Rain effect Water on road in Hungunda market

Rain Alert: ಮುಂದಿನ 48 ಗಂಟೆ ಭಾರೀ ಮಳೆ

Rain Alert: ಮುಂದಿನ 48 ಗಂಟೆ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ (Rain Alert) ಜೋರಾಗಿದೆ. ಈ ಮತ್ತೆ ವರುಣ ಅಬ್ಬರಿಸಲು ಸಜ್ಜಾಗಿದ್ದಾನೆ.

ಕಳೆದ ಕೆಲವು ದಿನಗಳಿಂದ ಹಿಂಗಾರು ಮಳೆಯ ಆರ್ಭಟ ಕಡಿಮೆ ಆಗುತ್ತಿತ್ತು. ಹೀಗಾಗಿ ಇನ್ನೇನು ಈ ವರ್ಷ ಮಳೆಗಾಲ ಮುಗಿದೇ ಹೋಯಿತು ಬಿಡು ಅಂತಾ ಕನ್ನಡಿಗರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಮಳೆ ಮಾತ್ರ ಮತ್ತೆ ತನ್ನ ಆರ್ಭಟ ತೋರಿಸಲು ಶುರು ಮಾಡಲಿ ಎನ್ನುತ್ತಿದೆ ಹವಾಮಾನ ಇಲಾಖೆ ವರದಿ.

ಅದರಲ್ಲೂ ಮುಂದಿನ 48 ಗಂಟೆ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ(Rain Alert) ಸುರಿಯುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದಲ್ಲಿ ಸಾಮಾನ್ಯವಾಗಿ ಹಿಂಗಾರು ಮಳೆ ಅಬ್ಬರಿಸುವುದಿಲ್ಲ. ಹೀಗಾಗಿ ನಮ್ಮ ಕನ್ನಡ ನಾಡಿಗೆ ಮುಂಗಾರು ಮಳೆಯೇ ಗಟ್ಟಿ. ಅಕಸ್ಮಾತ್ ಮುಂಗಾರು ಮಳೆ ಸುರಿಯದಿದ್ದರೆ ಬರ ಗ್ಯಾರಂಟಿ.

ಆ ವರ್ಷ ಕುಡಿಯುವ ನೀರಿಗೂ ಸಮಸ್ಯೆ ಪಕ್ಕಾ ಅಂತಾರೆ ಹವಾಮಾನ ತಜ್ಞರು. ಹೀಗಿದ್ದಾಗ ದಿಢೀರ್ ಅಂತಾ ಕರ್ನಾಟಕದಲ್ಲಿ ಭರ್ಜರಿಯಾಗಿ ಹಿಂಗಾರು ಮಳೆ ಕೂಡ ಅಬ್ಬರ ತೋರಿಸುತ್ತಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

48 ಗಂಟೆ ಕಾಲ ಭಾರಿ ಮಳೆ (Rain Alert)

ಈಗ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಕಾಣುತ್ತಿದ್ದು, ಮತ್ತೆ ಮಳೆ ಅಬ್ಬರ ಜೋರಾಗುವ ಮುನ್ಸೂಚನೆ ಸಿಗುತ್ತಿದೆ. ಇದೀಗ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲೂ ಭಾರಿ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಲಾಗಿದೆ. ನಮ್ಮ ಬೆಂಗಳೂರಿನ ಕಥೆ ಏನು? ಬೆಂಗಳೂರಿನಲ್ಲಿ ಕೂಡ ಮಳೆ ಸುರಿಯುತ್ತಾ ಎಂಬುದು ಕುತೂಹಲ ಮೂಡಿಸಿದೆ.

ಬೆಂಗಳೂರಲ್ಲಿ ಮಳೆ ಬೀಳುತ್ತಾ?

ಮುಂದಿನ 48 ಗಂಟೆ ಕಾಲ ದಕ್ಷಿಣ ಕರ್ನಾಟಕದ ರಾಜ್ಯಗಳು ಸೇರಿದಂತೆ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ. ಹಾಗೇ ಕನ್ನಡಿಗರ ರಾಜಧಾನಿಗೂ ಮಳೆ ಕಂಟಕ ಇದ್ದು, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳ ಜೊತೆಗೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೂಡ ಮೋಡ ಕವಿದ ವಾತಾವರಣದ ಜೊತೆಗೆ ಮಳೆ ಸುರಿಯುವ ಮುನ್ಸೂಚನೆ ಇದೆ.

ಹೊರಗೆ ಹೋಗುವಾಗ ಎಚ್ಚರ..!

ಹಿಂಗಾರು ಮಳೆ ಜೋರಾಗಿ ಶುರುವಾಗಿ ಹಲವು ದಿನಗಳೇ ಕಳೆದಿದ್ದು, ಕರ್ನಾಟಕದಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಧ್ಯ ಮಧ್ಯದಲ್ಲಿ ಹಿಂಗಾರು ಮಳೆ ಒಂದಷ್ಟು ಬ್ರೇಕ್ ಪಡೆದರೂ ಅದರ ಆರ್ಭಟಕ್ಕೆ ಸಮಸ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಕಳೆದ 2 ವಾರಗಳಿಂದ ಮಳೆ ಅಬ್ಬರ ತೋರಿಸಿ ಭಯ ಮೂಡಿಸಿದೆ. ಇದೀಗ ಮುಂದಿನ ಕೆಲವು ದಿನಗಳ ಕಾಲ ಮತ್ತೆ ಭರ್ಜರಿ ಮಳೆ ಬೀಳುವ ಭಯ ಆವರಿಸಿದ್ದು, ಮಳೆ ಬೀಳುವ ಸಮಯದಲ್ಲಿ ಎಚ್ಚರಿಕೆ ವಹಿಸಬೇಕಿದೆ.

Latest News

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಪತ್ರಕರ್ತ ಮುರಾಳಗೆ ರಾಜ್ಯಮಟ್ಟದ ಮಹಾಂತ ಶ್ರೀ ಪ್ರಶಸ್ತಿ

ಮುದ್ದೇಬಿಹಾಳ : ರಾಯಚೂರಿನ ಸಿದ್ದರಾಮ ಜಮ್ಮಲದಿನ್ನಿ ಕಲ್ಯಾಣ ಮಂಟಪದಲ್ಲಿ ನಡೆದ ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ :                   ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿ ಪ್ರದಾನ : ಶಿಕ್ಷಣ ಸಂಸ್ಥೆ ಬೆಳೆಸುವುದು ಸಾಹಸದ ಕಾರ್ಯ-ಧಮ್ಮೂರಮಠ

ಮುದ್ದೇಬಿಹಾಳ : ನಗರ ಪ್ರದೇಶಗಳಲ್ಲಾದರೆ ಸಂಸ್ಥೆಗಳು ಕೇಳಿದಷ್ಟು ಶುಲ್ಕ ಕೊಡಲು ಪಾಲಕರು ಸಿದ್ಧರಿರುತ್ತಾರೆ.ಅಲ್ಲಿ ಶಿಕ್ಷಣ

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪಕದನಕ್ಕೆ ಮಹೂರ್ತ ಫಿಕ್ಸ್..

ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಶಾಸಕರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ

ಟಗರಿನ ಕಾಳಗ ಪ್ರಮುಖ ಆಕರ್ಷಣೆ:                              ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಟಗರಿನ ಕಾಳಗ ಪ್ರಮುಖ ಆಕರ್ಷಣೆ: ಮುದ್ದೇಬಿಹಾಳ : ಮಾ.18 ರಂದು ಪಿಲೇಕೆಮ್ಮ ದೇವಿ ಜಾತ್ರಾ ಮಹೋತ್ಸವ

ಮುದ್ದೇಬಿಹಾಳ : ಪಟ್ಟಣದ ಪಿಲೇಕೆಮ್ಮ ನಗರದಲ್ಲಿರುವ ಪಿಲೇಕೆಮ್ಮ ದೇವಿ ಜಾತ್ರಾಮಹೋತ್ಸವ ಮಾ.18 ಹಾಗೂ 19ರಂದು

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಪತ್ರಕರ್ತರಾದ ದಫೇದಾರ,ಉಕ್ಕಲಿ,ಹೋರಾಟಗಾರ ನಾಟೀಕಾರ ಸೇರಿ 30 ಜನ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕಿನ ಹುಲ್ಲೂರು ಗ್ರಾಮದ ಚೆನ್ನಬಸವ ಶ್ರೀ ಏಜ್ಯೂಕೇಷನ ರೂರಲ್ ಕಲ್ಚರಲ್ ಸೊಸೈಟಿಯಿಂದ ಪ್ರತಿ ವರ್ಷ ಕೊಡಮಾಡುವ ರಾಜ್ಯಮಟ್ಟದ ಚೆನ್ನಬಸವ ಶ್ರೀ ಪ್ರಶಸ್ತಿಗೆ ಮಾಧ್ಯಮ, ಸಂಕೀರ್ಣ,ಶಿಕ್ಷಣ,ಸಾಮಾಜಿಕ ಹೋರಾಟ ಕ್ಷೇತ್ರಗಳಿಂದ ಒಟ್ಟು 30 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮುದ್ದೇಬಿಹಾಳ ತಾಲ್ಲೂಕಿನ ಹಂಡರಗಲ್‌ದಲ್ಲಿ ತ್ರಿಕೂಟೇಶ್ವರ ದೇವಸ್ಥಾನದ ಉಳಿವು,ಜೀರ್ಣೋದ್ಧಾರಕ್ಕೆ ಹೋರಾಟ ಮಾಡಿದ ಕುಮಾರಸ್ವಾಮಿ ಹಿರೇಮಠ, ಮಾಧ್ಯಮ ಕ್ಷೇತ್ರದಲ್ಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ:                     ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಒಲೆಯ ಮೇಲೆ ರೊಟ್ಟಿ ಬೇಯಿಸಿ ಪ್ರತಿಭಟನೆ: ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ

ಮುದ್ದೇಬಿಹಾಳ : ದೇಶವನ್ನು ಆಳುತ್ತಿರುವ ಪ್ರಧಾನ ನರೇಂದ್ರ ಮೋದಿ ಅವರಿಗೆ ಬಡವರು,ಮಧ್ಯಮ ವರ್ಗದವರದ್ದು ಆಲೋಚನೆ ಇಲ್ಲ.ಅಧಿಕಾರಕ್ಕೆ ಬಂದ ಮೊದಲ ದಿನದಿಂದ ಇದುವರೆಗೂ ಏನೂ ಮಾಡಿಲ್ಲ.ಸಿಲಿಂಡರ್ ದೊರೆಯದಂತಹ ಪರಿಸ್ಥಿತಿ ತಂದಿಟ್ಟಿದ್ದು ತುರ್ತು ಸ್ಥಿತಿ ನಿಭಾಯಿಸಲು ಆಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ತೊಲಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಸಚೀನಗೌಡ ಪಾಟೀಲ ಹೇಳಿದರು. ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಎನ್.ಎಸ್.ಯೂ.ಐ., ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್‌ನಿAದ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ