ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 11 ರನ್ಗಳ ಗೆಲುವು ಸಾಧಿಸಿದೆ.
ತವರಿನಂಗಳದಲ್ಲಿ ಆರ್.ಸಿ.ಬಿ ಸತತ ಮೂರು ಸೋಲುಗಳ ನಂತರ ಪುಟಿದೆದ್ದು, ನಾಲ್ಕನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗಿಳಿದ ಆರ್.ಸಿ.ಬಿ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಅಬ್ಬರದ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 205 ರನ್ ಕಲೆಹಾಕಿತು. ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಗೆಲ್ಲಲು 206 ರನ್ಗಳ ಬೃಹತ್ ಗುರಿಯನ್ನು ನೀಡಿತ್ತು.
ಬೃಹತ್ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಲಷ್ಟೇ ಶಕ್ತವಾಯಿತು.
ಕೊನೆಯಲ್ಲಿ ಗೆಲ್ಲಲು 12 ಎಸೆತಗಳಲ್ಲಿ 18 ರನ್ ಅಗತ್ಯವಿದ್ದಾಗ 19ನೇ ಓವರ್ ಬೌಲಿಂಗ್ ಮಾಡಿದ ಜೋಶ್ ಹೇಜಲ್ವುಡ್ ಕೇವಲ ಒಂದು ರನ್ ನೀಡಿ, ಧ್ರುವ್ ಜುರೆಲ್ ವಿಕೆಟ್ ಪಡೆದು ಪಂದ್ಯದ ದಿಕ್ಕನ್ನೇ ಬದಲಿಸಿದರು.