ಬೆಂಗಳೂರು: ತುಮಕೂರು, ಬಳ್ಳಾರಿ ಸೇರಿ ರಾಜ್ಯದ ಒಂಬತ್ತಕ್ಕೂ ಹೆಚ್ಚು ಜಿಲ್ಲೆಗಳಲ್ಲಿ (Rain update) ಸೋಮವಾರ ರಾತ್ರಿಯಿಂದ ಮಂಗಳವಾರ ಮುಂಜಾನೆವರೆಗೆ ಭರ್ಜರಿಯಾಗಿ ಮಳೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ಮನೆಗೋಡೆ ಕುಸಿದು ವಿಕಲಾಂಗ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ತುಮಕೂರು, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ, ಬೆಂಗಳೂರು ಗ್ರಾಮಾ-ನಗರ, ವಿಜಯ ನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ ಎಂದು ವರದಿಯಾಗಿದೆ.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಸುಮಾರು 60 ಮನೆ, 40ಕ್ಕೂ ಅಧಿಕ ಅಂಗಡಿಗಳಿಗೆ ನೀರುನುಗ್ಗಿದೆ. ಕೊರಟಗೆರೆ ಯಲ್ಲಿ ಕೇವಲ 2 ಗಂಟೆ ಅವಧಿಯಲ್ಲಿ 637ಮೀ.ಮೀ ಮಳೆಬಿದ್ದಿದೆ ಎಂದು ತಿಳಿದು ಬಂದಿದೆ.
Join Our Telegram: https://t.me/dcgkannada
ಇನ್ನು, ಬಳ್ಳಾರಿಯಲ್ಲಿ ಭಾರೀ ಮಳೆಗೆ 9 ಸಂಪರ್ಕ ಸೇತುವೆಗಳು ಮುಳು ಗಿದ್ದು, ಆಂಧ್ರಪ್ರದೇಶ ಸಂಪರ್ಕಿಸುವ ಸೇತುವೆ ಮೇಲೂ ನೀರು ಹರಿದು ಕೆಲಕಾಲ ವಾಹನ ಸಂಚಾರ ಬಂದ್ ಆಗಿದೆ. ಜಿಲ್ಲೆಯಲ್ಲಿ 5 ವಿದ್ಯುತ್ ಟ್ರಾನ್ಸ್ಫಾರ್ಮರ್, 51 ವಿದ್ಯುತ್ ಕಂಬಗಳು ಧರೆಗುರುಳಿದ್ದು, ಹೊಲಗದ್ದೆಗಳಿಗೂ ನೀರು ನುಗ್ಗಿದೆ. ವಿಜಯನಗರ ಜಿಲ್ಲೆಯ ಹಂಪಿ ಬಳಿಯ ಕಮಲಾಪುರ ಕೆರೆ ಕೋಡಿಬಿದ್ದು ನೂರಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಧವಸ ಧಾನ್ಯಗಳು ಹಾಳಾಗಿವೆ ಎನ್ನಲಾಗಿದೆ.
23 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ:
ರಾಜಧಾನಿ ಬೆಂಗಳೂರು ಸೇರಿ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಲಕ್ಷಣ ಇರುವುದರಿಂದ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗ ಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. (Rain update)
ಅದೇ ರೀತಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: Death news: ನೀರಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ
ಗುರುವಾರದಿಂದ ಉತ್ತರ ಒಳನಾಡು ಭಾಗದ ಜಿಲ್ಲೆಗಳು, ಶುಕ್ರವಾರದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.