Rain forest: Gujarat achieved a thrilling victory

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮಳೆ ಕಾಟ : ರೋಚಕ‌ ಜಯ ಸಾಧಿಸಿದ ಗುಜರಾತ್

ಮುಂಬೈ: ದ್ವೀತಿಯಾರ್ಧದಲ್ಲಿ ಎರಡು ಬಾರಿ ಮಳೆ ಕಾಡಿದರೂ ಗುಜರಾತ್ ತಂಡ ಮುಂಬೈ ವಿರುದ್ಧ ರೋಚಕ ಜಯ ಗಳಿಸಿದೆ. ಎರಡು ಬಾರಿ ಮಳೆಯ ಆಡಚಣೆಯ ಹೊರತಾಗಿಯೂ ಕೊನೆಯವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ ಕಡಿಮೆ ಮೊತ್ತದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ದ ಗುಜರಾತ್‌ ಟೈಟನ್ಸ್‌ ತಂಡ ಡಿಎಲ್ಎಸ್ ನಿಯಮದ ಪ್ರಕಾರ 3 ವಿಕೆಟ್‌ ಗೆಲುವು ಸಾಧಿಸಿತು.

ಮುಂಬೈನ ವಾಖಂಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟಾನ್ಸ್ ನಡುವೆ ಪಂದ್ಯ ಜರುಗಿತ್ತು. ಟಾಸ್ ಗೆದ್ದು ಗುಜರಾತ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲಿಗೆ ಬ್ಯಾಟಿಂಗ್ ಆರಂಭಿಸಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ ಕಲೆ ಹಾಕಿತು. 156 ರನ್ ಗಳ ಗುರಿ ಬೆನ್ನತ್ತಿದ್ದ ಗುಜರಾತ್‌ ತಂಡ, ಸುಲಭವಾಗಿ ಗೆಲುವು ಪಡೆಯಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಮುಂಬೈನ ಶಿಸ್ತುಬದ್ದ ದಾಳಿಯ ನಡುವೆಯೂ ಗುಜರಾತ್ ತಂಡ ರೋಚಕ ಜಯ ಸಾಧಿಸಿದೆ.

ಗುಜರಾತ್‌ ತಂಡ 18 ಓವರ್‌ಗಳಿಗೆ 6 ವಿಕೆಟ್‌ ನಷ್ಟಕ್ಕೆ 132 ರನ್‌ಗಳನ್ನು ಕಲೆ ಹಾಕಿತ್ತು. ಆ ಮೂಲಕ ಗುಜರಾತ್ ಗೆ ಕೊನೆಯ 12 ಎಸೆತಗಳಲ್ಲಿ 24 ರನ್‌ ಅಗತ್ಯವಿತ್ತು. ಈ ವೇಳೆ ಎರಡನೇ ಬಾರಿ ಮಳೆ ಬಂದ ಕಾರಣ ಪಂದ್ಯವನ್ನು ನಿಲ್ಲಿಸಲಾಯಿತು. ಮಳೆ ನಿಂತ ಬಳಿಕ ಪಂದ್ಯವನ್ನು 19 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ಆ ಮೂಲಕ ಕೊನೆಯ ಓವರ್‌ನಲ್ಲಿ ಗುಜರಾತ್‌ಗೆ 15 ರನ್‌ ಅಗತ್ಯವಿತ್ತು. ಕೊನೆಯ ಓವರ್‌ನಲ್ಲಿ ದೀಪಕ್‌ ಚಹರ್‌ಗೆ ರಾಹುಲ್‌ ತೆವಾಟಿಯಾ ಬೌಂಡರಿ ಸೇರಿ 5 ರನ್‌ ಗಳಿಸಿದರೆ, ಜೆರಾಲ್ಡ್‌ ಕೋಯೆಡ್ಜಿ ಸಿಕ್ಸರ್‌ ಬಾರಿಸಿದ್ದರು. ನಂತರ ಕೊನೆಯ ಎರಡು ಎಸೆತಗಳಲ್ಲಿ ಒಂದು ರನ್‌ ಬೇಕಿದ್ದಾಗ ಕೊಯೆಡ್ಜಿ ವಿಕೆಟ್‌ ಒಪ್ಪಿಸಿದರು. ನಂತರ ಕ್ರೀಸ್‌ಗೆ ಬಂದಿದ್ದ ಅರ್ಷದ್‌ ಒಂದು ರನ್‌ ಗಳಿಸಿ ಗುಜರಾತ್‌ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು. ಗುಜರಾತ್ 19 ಓವರ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು 147 ರನ್‌ಗಳನ್ನು ಗಳಿಸಿ ಗೆದ್ದು ಬೀಗಿತು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ