Rahul vs Modi: ಪ್ರಧಾನಿ ಮೋದಿಗೆ ವಾರ್ನಿಂಗ್ ಕೊಟ್ಟ ರಾಹುಲ್ ಗಾಂಧಿ!

Rahul vs Modi: ಪ್ರಧಾನಿ ಮೋದಿಗೆ ವಾರ್ನಿಂಗ್ ಕೊಟ್ಟ ರಾಹುಲ್ ಗಾಂಧಿ!

ದೆಹಲಿ: ಹಿಂಡೆನ್ ಬರ್ಗ್ ವರದಿ ಆಧರಿಸಿ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಹೆಚ್ಚು ಅಪಾಯವಿದೆ ಎಂದು ನಿಮ್ಮ ಗಮನಕ್ಕೆ ತರುವುದು ವಿರೋಧ ಪಕ್ಷದ ನಾಯಕನಾಗಿ ನನ್ನ ಕರ್ತವ್ಯವಾಗಿದೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ (Rahul vs Modi) ಅವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಸುದ್ದಿಗಾರರೊಂದಿಗೆ ಭಾರತೀಯ ಷೇರುಪೇಟೆ ಕುರಿತು ಹಿಂಡೆನ್ ಬರ್ಗ್ ನೀಡಿರುವ ವರದಿ ಕುರಿತು ಮಾತನಾಡಿದ ಅವರು, ಮಾರುಕಟ್ಟೆಯನ್ನು ನಿಯಂತ್ರಿಸುವ ಸಂಸ್ಥೆಗಳು ರಾಜಿ ಮಾಡಿಕೊಳ್ಳುತ್ತವೆ ಎಂದು ಆರೋಪಿಸಿದ್ದಾರೆ.

Join Our Telegram: https://t.me/dcgkannada

ಅದಾನಿ ಸಮೂಹದ ವಿರುದ್ಧದ ಸಾಗರೋತ್ತರ ವ್ಯವಹಾರವು ಕಾನೂನು ಬಾಹಿರವಾಗಿದೆ ಎಂಬ ಆರೋಪ ದೊಡ್ಡಮಟ್ಟದಲ್ಲಿ ಕೇಳಿ ಬಂದಿದೆ. ಅಷ್ಟೇ ಅಲ್ಲದೇ SEBI ಅಧ್ಯಕ್ಷೆ ಮಾಧಬಿ ಬುಚ್ ಮತ್ತು ಅವರ ಪತಿಯು ಈ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ಹಿಂಡೆನ್ ಬರ್ಗ್ ಆರೋಪಿಸಿದೆ ಎಂದು ವಾದ ಮಾಡಿದ್ದಾರೆ.

ದೇಶಾದ್ಯಂತ ಪ್ರಾಮಾಣಿಕ ಹೂಡಿಕೆದಾರರು ಸರ್ಕಾರಕ್ಕೆ ಈ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಹೂಡಿಕೆದಾರರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಕಳೆದುಕೊಂಡರೆ ಅದಕ್ಕೆ ಯಾರು ಹೊಣೆಗಾರರಾಗುತ್ತಾರೆ? ಸೆಬಿ ಅಧ್ಯಕ್ಷರೇ ಅಥವಾ ಗೌತಮ್ ಅದಾನಿಯೇ? ಎಂದು ಖಡಕ್ ಆಗಿ ಪ್ರಶ್ನೆ ಎತ್ತಿದ್ದಾರೆ.

ಇದನ್ನೂ ಓದಿ: BJP: ಕರ್ನಾಟಕ ಬಿಜೆಪಿ ನಾಯಕರಿಗೆ ಸೆಡ್ಡು; ಸಭೆ ಸೇರಿದ ಅತೃಪ್ತರು..!

ಆರೋಪ ಬಂದ ಮೇಲೆ ಸೆಬಿ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಇನ್ನೂ ಏಕೆ ರಾಜೀನಾಮೆ ನೀಡಲಿಲ್ಲ? ಈ ವಿಷಯವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ತನಿಖೆಗೆ ಮುಂದಾಗುತ್ತದಾ ಎಂದು ಪ್ರಶ್ನಿಸಿದ್ದಾರೆ.

ಈ ಮೂಲಕ ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ‌ (RAHUL vs Modi) ಅವರ ಸರ್ಕಾರಕ್ಕೆ ಉತ್ತಮ ಆಡಳಿತ ನೀಡಿ ಎಂದು ಎಚ್ಚರಿಕೆ ನೀಡಿದ್ದಾರೆ.

Latest News

ಮುದ್ದೇಬಿಹಾಳ : TAPCMS  ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : TAPCMS ಆಡಳಿತ ಮತ್ತೆ ಮನೋಹರ ಮೇಟಿ ‘ಕೈ’ಗೆ

ಮುದ್ದೇಬಿಹಾಳ : ಇಲ್ಲಿನ ಟಿ.ಎ.ಪಿ.ಸಿ.ಎಂ.ಎಸ್ ಆಡಳಿತ ಮತ್ತೆ ಎರಡನೇ ಬಾರಿಗೆ ಅಧ್ಯಕ್ಷರಾಗಿ ಮನೋಹರ ಮೇಟಿ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ :            ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿಗೆ ಆಯ್ಕೆ : ಕರ್ನಾಟಕ ತಂಡಕ್ಕೆ ಮುದ್ದೇಬಿಹಾಳದ ಮೂವರು ಆಟಗಾರರ ಆಯ್ಕೆ

ಮುದ್ದೇಬಿಹಾಳ : ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಗುಡಿಮನಿಗೆ ಕರ್ನಾಟಕ ವಾಲ್ಮೀಕಿ ರತ್ನ ಪ್ರಶಸ್ತಿ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯಿತಿ ನೌಕರ ಎಂ.ಕೆ.ಗುಡಿಮನಿ ಅವರಿಗೆ 2025ನೇ ಸಾಲಿನ

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ  200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿನಲ್ಲಿ ಸನ್ಮಾನ ಕಾರ್ಯಕ್ರಮ: 2026ಕ್ಕೆ 200 ಮೆಡಿಕಲ್ ಸೀಟು ಆಯ್ಕೆಯ ಗುರಿ-ಅಮೀತಗೌಡ ಪಾಟೀಲ್

ಮುದ್ದೇಬಿಹಾಳ : ಉತ್ತರ ಕರ್ನಾಟಕ ಭಾಗದಲ್ಲಿ ಅತೀ ಹೆಚ್ಚು ಮೆಡಿಕಲ್ ಸೀಟುಗಳನ್ನು ಪಡೆದುಕೊಳ್ಳುವಲ್ಲಿ ಹಿರಿಮೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಹಲವು ಕ್ರಮ: ಸಚಿವ ಲಾಡ್

ಯಾದಗಿರಿ, ಅಕ್ಟೋಬರ್.15: ರಾಜ್ಯದ ಅಸಂಘಟಿತ ವಲಯದ ಎಲ್ಲ ವರ್ಗಗಳ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸ್ಥಾಪಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಗುರುತಿಸಿರುವ 101 ಅಸಂಘಟಿತ ಕಾರ್ಮಿಕ ವರ್ಗಗಳ ಕಾರ್ಮಿಕರು ತಕ್ಷಣ ನೋಂದಣಿ ಮಾಡಿಕೊಂಡು ಸ್ಮಾರ್ಟ್ ಕಾರ್ಡ್ ಮೂಲಕ ಸವಲತ್ತುಗಳ ಲಾಭ ಪಡೆದುಕೊಳ್ಳುವಂತೆ ರಾಜ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಹೇಳಿದರು. ನಗರದ ಶುಭಂ ಪೆಟ್ರೋಲ್ ಪಂಪ್ ಹಿಂಭಾಗದ, ಪಾಟೀಲ್ ಕನ್ವೆನ್ಷನ್