದ್ದು, ಅವರು ಅಧಿಕಾರದಿಂದ ಕೆಳಕ್ಕಿಳಿಯಬೇಕೆಂದು ಜನರು ಹೇಳುತ್ತಿದ್ದಾರೆ.

ಮುಖ್ಯಮಂತ್ರಿಯವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸದಿದ್ದರೂ ಅವರು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಕಳ್ಳತನ ಮಾಡಿದ್ದಾರೆ, ಲೂಟಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಮುಖ್ಯಮಂತ್ರಿಯವರು ಶಾಸಕಾಂಗ ಪಕ್ಷದ ಬೆಂಬಲವನ್ನು ತೋರಿಸುತ್ತಿದ್ದಾರೆ. ಇದರಿಂದ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.

ವಿಧಾನಸಭೆಯಲ್ಲಿ ಮುಡಾ ಹಗರಣ ಕುರಿತು ಬಿಜೆಪಿ ಚರ್ಚಿಸಲು ಮುಂದಾದಾಗ ಸಿಎಂ ಸಿದ್ದರಾಮಯ್ಯ ಪಲಾಯನ ಮಾಡಿದ್ದಾರೆ. ಅಲ್ಲಿ 224 ಶಾಸಕರು, ಮಾಧ್ಯಮಗಳು, ಅಧಿಕಾರಿಗಳಿದ್ದರೂ, ಉತ್ತರ ನೀಡಲಿಲ್ಲ. ವಿರೋಧ ಪಕ್ಷವಾಗಿ ಕರ್ತವ್ಯದಂತೆ ಬಿಜೆಪಿ ಪಾದಯಾತ್ರೆ ಮಾಡಿದೆ. ಆದರೆ ಸರ್ಕಾರದ ಅಧಿಕಾರ ಬಳಸಿಕೊಂಡು ಕಾಂಗ್ರೆಸ್‌ ಸಮಾವೇಶ ಮಾಡಿದೆ. ಇದನ್ನು ಸರ್ಕಾರ ಎನ್ನುತ್ತಾರೆಯೇ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Heart attack: ಸಿಎಂ‌ ಪರ ಸುದ್ದಿಗೋಷ್ಠಿ ವೇಳೆ ಹೃದಯಾಘಾತ.. ಸ್ಥಳದಲ್ಲಿಯೇ ವ್ಯಕ್ತಿ ಓರ್ವ ದುರ್ಮರಣ..! Video

ಕಾಂಗ್ರೆಸ್‌ ಸರ್ಕಾರದ ಹಗರಣದ ಕುರಿತು ಬಿಜೆಪಿ, ಜೆಡಿಎಸ್‌ ಮಾತ್ರ ಪ್ರತಿಭಟಿಸುತ್ತಿಲ್ಲ. ಮಾಧ್ಯಮಗಳು ನಮಗಿಂತ ಮೊದಲೇ ಹಗರಣದ ತನಿಖೆಯ ಸುದ್ದಿಗಳನ್ನು ಪ್ರಕಟ ಮಾಡಿವೆ. ಜನರಿಗೂ ಈಗ ಸರ್ಕಾರದ ಮೇಲೆ ಅನುಮಾನ ಬಂದಿದೆ. ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಟಿ.ಜೆ.ಅಬ್ರಹಾಂ ಕೋರಿದ್ದಾರೆಯೇ ಹೊರತು ಬಿಜೆಪಿ ಕಾರ್ಯಕರ್ತರು ಕೋರಿಕೆ ಸಲ್ಲಿಸಿಲ್ಲ. ಸಾರ್ವಜನಿಕರು, ಸಾಮಾಜಿಕ ಕಾರ್ಯಕರ್ತರು ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ರಾಜ್ಯಪಾಲರು ತನಿಖೆಗೆ ಅವಕಾಶ ನೀಡಿದ್ದಾರೆಯೇ ಹೊರತು ಸರ್ಕಾರ ವಜಾ ಮಾಡಿಲ್ಲ ಎಂದರು.

ಬಿ.ಎಸ್‌.ಯಡಿಯೂರಪ್ಪ, ಎಲ್‌.ಕೆ.ಅಡ್ವಾಣಿ, ರಾಮಕೃಷ್ಣ ಹೆಗಡೆ ಅವರ ಮೇಲೆ ಆರೋಪ ಬಂದಾಗ ರಾಜೀನಾಮೆ ಪಡೆಯಲಾಗಿತ್ತು. ಸಚಿವ ಬಿ.ನಾಗೇಂದ್ರ ಅವರ ತಪ್ಪು ಇಲ್ಲವಾದರೆ ರಾಜೀನಾಮೆ ಕೊಟ್ಟಿದ್ದು ಏಕೆ? ದಲಿತರಾದರೆ ರಾಜೀನಾಮೆ ಕೊಡಬೇಕು. ಆದರೆ ಸಿದ್ದರಾಮಯ್ಯ ಮಾತ್ರ ರಾಜೀನಾಮೆ ಕೊಡಬಾರದು ಎಂದರೆ ಹೇಗೆ? 5 ಲಕ್ಷ ರೂ.ಗೆ ಜಮೀನು ಪಡೆದು 62 ಕೋಟಿ ರೂ. ಕೇಳುವ ಯೋಜನೆ ರಾಜ್ಯದಲ್ಲಿದ್ದರೆ ಎಲ್ಲರಿಗೂ ತಿಳಿಸಲಿ. ಇಂತಹ ಲೂಟಿಕೋರರಿಗೆ ಶಿಕ್ಷೆಯಾಗಬೇಕು ಎಂದರು.

ರಾಜ್ಯಪಾಲರ ಚಿತ್ರ ಸುಡುವುದು ಸಂವಿಧಾನಕ್ಕೆ ಮಾಡುವ ಅಪಚಾರ. ಕಳೆದ ವರ್ಷ ಮಾಡಿದ ಪ್ರತಿಭಟನೆಗೆ ಈಗ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇಂತಹ ದ್ವೇಷ ರಾಜಕಾರಣ ಮಾಡುವ ಕಾಂಗ್ರೆಸ್‌ ನಾಯಕರು ಎಷ್ಟು ದಿನ ಅಧಿಕಾರದಲ್ಲಿರುತ್ತಾರೆ? ಅನ್ಯಾಯದ ವಿರುದ್ಧ, ಜನರ ಪರವಾಗಿ ಹೋರಾಡುವ ಹಕ್ಕು ವಿರೋಧ ಪಕ್ಷದಲ್ಲಿರುವ ಎಲ್ಲ ಶಾಸಕರಿಗೂ ಇದೆ. ಬಿಜೆಪಿ ಕೂಡ ಕಾನೂನು ಪ್ರಕಾರ ಮುಂದೆ ಹೆಜ್ಜೆ ಇಡಲಿದೆ ಎಂದರು.

Latest News

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಸದಾ ಮುಖ ಗಂಟು ಹಾಕಿಕೊಂಡು ಇರಬೇಡಿ-ಜಯಸಿದ್ದೇಶ್ವರ ಶ್ರೀ

ಮುದ್ದೇಬಿಹಾಳ : ಹಣ, ಆಸ್ತಿ, ಅಂತಸ್ತು, ಐಶ್ವರ್ಯ, ಉದ್ಯೋಗ ಮುಂತಾದವುಗಳ ಕೊರತೆಯಿಂದ ಮನುಷ್ಯ ಬಡವನಾಗುವುದಿಲ್ಲ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಏಳನೇ ಚಾತುರ್ಮಾಸ್ಯ ಕಾರ್ಯಕ್ರಮಕ್ಕೆ ಚಾಲನೆ: ಹುಣಶಿಹೊಳೆ ಕಣ್ವಮಠದ ವಿದ್ಯಾಕಣ್ವವಿರಾಜ್ ತೀರ್ಥರ ಭವ್ಯ ಮೆರವಣಿಗೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಆ.8 ರಂದು ಪದ ಪ್ರದಾನ,ಜಾನಪದ ಬುಡಕಟ್ಟು ದಿನಾಚರಣೆ

ಮುದ್ದೇಬಿಹಾಳ : ಕನ್ನಡ ಜಾನಪದ ಪರಿಷತ್ ತಾಲೂಕು ಘಟಕದ ಉದ್ಘಾಟನೆ,ಪದ ಪ್ರದಾನ ಹಾಗೂ ಜಾನಪದ

ಅಂತರ್‌ರಾಜ್ಯ ಕಳ್ಳರ ಬಂಧನ :                                       ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಅಂತರ್‌ರಾಜ್ಯ ಕಳ್ಳರ ಬಂಧನ : ಬಸರಕೋಡದ ಪವಾಡ ಬಸವೇಶ್ವರರ ಮೂರ್ತಿ ಕರಗಿಸಿ ಮಾರಿದ್ದ ಗಟ್ಟಿ ಬೆಳ್ಳಿ ವಶಕ್ಕೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ): ತಾಲ್ಲೂಕಿನ ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಳ್ಳತನ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ ಕ್ಷೇತ್ರದಿಂದ ಶೇ.82.47 ರಷ್ಟು ಪ್ರಗತಿ ಸಾಧನೆ

ಮುದ್ದೇಬಿಹಾಳ : ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಮತಗಟ್ಟೆ ಅಧಿಕಾರಿಗಳು ಉತ್ತಮ ಸೇವೆ ಸಲ್ಲಿಸುತ್ತಿದ್ದು ಈವರೆಗೆ ಶೇ.82.47ರಷ್ಟು ಗಣತಿ ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಬಿ.ಎ.ಸೌದಾಗರ ಹೇಳಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಎಸ್.ಆಯ್.ಆರ್ ಪ್ರಕ್ರಿಯೆಯಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಿದ ಮೇಲ್ವಿಚಾರಕರು,ಬಿಎಲ್‌ಓಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗೈರು ಹಾಜರಿ 1483, ಶಾಶ್ವತವಾಗಿ ಸ್ಥಳಾಂತರಗೊAಡವರು 16331,8505 ಮತದಾರರು ಮರಣ ಹೊಂದಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಬಿಎಲ್‌ಓಗಳ ಸಹಕಾರದಿಂದ ಉತ್ತಮ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

58 ವರ್ಷಗಳ ಬಳಿಕ ಮುದ್ದೇಬಿಹಾಳದಲ್ಲಿ ಚಾತುರ್ಮಾಸ್ಯ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದಲ್ಲಿ ಸುಮಾರು 58 ವರ್ಷಗಳ ಬಳಿಕ ಪ್ರಥಮವಾಗಿ ಹುಣಶಿಹೊಳೆ ಕಣ್ವಮಠದ ಪೀಠಾಧಿಕಾರಿಗಳಾದ ವಿದ್ಯಾಕಣ್ವವಿರಾಜ್ ತೀರ್ಥ ಶ್ರೀಗಳು ತಮ್ಮ ಏಳನೇ ಚಾತುರ್ಮಾಸ್ಯವನ್ನು ಆ.8 ರಿಂದ ಸೆ.26ರವರೆಗೆ ಕೈಗೊಳ್ಳಲಿದ್ದಾರೆ ಎಂದು ಮಹೋತ್ಸವ ಸಮೀತಿ ಅಧ್ಯಕ್ಷ ಅನೀಲಕುಮಾರ ಕುಲಕರ್ಣಿ ಹೇಳಿದರು. ಪಟ್ಟಣದ ಪಟ್ಟಣದ ಶ್ರೀ ಶಿವ ಚಿದಂಬರ ದೇವಸ್ಥಾನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಸಪ್ತಮ ಚಾತುರ್ಮಾಸ್ಯದ ಕುರಿತು ಅವರು ವಿವರಿಸಿದರು.ಮುದ್ದೇಬಿಹಾಳ ಪಟ್ಟಣದಲ್ಲಿ ಸುಮಾರು 58 ವರ್ಷಗಳ ಹಿಂದೆ ಹುಣಶಿಹೊಳೆ ಕಣ್ವಮಠದ ವಿದ್ಯಾತಪೋನಿಧಿ