Rain effect: Tree fell due to heavy rain, crop flooded

Rain effect: ಭಾರೀ ಮಳೆಗೆ ಉರುಳಿಬಿದ್ದ ಮರ, ಬೆಳೆ ಜಲಾವೃತ (ವಿಡಿಯೋ ನೋಡಿ)

Rain effect: ಭಾರೀ ಮಳೆಗೆ ಉರುಳಿಬಿದ್ದ ಮರ, ಬೆಳೆ ಜಲಾವೃತ (ವಿಡಿಯೋ ನೋಡಿ)

ಮುದ್ದೇಬಿಹಾಳ : ತಾಲ್ಲೂಕಿನಾದ್ಯಂತ ಬುಧವಾರ ರಾತ್ರಿ ಸುರಿದ ಭಾರೀ ಮಳೆ, ಬೀಸಿದ ಬಿರುಗಾಳಿಗೆ ಹಲವೆಡೆ ಬೆಳೆಗಳು ನೆಲಕ್ಕಚ್ಚಿದ್ದು (Rain update) ಮರವೊಂದು ಬಿದ್ದು ರಸ್ತೆ ಸಂಚಾರ ಸ್ಥಗಿತಗೊಂಡ ಘಟನೆ ವರದಿಯಾಗಿದೆ.

Join Our Telegram: https://t.me/dcgkannada

ತಾಲ್ಲೂಕಿನ ಇಂಗಳಗೇರಿ ಗ್ರಾಮದಲ್ಲಿ ಶಂಕರಗೌಡ ಪಾಟೀಲ್ ಎಂಬುವರ ಜಮೀನಿನಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಭಾರೀ ಬಿರುಗಾಳಿಗೆ ನೆಲಕ್ಕಚ್ಚಿದ್ದು ಲಕ್ಷಾಂತರ ರೂಪಾಯಿ ಕಬ್ಬು ಬೆಳೆ ಹಾನಿಯಾಗಿದೆ. (Rain update)

ಗುಡ್ನಾಳದಿಂದ ಇಂಗಳಗೇರಿಗೆ ಹೋಗುವ ರಸ್ತೆ ಮಧ್ಯೆ ಆಲದ ಗಿಡವೊಂದು ಉರುಳಿ ಬಿದ್ದು ಎರಡು ಗ್ರಾಮಗಳ ಸಂಪರ್ಕ ಅರ್ಧ ದಿನ ಬಂದ್ ಆಗಿತ್ತು.ಬಳಿಕ ಅರಣ್ಯ ಇಲಾಖೆ,ಪಂಚಾಯಿತಿಯವರು ಹಾಗೂ ಸ್ಥಳೀಯ ರೈತರ ಸಹಾಯದಿಂದ ರಸ್ತೆ ಮಧ್ಯೆ ಬಿದ್ದಿದ್ದ ಗಿಡವನ್ನು ತೆರವುಗೊಳಿಸಲಾಯಿತು.

ಮಧ್ಯರಾತ್ರಿ ಸುರಿದ ಮಳೆಯಿಂದಾಗಿ ವಿದ್ಯುತ್ ಸ್ಥಗಿತಗೊಳಿಸಲಾಯಿತು. ಮಧ್ಯರಾತ್ರಿಯೂ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಸರಬರಾಜು ಮಾಡಲು ನಿದ್ದೆಬಿಟ್ಟು ಕೆಲಸ ಮಾಡಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಬೆಳೆ ಜಲಾವೃತ :

ತಾಲ್ಲೂಕಿನ ನಾಗರಬೆಟ್ಟ ಗ್ರಾಮದ ಮಾಳಪ್ಪ ಮುರಾಳ ಅವರ ಸರ್ವೆ ನಂ.102/2ರಲ್ಲಿ ಬೆಳೆದಿದ್ದ ತೊಗರಿ ಬೆಳೆ ಜಲಾವೃತಗೊಂಡಿದೆ.

ಅರಸನಾಳದಿಂದ ನಾಗರಬೆಟ್ಟದವರೆಗೆ ಕಾಲುವೆ ಕಾಮಗಾರಿ ಕೈಗೊಳ್ಳದೇ ಇರುವುದರಿಂದ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾಳಾಗುತ್ತಿದೆ.ಇದಕ್ಕೆ ಸರ್ಕಾರ ಕೂಡಲೇ ಮಧ್ಯೆಪ್ರವೇಶಿಸಿ ಪರಿಹಾರ ನೀಡಬೇಕು ಎಂದು ರೈತ ಮಾಳಪ್ಪ ಮುರಾಳ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ BSYಗೆ ಬಿಗ್ ರಿಲೀಫ್!

ಇನ್ನುಳಿದಂತೆ ಮುದ್ದೇಬಿಹಾಳ ತಾಲ್ಲೂಕಿನ ಬಹುತೇಕ ಎಲ್ಲ ಕಡೆ ಮಳೆಯಾಗಿದ್ದು ಜಮೀನುಗಳಲ್ಲಿ ನೀರು ಸಂಗ್ರಹವಾಗಿದೆ.

Latest News

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಜಾನುವಾರುಗಳಿಗೆ ಕುಡಿವ ನೀರು ಸೌಲಭ್ಯ ಕಲ್ಪಿಸಿ

ಮುದ್ದೇಬಿಹಾಳ : ಬೇಸಿಗೆಯ ಧಗೆಯಲ್ಲಿ ಪ್ರಾಣಿ ಪಕ್ಷಿಗಳು ಕುಡಿಯುವ ನೀರು, ಆಹಾರ ಇಲ್ಲದೇ ಬಹಳ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಬಂಜಾರ ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಮೋತಿಲಾಲ  ಚವ್ಹಾಣರಿಗೆ  ಸನ್ಮಾನ

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರ ತಾಂಡಾ(ವೆಂಕಟೇಶ ನಗರ) ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಬಸು

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಶಾಸಕ ನಾಡಗೌಡರ ಮನೆಗೆ ನನ್ನ ಚಪ್ಪಲಿಯೂ ಹೋಗಿಲ್ಲ-ಎ.ಎಸ್.ಪಾಟೀಲ ನಡಹಳ್ಳಿ

ಮುದ್ದೇಬಿಹಾಳ : ತಮಗೆ ಸಾಷ್ಟಾಂಗ ಹಾಕಿರುವುದಾಗಿ ಸುಳ್ಳು ಹೇಳಿಕೆ ಕೊಡುವುದನ್ನು ಮೊದಲು ಶಾಸಕ ನಾಡಗೌಡರು

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ತಂಗಡಗಿಯಲ್ಲಿ 26 ಜೋಡಿ ನವಜೀವನಕ್ಕೆ ಪದಾರ್ಪಣೆ

ಮುದ್ದೇಬಿಹಾಳ : ಇಂದಿನ ರಾಜಕಾರಣಿಗಳು ತಮ್ಮ ಮಕ್ಕಳ ಮದುವೆಗಳನ್ನು ದುಂದುವೆಚ್ಚದಲ್ಲಿ ಮಾಡುವಬದಲು ಅದೇ ಖರ್ಚಿನಲ್ಲಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

SSLC ಪರೀಕ್ಷೆ : ಶಿಕ್ಷಣ ಸಚಿವರಿಗೆ ಅಭಿನಂದನೆ ತಿಳಿಸಿದ ವಿದ್ಯಾರ್ಥಿನಿ

ಮುದ್ದೇಬಿಹಾಳ : ಪಟ್ಟಣದ ಐದು ಪರೀಕ್ಷಾ ಕೇಂದ್ರಗಳು ಸೇರಿದಂತೆ ಮುದ್ದೇಬಿಹಾಳ,ತಾಳಿಕೋಟಿ,ನಾಗರಬೆಟ್ಟ ಪರೀಕ್ಷಾ ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಗಳು ಅತ್ಯಂತ ಬಿಗಿ ಭದ್ರತೆಯಲ್ಲಿ ಕಟ್ಟುನಿಟ್ಟಾಗಿ ನಡೆದಿರುವುದಾಗಿ ವರದಿಯಾಗಿದೆ. ಪಟ್ಟಣದ ವಿಬಿಸಿ ಪ್ರೌಢಶಾಲೆ,ಜ್ಞಾನ ಭಾರತಿ ವಿದ್ಯಾಮಂದಿರ, ಚಿನ್ಮಯ ಜೆ.ಸಿ.ಆಂಗ್ಲಮಾಧ್ಯಮ ಪ್ರೌಢಶಾಲೆ,ಸ್ವಾಮಿ ವಿವೇಕಾನಂದ ಪ್ರೌಢಶಾಲೆ ಶಿರೋಳ,ಅಭ್ಯುದಯ ಆಂಗ್ಲಮಾಧ್ಯಮ ಪ್ರೌಢಶಾಲೆ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲೂ ಯಾವುದೇ ಗೊಂದಲವಿಲ್ಲದೇ ಕಟ್ಟುನಿಟ್ಟಾಗಿ ಪರೀಕ್ಷೆಗಳು ನಡೆದಿವೆ ಎಂದು ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಧ್ಯಕ್ಷರು,ತಹಶೀಲ್ದಾರ್ ಕೀರ್ತಿ ಚಾಲಕ ತಿಳಿಸಿದರು.

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ ಮಾಡಬೇಕು ಎಂದು ಸಿಪಿಐ ಮೊಹ್ಮದ್ ಫಸಿವುದ್ದೀನ್ ಹೇಳಿದರು. ಪಟ್ಟಣದ ಹುಡ್ಕೋದಲ್ಲಿರುವ ಉದ್ಯಮಿ ಅಯ್ಯೂಬ ಮನಿಯಾರ್ ಅವರ ಮನಿಯಾರ್ ಚಾರಿಟೇಬಲ್ ಟ್ರಸ್ಟ್ನಿಂದ ಮಂಗಳವಾರ ರಂಜಾನ್ ಹಬ್ಬದ ನಿಮಿತ್ಯ ಬಡವರಿಗೆ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮನಿಯಾರ್ ಅವರು ತಮ್ಮ ತಂದೆ ತಾಯಿ ಸ್ಮರಣಾರ್ಥ ಈ ಕಿಟ್‌ಗಳನ್ನು ವಿತರಿಸುತ್ತಿದ್ದಾರೆ.ಆರ್ಥಿಕ ಸಬಲತೆ ಸಾಧಿಸಿದವರು ಇಂತಹ ಕಾರ್ಯಗಳನ್ನು ಮಾಡುತ್ತಿದ್ದರೆ